Homeಮುಖಪುಟ25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

- Advertisement -
- Advertisement -

ಇಸ್ರೇಲಿ ಮೂಲದ ಸಂಸ್ಥೆಯಾದ NSO ಗ್ರೂಪ್‌‌ನವರು ಬೇಹುಗಾರಿಕಾ ಸಾಫ್ಟ್‌ವೇರ್ ಆದ ಪೆಗಾಸಸ್ ಅನ್ನು ಖರೀದಿಸುವಂತೆ ತಮ್ಮ ಸರ್ಕಾರಕ್ಕೆ ಕೆಲವು ವರ್ಷಗಳ ಹಿಂದೆ ಪ್ರಸ್ತಾಪ ಇಟ್ಟಿದ್ದರು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಆದರೆ ಎನ್‌ಎಸ್‌ಒ ಗ್ರೂಪ್‌ನ ಈ ಪ್ರಸ್ತಾಪವನ್ನು ತಾನು ತಿರಸ್ಕರಿಸಿದ್ದಾಗಿ ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, “ಎನ್‌ಎಸ್‌ಒ ತಮ್ಮ ಸಾಫ್ಟ್‌ವೇರ್ (ಪೆಗಾಸಸ್ ಸ್ಪೈವೇರ್) ಅನ್ನು ಮಾರಾಟ ಮಾಡಲು ನಮ್ಮ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿದ್ದರು. ಐದು ವರ್ಷಗಳ ಹಿಂದೆಯೇ 25 ಕೋಟಿಗೆ ಬೇಡಿಕೆ ಇಟ್ಟಿದ್ದರು. ಈ ಪ್ರಸ್ತಾಪ ನನಗೆ ಬಂದಿತ್ತು. ಆದರೆ ನಾನು ಅಂತಹ ಸಾಫ್ಟ್‌ವೇರ್‌ಗಳನ್ನು ಖರೀದಿಸಲು ಬಯಸುವುದಿಲ್ಲ ಎಂದು ಎಂದು ಹೇಳಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಇಸ್ರೇಲಿ ಬೇಹುಗಾರಿಕಾ ಸಾಫ್ಟ್‌ವೇರ್‌ ಆಗಿರುವ ಪೆಗಾಸಸ್ ಅನ್ನು ಭಾರತದಲ್ಲಿನ ಕೆಲವು ಜನರ ಕಣ್ಗಾವಲುಗಾಗಿ ಬಳಸಲಾಗಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್‌‌ಗೆ ಸಲ್ಲಿಸಲಾಗಿರುವ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿರುವಾಗಲೆ ಮಮತಾ ಬ್ಯಾನರ್ಜಿ ಅವರು ಈ ಗಂಭೀರ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

“ದೇಶವಿರೋಧಿ ಚಟುವಟಿಕೆಗಳು ಮತ್ತು ಭದ್ರತೆಗಾಗಿ ಅವುಗಳನ್ನು ಬಳಸುವುದು ಬೇರೆಯೆ ವಿಷಯವಾಗಿದೆ. ಆದರೆ ಅದನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಅಧಿಕಾರಿಗಳು ಮತ್ತು ನ್ಯಾಯಾಧೀಶರ ಮೇಲೆ ಬಳಸಲಾಗುತ್ತಿದೆ, ಇದು ಸ್ವೀಕಾರಾರ್ಹವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

ಪೆಗಾಸಸ್‌ನ ಸಾಲು ಎಂದರೇನು?

ಕಳೆದ ವರ್ಷ, ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟವು 300 ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳು ಪೆಗಾಸಸ್ ಸ್ಪೈವೇರ್ ಬಳಸಿ ಕಣ್ಗಾವಲು ಮಾಡುವ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿವೆ ಎಂದು ವರದಿ ಮಾಡಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಇಬ್ಬರು ಕೇಂದ್ರ ಸಚಿವರ (ಅಶ್ವಿನಿ ವೈಷ್ಣವ್ ಮತ್ತು ಪ್ರಹ್ಲಾದ್ ಪಟೇಲ್) ಫೋನ್ ಸಂಖ್ಯೆಗಳು ಸೋರಿಕೆಯಾದ ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು.

ಆದರೆ 2021ರ ಜುಲೈನಲ್ಲಿ ಕೇಂದ್ರ ಸರ್ಕಾರವು ಈ ಬೇಹುಗಾರಿಕೆ ಆರೋಪಗಳನ್ನು ತಳ್ಳಿಹಾಕಿತ್ತು. ಐಟಿ ಸಚಿವಾಲಯವು ಯಾವುದೆ ‘ಅನಧೀಕೃತ ಅನಧಿಕೃತ ಕಣ್ಗಾವಲು ಮಾಡಲಾಗುತ್ತಿಲ್ಲ’ ಇಲ್ಲ ಎಂದು ಹೇಳಿದೆ.

ಈ ಮಧ್ಯೆ, ಇಸ್ರೇಲಿ ಮೂಲದ ಪೆಗಾಸಸ್‌ ತಯಾರಕ ಸಂಸ್ಥೆಯಾದ NSO ಗ್ರೂಪ್, ತನ್ನ ಸ್ಪೈವೇರ್ ‌ಅನ್ನು ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳನ್ನು ಎದುರಿಸಲು ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ನೀಡುವುದಾಗಿ ಹೇಳಿದ್ದು, ಇದನ್ನು ತಾವು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದಾಗಿ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...