Homeಮುಖಪುಟರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

ರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬಂಗಾಳದಲ್ಲಿ ಪ್ರಚಾರ ಮಾಡಿದ್ದು, ಅಸನ್ಸೋಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೆಚ್ಚಿನ ಜನಸಮೂಹವನ್ನು ನೋಡಿ, ನಾನು ಇಂತಹ ರ‍್ಯಾಲಿ ಎಂದೂ ನೋಡಿರಲಿಲ್ಲ ಎಂದು ಉದ್ಘರಿಸಿದ್ದಾರೆ. ನಂತರ ಕಾಂಗ್ರೆಸ್ ಸೇರಿದಂತೆ ಹಲವರು ಇದನ್ನು ವ್ಯಾಪಕವಾಗಿ ಟೀಕಿಸಿದ್ದು, ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೀರೊಗೆ ಹೋಲಿಕೆ ಮಾಡಿದೆ.

ಒಂದು ದಿನದಲ್ಲಿ ಭಾರತವು 2.6 ಲಕ್ಷ ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ ಮತ್ತು ಸಕ್ರಿಯ ಪ್ರಕರಣಗಳು ಹೆಚ್ಚಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16.8 ಲಕ್ಷ ತಲುಪಿರುವಾಗ ಪ್ರಧಾನಿ ಭಾರಿ ಜನಸ್ತೋಮ ಸೇರಿದ್ದನ್ನು ಹೊಗಳಿದ್ದು ಕೆಲವರ ಟೀಕೆಗೆ ಕಾರಣವಾಗಿದೆ.
ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೋರೊಗೆ ಹೋಲಿಸಿ ಟ್ವಿಟರ್‌ನಲ್ಲಿ ವಿಡಿಯೋ ಒಂದನ್ನು ಹಾಕಿ ವ್ಯಂಗ್ಯ ಮಾಡಿದೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ನಾನು ಎರಡು ಬಾರಿ ಇಲ್ಲಿಗೆ ಬಂದಿದ್ದೇನೆ. ಕೊನೆಯ ಬಾರಿ ನಾನು ಬಾಬುಲ್ಜಿಗೆ (ಅಸನ್ಸೋಲ್ ಸಂಸದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ) ಮತ ಕೇಳಲು ಬಂದಿದ್ದೆ. ಆಗ ಜನಸಮೂಹವು ಇದರಲ್ಲಿ ಕಾಲು ಭಾಗ ಮಾತ್ರವಿತ್ತು’ ಎಂದು ಅವರು ಹೇಳಿದರು.

“ಆದರೆ ಇಂದು, ಎಲ್ಲಾ ದಿಕ್ಕುಗಳಲ್ಲಿಯೂ ನಾನು ಅಪಾರ ಜನಸಂದಣಿಯನ್ನು ನೋಡುತ್ತಿದ್ದೇನೆ … ಮೊದಲ ಬಾರಿಗೆ ಇಂತಹ ರ‍್ಯಾಲಿಗೆ ಸಾಕ್ಷಿಯಾಗಿದ್ದೇನೆ… ಇಂದು, ನೀವು ನಿಮ್ಮ ಶಕ್ತಿಯನ್ನು ತೋರಿಸಿದ್ದೀರಿ. ಮುಂದಿನ ಹಂತವು ಹೆಚ್ಚು ಮುಖ್ಯವಾಗಿದೆ – ಹೋಗಿ ಮತ ಚಲಾಯಿಸಿ ಇತರರನ್ನು ಸಹ ನಿಮ್ಮ ಜೊತೆ ಕರೆದೊಯಿರಿ’ ಎಂದು ಪ್ರಧಾನಿ ಮೋದಿ ಹೇಳಿದರು. ಏಪ್ರಿಲ್ 26 ರಂದು ಅಸನ್ಸೋಲ್‌ನಲ್ಲಿ ಮತದಾನ ನಡೆಯಲಿದೆ.

ಸೋಂಕಿನ ಎರಡನೇ ಅಲೆಯನ್ನು ದೇಶವು ಎದುರಿಸುತ್ತಿರುವ ಕಾರಣ ಚುನಾವಣಾ ರ‍್ಯಾಲಿಗಳಲ್ಲಿ ಪ್ರಧಾನಮಂತ್ರಿ ನಿರಂತರವಾಗಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ.
ರಾಜ್ಯ ಚುನಾವಣೆಗೆ ಪ್ರಚಾರ ಮಾಡುತ್ತಿರುವ ಪ್ರಧಾನಿ ಮತ್ತು ಇತರ ರಾಜಕೀಯ ಮುಖಂಡರನ್ನು ಸ್ಪಷ್ಟವಾಗಿ ಟೀಕಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ: “ಇಂತಹ ದೊಡ್ಡ ಸಂಖ್ಯೆಯ ಅನಾರೋಗ್ಯ ಪೀಡಿತರು ಮತ್ತು ದಾಖಲೆಯ ಸಾವುಗಳು ಕಂಡುಬರುತ್ತಿರುವುದು ಇದೇ ಮೊದಲು” ಎಂದು ಅವರು ಪ್ರಧಾನಿಗೆ ಕುಟುಕಿದ್ದಾರೆ. ಅಲ್ಲದೇ ತಮ್ಮ ಬಂಗಾಳದ ಎಲ್ಲಾ ಚುನಾವಣಾ ರ‍್ಯಾಲಿಗಳನ್ನು ರಾಹುಲ್ ರದ್ದು ಮಾಡಿದ್ದಾರೆ.

“ರೋಮ್ ಸುಟ್ಟುಹೋದಾಗ (ಚಕ್ರವರ್ತಿ) ನೀರೋ ಪಿಟೀಲು ಬಾರಿಸಿದಂತೆ ಸಾಂಕ್ರಾಮಿಕ ಸಮಯದಲ್ಲಿ ಪ್ರಚಾರಕ್ಕೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿಯನ್ನು ಟೀಕಿಸಿದ ಕಾಂಗ್ರೆಸ್ ಟ್ವಿಟ್ಟರ್‌ನಲ್ಲಿ ಎರಡೂವರೆ ನಿಮಿಷಗಳ ವೀಡಿಯೊವನ್ನು ಪೋಸ್ಟ್ ಮಾಡಿದೆ.
ಬಿಜೆಪಿ, ಕಾಂಗ್ರೆಸ್, ಮತ್ತು ಬಂಗಾಳದ ಆಡಳಿತಾರೂಡ ತೃಣಮೂಲ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಚುನಾವಣಾ ರ‍್ಯಾಲಿಗಳಲ್ಲಿ ಕೊವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿಲ್ಲ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...