Homeಕರ್ನಾಟಕ'ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ': ರಮೇಶ್ ಜಾರಕಿಹೊಳಿ

‘ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ’: ರಮೇಶ್ ಜಾರಕಿಹೊಳಿ

ಡಿ.ಕೆ ಶಿವಕುಮಾರ್ ಸೋಲಿಸಲು ಕುಮಾರಸ್ವಾಮಿಗೆ ಬೆಂಬಲ ನೀಡಲು ಸಿದ್ದನಿದ್ದೇನೆ. ನನ್ನ ತಮ್ಮನನ್ನು ಕನಕಪುರದಲ್ಲಿ ಕಣಕ್ಕಿಳಿಸುತ್ತೇನೆ..

- Advertisement -
- Advertisement -

ಲೈಂಗಿಕ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ವಾಗ್ದಾಳಿ ನಡೆಸಿದ್ದು, ಆತನೇ ಮಹಾನ್ ನಾಯಕನಾಗಿದ್ದು, ಕನಕಪುರಕ್ಕೆ ಬಂದು ಹೋರಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ನಮ್ಮ ಬಳಿ 11 ಆಧಾರಗಳಿವೆ. ಆ ಮಹಾನ್ ನಾಯಕ ನರೇಶ್ ಜೊತೆ ಸಂಬಂಧವಿರುವುದನ್ನು ಒಪ್ಪಿಕೊಂಡಿದ್ದಾರೆ. ಆ ಯುವತಿ ನಮ್ಮ ಮನೆಗೆ ಬಂದಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರನ್ನು ಒದ್ದು ಒಳಗೆ ಹಾಕಬೇಕು, ಆ ಯುವತಿಯ ಮೇಲೆ ಕ್ರಮ ಕೈಗೊಳ್ಳಬೇಕು. ನಾನು ತಪ್ಪು ಮಾಡಿದ್ದರೆ ನನ್ನನ್ನು ಒದ್ದು ಒಳಗೆ ಹಾಕಬೇಕು” ಎಂದಿದ್ದಾರೆ.

ಆ ಯುವತಿ ಎಸ್ಟಿ ಜಾತಿ ಎಂಬುದು ನನಗೆ ಗೊತ್ತಿರಲಿಲ್ಲ. ಇಂದು ಆಕೆಯ ಪೋಷಕರು ಬಂದು ಪತ್ರಿಕಾಗೋಷ್ಠಿ ನಡೆಸಿ ಅದನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ ಅಟ್ರಾಸಿಟಿ ಕಾಯ್ದೆ ಮೂಲಕ ಡಿ.ಕೆ ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಆತ ಒಬ್ಬ ಗಾಂಡು, ಅವ ಗಂಡಸಲ್ಲ, ನಾನು ಗಂಡಸು ರಾಜಕಾರಣಿ ಆಗಲಿಕ್ಕೆ ನಾಲಾಯಕ್, ಅವನಿಗೆ ಮಾಫಿ ಎನ್ನುವುದು ಇಲ್ಲ. ಆತನನ್ನು ರಾಜೀನಾಮೆ ಕೊಡಿಸುವಂತೆ ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡುತ್ತೇನೆ ಎಂದರು.

ಆ ಯುವತಿಯ ಪೋಷಕರಿಗೆ ನಾನು ಧನ್ಯವಾದ ಹೇಳುತ್ತೀನಿ. ಆಕೆಯ ಸಹೋದರನೇ ಎಲ್ಲಾ ಹೇಳಿದ್ದೇನೆ. ಅವರಿಗೆ ಮತ್ತೊಮ್ಮೆ ಥ್ಯಾಂಕ್ಸ್ ಹೇಳುತ್ತೀನಿ ಎಂದು ಪೋಷಕರಿಗೆ ಪದೇ ಪದೇ ಧನ್ಯವಾದ ತಿಳಿಸಿದರು.

ಆ ಪೋಷಕರನ್ನು ಕರೆತಂದು ನೀವೆ ಪ್ರೆಸ್ ಮೀಟ್ ಮಾಡಿಸಿದ್ದೀರಿ ಅಂತ ಆರೋಪವಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇರಬಹುದು ಎಂದರು. ಆದರೆ ನಮ್ಮ ಕುಟುಂಬ ಯಾವ ಹುಡುಗಿಗೂ ಮೋಸ ಮಾಡಿಲ್ಲ. ನನಗೆ ಹೆದರಿಕೆ ಇಲ್ಲ.. ನಾನು ಕನಕಪುರಕ್ಕೆ ಬಂದು ತೋರಿಸುತ್ತೇನೆ, ಅವನ ವಿರುದ್ಧ ಹೋರಾಡುತ್ತೇನೆ. ಅವನನ್ನು ಸೋಲಿಸಲು ಕುಮಾರಸ್ವಾಮಿಗೆ ಬೆಂಬಲ ನೀಡಲು ಸಿದ್ದನಿದ್ದೇನೆ. ನನ್ನ ತಮ್ಮನನ್ನು ಕನಕಪುರದಲ್ಲಿ ಕಣಕ್ಕಿಳಿಸುತ್ತೇನೆ ಎಂದರು.

ದೂರನ್ನು ಡಿಕೆಶಿ ವಿರುದ್ಧ ದೂರು ನೀಡುತ್ತೇನೆ. ಅಟ್ರಾಸಿಟಿ ಮೂಲಕ ಒಳಗೆ ಹಾಕಿಸುತ್ತೇನೆ. ನನ್ನ ಬಳಿ 11 ದಾಖಲೆಗಳಿವೆ, ಎಸ್‌ಐಟಿಗೆ ನೀಡುತ್ತೇನೆ ಎಂದರು.

ನಿಮ್ಮ ಹೆಸರೇಳಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಯುವತಿ ಹೇಳಿದ್ದಾಳೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಏನೇ ಆದರೂ ಡಿ.ಕೆ.ಶಿ ಕಾರಣ.. ಗಣಪತಿ ಕೇಸ್ ಏನಾಯ್ತು? ಕಾನೂನು ಇದೆ ದೇಶದಲ್ಲಿ ಎಂದರು.

ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿಗು ಮುನ್ನವೇ ಯುವತಿಯು ಪೋಷಕರು ಪತ್ರಿಕಾಗೋಷ್ಠಿ ನಡೆಸಿ ನಮ್ಮ ಮಗಳನ್ನು ನಮಗೆ ಒಪ್ಪಿಸಿ ಎಂದಿದ್ದಾರೆ. ಯುವತಿಯ ತಂದೆ ಮಾತನಾಡಿ ನಾವು ಎಸ್ಟಿ ಜನ ಎಂದು ತಿಳಿದು ನಮ್ಮನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ನಮ್ಮ ಬಳಿ ಆಡಿಯೋ ಇದೆ. ಅವಳನ್ನು ಒತ್ತೆಯಾಳು ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಯುವತಿಯ ಸಹೋದರ ಮಾತನಾಡಿ, ನಮ್ಮ ಅಕ್ಕನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ. ಈ ರೀತಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...