Homeಕರ್ನಾಟಕ'ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ': ರಮೇಶ್ ಜಾರಕಿಹೊಳಿ

‘ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ’: ರಮೇಶ್ ಜಾರಕಿಹೊಳಿ

ಡಿ.ಕೆ ಶಿವಕುಮಾರ್ ಸೋಲಿಸಲು ಕುಮಾರಸ್ವಾಮಿಗೆ ಬೆಂಬಲ ನೀಡಲು ಸಿದ್ದನಿದ್ದೇನೆ. ನನ್ನ ತಮ್ಮನನ್ನು ಕನಕಪುರದಲ್ಲಿ ಕಣಕ್ಕಿಳಿಸುತ್ತೇನೆ..

- Advertisement -
- Advertisement -

ಲೈಂಗಿಕ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ವಾಗ್ದಾಳಿ ನಡೆಸಿದ್ದು, ಆತನೇ ಮಹಾನ್ ನಾಯಕನಾಗಿದ್ದು, ಕನಕಪುರಕ್ಕೆ ಬಂದು ಹೋರಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ನಮ್ಮ ಬಳಿ 11 ಆಧಾರಗಳಿವೆ. ಆ ಮಹಾನ್ ನಾಯಕ ನರೇಶ್ ಜೊತೆ ಸಂಬಂಧವಿರುವುದನ್ನು ಒಪ್ಪಿಕೊಂಡಿದ್ದಾರೆ. ಆ ಯುವತಿ ನಮ್ಮ ಮನೆಗೆ ಬಂದಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರನ್ನು ಒದ್ದು ಒಳಗೆ ಹಾಕಬೇಕು, ಆ ಯುವತಿಯ ಮೇಲೆ ಕ್ರಮ ಕೈಗೊಳ್ಳಬೇಕು. ನಾನು ತಪ್ಪು ಮಾಡಿದ್ದರೆ ನನ್ನನ್ನು ಒದ್ದು ಒಳಗೆ ಹಾಕಬೇಕು” ಎಂದಿದ್ದಾರೆ.

ಆ ಯುವತಿ ಎಸ್ಟಿ ಜಾತಿ ಎಂಬುದು ನನಗೆ ಗೊತ್ತಿರಲಿಲ್ಲ. ಇಂದು ಆಕೆಯ ಪೋಷಕರು ಬಂದು ಪತ್ರಿಕಾಗೋಷ್ಠಿ ನಡೆಸಿ ಅದನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ ಅಟ್ರಾಸಿಟಿ ಕಾಯ್ದೆ ಮೂಲಕ ಡಿ.ಕೆ ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಆತ ಒಬ್ಬ ಗಾಂಡು, ಅವ ಗಂಡಸಲ್ಲ, ನಾನು ಗಂಡಸು ರಾಜಕಾರಣಿ ಆಗಲಿಕ್ಕೆ ನಾಲಾಯಕ್, ಅವನಿಗೆ ಮಾಫಿ ಎನ್ನುವುದು ಇಲ್ಲ. ಆತನನ್ನು ರಾಜೀನಾಮೆ ಕೊಡಿಸುವಂತೆ ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡುತ್ತೇನೆ ಎಂದರು.

ಆ ಯುವತಿಯ ಪೋಷಕರಿಗೆ ನಾನು ಧನ್ಯವಾದ ಹೇಳುತ್ತೀನಿ. ಆಕೆಯ ಸಹೋದರನೇ ಎಲ್ಲಾ ಹೇಳಿದ್ದೇನೆ. ಅವರಿಗೆ ಮತ್ತೊಮ್ಮೆ ಥ್ಯಾಂಕ್ಸ್ ಹೇಳುತ್ತೀನಿ ಎಂದು ಪೋಷಕರಿಗೆ ಪದೇ ಪದೇ ಧನ್ಯವಾದ ತಿಳಿಸಿದರು.

ಆ ಪೋಷಕರನ್ನು ಕರೆತಂದು ನೀವೆ ಪ್ರೆಸ್ ಮೀಟ್ ಮಾಡಿಸಿದ್ದೀರಿ ಅಂತ ಆರೋಪವಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇರಬಹುದು ಎಂದರು. ಆದರೆ ನಮ್ಮ ಕುಟುಂಬ ಯಾವ ಹುಡುಗಿಗೂ ಮೋಸ ಮಾಡಿಲ್ಲ. ನನಗೆ ಹೆದರಿಕೆ ಇಲ್ಲ.. ನಾನು ಕನಕಪುರಕ್ಕೆ ಬಂದು ತೋರಿಸುತ್ತೇನೆ, ಅವನ ವಿರುದ್ಧ ಹೋರಾಡುತ್ತೇನೆ. ಅವನನ್ನು ಸೋಲಿಸಲು ಕುಮಾರಸ್ವಾಮಿಗೆ ಬೆಂಬಲ ನೀಡಲು ಸಿದ್ದನಿದ್ದೇನೆ. ನನ್ನ ತಮ್ಮನನ್ನು ಕನಕಪುರದಲ್ಲಿ ಕಣಕ್ಕಿಳಿಸುತ್ತೇನೆ ಎಂದರು.

ದೂರನ್ನು ಡಿಕೆಶಿ ವಿರುದ್ಧ ದೂರು ನೀಡುತ್ತೇನೆ. ಅಟ್ರಾಸಿಟಿ ಮೂಲಕ ಒಳಗೆ ಹಾಕಿಸುತ್ತೇನೆ. ನನ್ನ ಬಳಿ 11 ದಾಖಲೆಗಳಿವೆ, ಎಸ್‌ಐಟಿಗೆ ನೀಡುತ್ತೇನೆ ಎಂದರು.

ನಿಮ್ಮ ಹೆಸರೇಳಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಯುವತಿ ಹೇಳಿದ್ದಾಳೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಏನೇ ಆದರೂ ಡಿ.ಕೆ.ಶಿ ಕಾರಣ.. ಗಣಪತಿ ಕೇಸ್ ಏನಾಯ್ತು? ಕಾನೂನು ಇದೆ ದೇಶದಲ್ಲಿ ಎಂದರು.

ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿಗು ಮುನ್ನವೇ ಯುವತಿಯು ಪೋಷಕರು ಪತ್ರಿಕಾಗೋಷ್ಠಿ ನಡೆಸಿ ನಮ್ಮ ಮಗಳನ್ನು ನಮಗೆ ಒಪ್ಪಿಸಿ ಎಂದಿದ್ದಾರೆ. ಯುವತಿಯ ತಂದೆ ಮಾತನಾಡಿ ನಾವು ಎಸ್ಟಿ ಜನ ಎಂದು ತಿಳಿದು ನಮ್ಮನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ನಮ್ಮ ಬಳಿ ಆಡಿಯೋ ಇದೆ. ಅವಳನ್ನು ಒತ್ತೆಯಾಳು ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಯುವತಿಯ ಸಹೋದರ ಮಾತನಾಡಿ, ನಮ್ಮ ಅಕ್ಕನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ. ಈ ರೀತಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...