Homeಮುಖಪುಟ25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

- Advertisement -
- Advertisement -

ಇಸ್ರೇಲಿ ಮೂಲದ ಸಂಸ್ಥೆಯಾದ NSO ಗ್ರೂಪ್‌‌ನವರು ಬೇಹುಗಾರಿಕಾ ಸಾಫ್ಟ್‌ವೇರ್ ಆದ ಪೆಗಾಸಸ್ ಅನ್ನು ಖರೀದಿಸುವಂತೆ ತಮ್ಮ ಸರ್ಕಾರಕ್ಕೆ ಕೆಲವು ವರ್ಷಗಳ ಹಿಂದೆ ಪ್ರಸ್ತಾಪ ಇಟ್ಟಿದ್ದರು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಆದರೆ ಎನ್‌ಎಸ್‌ಒ ಗ್ರೂಪ್‌ನ ಈ ಪ್ರಸ್ತಾಪವನ್ನು ತಾನು ತಿರಸ್ಕರಿಸಿದ್ದಾಗಿ ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, “ಎನ್‌ಎಸ್‌ಒ ತಮ್ಮ ಸಾಫ್ಟ್‌ವೇರ್ (ಪೆಗಾಸಸ್ ಸ್ಪೈವೇರ್) ಅನ್ನು ಮಾರಾಟ ಮಾಡಲು ನಮ್ಮ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿದ್ದರು. ಐದು ವರ್ಷಗಳ ಹಿಂದೆಯೇ 25 ಕೋಟಿಗೆ ಬೇಡಿಕೆ ಇಟ್ಟಿದ್ದರು. ಈ ಪ್ರಸ್ತಾಪ ನನಗೆ ಬಂದಿತ್ತು. ಆದರೆ ನಾನು ಅಂತಹ ಸಾಫ್ಟ್‌ವೇರ್‌ಗಳನ್ನು ಖರೀದಿಸಲು ಬಯಸುವುದಿಲ್ಲ ಎಂದು ಎಂದು ಹೇಳಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಇಸ್ರೇಲಿ ಬೇಹುಗಾರಿಕಾ ಸಾಫ್ಟ್‌ವೇರ್‌ ಆಗಿರುವ ಪೆಗಾಸಸ್ ಅನ್ನು ಭಾರತದಲ್ಲಿನ ಕೆಲವು ಜನರ ಕಣ್ಗಾವಲುಗಾಗಿ ಬಳಸಲಾಗಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್‌‌ಗೆ ಸಲ್ಲಿಸಲಾಗಿರುವ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿರುವಾಗಲೆ ಮಮತಾ ಬ್ಯಾನರ್ಜಿ ಅವರು ಈ ಗಂಭೀರ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

“ದೇಶವಿರೋಧಿ ಚಟುವಟಿಕೆಗಳು ಮತ್ತು ಭದ್ರತೆಗಾಗಿ ಅವುಗಳನ್ನು ಬಳಸುವುದು ಬೇರೆಯೆ ವಿಷಯವಾಗಿದೆ. ಆದರೆ ಅದನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಅಧಿಕಾರಿಗಳು ಮತ್ತು ನ್ಯಾಯಾಧೀಶರ ಮೇಲೆ ಬಳಸಲಾಗುತ್ತಿದೆ, ಇದು ಸ್ವೀಕಾರಾರ್ಹವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

ಪೆಗಾಸಸ್‌ನ ಸಾಲು ಎಂದರೇನು?

ಕಳೆದ ವರ್ಷ, ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟವು 300 ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳು ಪೆಗಾಸಸ್ ಸ್ಪೈವೇರ್ ಬಳಸಿ ಕಣ್ಗಾವಲು ಮಾಡುವ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿವೆ ಎಂದು ವರದಿ ಮಾಡಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಇಬ್ಬರು ಕೇಂದ್ರ ಸಚಿವರ (ಅಶ್ವಿನಿ ವೈಷ್ಣವ್ ಮತ್ತು ಪ್ರಹ್ಲಾದ್ ಪಟೇಲ್) ಫೋನ್ ಸಂಖ್ಯೆಗಳು ಸೋರಿಕೆಯಾದ ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು.

ಆದರೆ 2021ರ ಜುಲೈನಲ್ಲಿ ಕೇಂದ್ರ ಸರ್ಕಾರವು ಈ ಬೇಹುಗಾರಿಕೆ ಆರೋಪಗಳನ್ನು ತಳ್ಳಿಹಾಕಿತ್ತು. ಐಟಿ ಸಚಿವಾಲಯವು ಯಾವುದೆ ‘ಅನಧೀಕೃತ ಅನಧಿಕೃತ ಕಣ್ಗಾವಲು ಮಾಡಲಾಗುತ್ತಿಲ್ಲ’ ಇಲ್ಲ ಎಂದು ಹೇಳಿದೆ.

ಈ ಮಧ್ಯೆ, ಇಸ್ರೇಲಿ ಮೂಲದ ಪೆಗಾಸಸ್‌ ತಯಾರಕ ಸಂಸ್ಥೆಯಾದ NSO ಗ್ರೂಪ್, ತನ್ನ ಸ್ಪೈವೇರ್ ‌ಅನ್ನು ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳನ್ನು ಎದುರಿಸಲು ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ನೀಡುವುದಾಗಿ ಹೇಳಿದ್ದು, ಇದನ್ನು ತಾವು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದಾಗಿ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...