Homeಕರ್ನಾಟಕ'ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ': ರಮೇಶ್ ಜಾರಕಿಹೊಳಿ

‘ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ’: ರಮೇಶ್ ಜಾರಕಿಹೊಳಿ

ಡಿ.ಕೆ ಶಿವಕುಮಾರ್ ಸೋಲಿಸಲು ಕುಮಾರಸ್ವಾಮಿಗೆ ಬೆಂಬಲ ನೀಡಲು ಸಿದ್ದನಿದ್ದೇನೆ. ನನ್ನ ತಮ್ಮನನ್ನು ಕನಕಪುರದಲ್ಲಿ ಕಣಕ್ಕಿಳಿಸುತ್ತೇನೆ..

- Advertisement -
- Advertisement -

ಲೈಂಗಿಕ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ವಾಗ್ದಾಳಿ ನಡೆಸಿದ್ದು, ಆತನೇ ಮಹಾನ್ ನಾಯಕನಾಗಿದ್ದು, ಕನಕಪುರಕ್ಕೆ ಬಂದು ಹೋರಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ನಮ್ಮ ಬಳಿ 11 ಆಧಾರಗಳಿವೆ. ಆ ಮಹಾನ್ ನಾಯಕ ನರೇಶ್ ಜೊತೆ ಸಂಬಂಧವಿರುವುದನ್ನು ಒಪ್ಪಿಕೊಂಡಿದ್ದಾರೆ. ಆ ಯುವತಿ ನಮ್ಮ ಮನೆಗೆ ಬಂದಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರನ್ನು ಒದ್ದು ಒಳಗೆ ಹಾಕಬೇಕು, ಆ ಯುವತಿಯ ಮೇಲೆ ಕ್ರಮ ಕೈಗೊಳ್ಳಬೇಕು. ನಾನು ತಪ್ಪು ಮಾಡಿದ್ದರೆ ನನ್ನನ್ನು ಒದ್ದು ಒಳಗೆ ಹಾಕಬೇಕು” ಎಂದಿದ್ದಾರೆ.

ಆ ಯುವತಿ ಎಸ್ಟಿ ಜಾತಿ ಎಂಬುದು ನನಗೆ ಗೊತ್ತಿರಲಿಲ್ಲ. ಇಂದು ಆಕೆಯ ಪೋಷಕರು ಬಂದು ಪತ್ರಿಕಾಗೋಷ್ಠಿ ನಡೆಸಿ ಅದನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ ಅಟ್ರಾಸಿಟಿ ಕಾಯ್ದೆ ಮೂಲಕ ಡಿ.ಕೆ ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಆತ ಒಬ್ಬ ಗಾಂಡು, ಅವ ಗಂಡಸಲ್ಲ, ನಾನು ಗಂಡಸು ರಾಜಕಾರಣಿ ಆಗಲಿಕ್ಕೆ ನಾಲಾಯಕ್, ಅವನಿಗೆ ಮಾಫಿ ಎನ್ನುವುದು ಇಲ್ಲ. ಆತನನ್ನು ರಾಜೀನಾಮೆ ಕೊಡಿಸುವಂತೆ ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡುತ್ತೇನೆ ಎಂದರು.

ಆ ಯುವತಿಯ ಪೋಷಕರಿಗೆ ನಾನು ಧನ್ಯವಾದ ಹೇಳುತ್ತೀನಿ. ಆಕೆಯ ಸಹೋದರನೇ ಎಲ್ಲಾ ಹೇಳಿದ್ದೇನೆ. ಅವರಿಗೆ ಮತ್ತೊಮ್ಮೆ ಥ್ಯಾಂಕ್ಸ್ ಹೇಳುತ್ತೀನಿ ಎಂದು ಪೋಷಕರಿಗೆ ಪದೇ ಪದೇ ಧನ್ಯವಾದ ತಿಳಿಸಿದರು.

ಆ ಪೋಷಕರನ್ನು ಕರೆತಂದು ನೀವೆ ಪ್ರೆಸ್ ಮೀಟ್ ಮಾಡಿಸಿದ್ದೀರಿ ಅಂತ ಆರೋಪವಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇರಬಹುದು ಎಂದರು. ಆದರೆ ನಮ್ಮ ಕುಟುಂಬ ಯಾವ ಹುಡುಗಿಗೂ ಮೋಸ ಮಾಡಿಲ್ಲ. ನನಗೆ ಹೆದರಿಕೆ ಇಲ್ಲ.. ನಾನು ಕನಕಪುರಕ್ಕೆ ಬಂದು ತೋರಿಸುತ್ತೇನೆ, ಅವನ ವಿರುದ್ಧ ಹೋರಾಡುತ್ತೇನೆ. ಅವನನ್ನು ಸೋಲಿಸಲು ಕುಮಾರಸ್ವಾಮಿಗೆ ಬೆಂಬಲ ನೀಡಲು ಸಿದ್ದನಿದ್ದೇನೆ. ನನ್ನ ತಮ್ಮನನ್ನು ಕನಕಪುರದಲ್ಲಿ ಕಣಕ್ಕಿಳಿಸುತ್ತೇನೆ ಎಂದರು.

ದೂರನ್ನು ಡಿಕೆಶಿ ವಿರುದ್ಧ ದೂರು ನೀಡುತ್ತೇನೆ. ಅಟ್ರಾಸಿಟಿ ಮೂಲಕ ಒಳಗೆ ಹಾಕಿಸುತ್ತೇನೆ. ನನ್ನ ಬಳಿ 11 ದಾಖಲೆಗಳಿವೆ, ಎಸ್‌ಐಟಿಗೆ ನೀಡುತ್ತೇನೆ ಎಂದರು.

ನಿಮ್ಮ ಹೆಸರೇಳಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಯುವತಿ ಹೇಳಿದ್ದಾಳೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಏನೇ ಆದರೂ ಡಿ.ಕೆ.ಶಿ ಕಾರಣ.. ಗಣಪತಿ ಕೇಸ್ ಏನಾಯ್ತು? ಕಾನೂನು ಇದೆ ದೇಶದಲ್ಲಿ ಎಂದರು.

ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿಗು ಮುನ್ನವೇ ಯುವತಿಯು ಪೋಷಕರು ಪತ್ರಿಕಾಗೋಷ್ಠಿ ನಡೆಸಿ ನಮ್ಮ ಮಗಳನ್ನು ನಮಗೆ ಒಪ್ಪಿಸಿ ಎಂದಿದ್ದಾರೆ. ಯುವತಿಯ ತಂದೆ ಮಾತನಾಡಿ ನಾವು ಎಸ್ಟಿ ಜನ ಎಂದು ತಿಳಿದು ನಮ್ಮನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ನಮ್ಮ ಬಳಿ ಆಡಿಯೋ ಇದೆ. ಅವಳನ್ನು ಒತ್ತೆಯಾಳು ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಯುವತಿಯ ಸಹೋದರ ಮಾತನಾಡಿ, ನಮ್ಮ ಅಕ್ಕನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ. ಈ ರೀತಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...