Homeಕರ್ನಾಟಕಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಹೋರಾಟ 46 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಮ್‌ ಆದ್ಮಿ ಪಕ್ಷ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರುವ ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಬೆಂಬಲ ನೀಡಿದ್ದು, “ಕಂಪೆನಿ ತನ್ನ ಹಠಮಾರಿ ದೋರಣೆ ಕೈಬಿಟ್ಟು, ಕಾರ್ಮಿಕರ ಅಮಾನತು ಆದೇಶ ಹಿಂಪಡೆಯಬೇಕು, ಇಲ್ಲವಾದರೆ ನಾನೇ ಹೋರಾಟದ ನೇತೃತ್ವ ವಹಿಸುತ್ತೇನೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಟೊಯೊಟಾ ಕಿಲೋಸ್ಕರ್‌ ಆಡಳಿತ ಮಂಡಳಿಯ ದುರ್ವರ್ತನೆಯ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 46 ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸ್ಥಳೀಯ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಹೋರಾಟ ನಿರತ ಕಾರ್ಮಿಕರನ್ನು ಬೇಟಿ ಮಾಡಿ ಬೆಂಬಲ ಘೋಷಿಸಿದರು.

ಇದನ್ನೂ ಓದಿ:  ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಪ್ರತಿಭಟನಾ ನಿರತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮೊದಲ ದಿನದಿಂದಲೂ ನಿಮ್ಮ ಹೋರಾಟದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ, ಕಾರ್ಮಿಕರು ಹಾಗೂ ಆಡಳಿತ ಮಂಡಳಿಯ ಸಂಬಂಧ ಕೌಟುಂಬಿಕವಾದುದು ಅವರವರೆ ಕುಳಿತು ಮಾತನಾಡಿ ಬಗೆಹರಿಸಿ ಕೊಳ್ಳಲಿ, ನಾವು ಬಂದರೆ ರಾಜಕಾರಣವಾಗುತ್ತದೆ ಎಂದು ಭಾವಿಸಿದ್ದೆ. ಆದರೆ ಆ ರೀತಿ ಆಗಲಿಲ್ಲ, ಕಾರ್ಮಿಕ ಇಲಾಖೆಯಾಗಲಿ, ಸರ್ಕಾರವಾಗಲಿ ಬಗೆಹರಿಸದಿರುವುದನ್ನು ಕಂಡು ನಾನೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

“ಇಲ್ಲಿಗೆ ಬರುವ ಮುಂಚೆ ನಾನೇ ಆಡಳಿತ ಮಂಡಳಿಯ ಜೊತೆ 2 ಗಂಟೆ ಸಭೆ ಮಾಡಿ ಪ್ರಯತ್ನ ಪಟ್ಟೆ, ಆದರೆ ಆಡಳಿತ ಮಂಡಳಿಯ ಹಠಮಾರಿ ಧೋರಣೆಯಿಂದಾಗಿ ಸಮಸ್ಯೆ ಜಟಿಲವಾಗುತ್ತಿದೆ. ಆಡಳಿತ ಮಂಡಳಿಯು ಕಾರ್ಮಿಕ ಶೋಷಣೆ ಮಾಡುವುದರಲ್ಲಿ ಬೇರೆ ಸಂಸ್ಥೆಗಳಿಗೆ ಪ್ರೇರಣೆ ನೀಡುತ್ತಿದೆ. ಶೋಷಣೆಯನ್ನು ಈ ಕೂಡಲೇ ನಿಲ್ಲಿಸಬೇಕು. ನಮ್ಮ ನೆಲ, ಜಲ ಹಾಗೂ ಕಾರ್ಮಿಕರ ಬೆವರಿನ ಶಕ್ತಿಯಿಂದ ಇಂದು ಸಂಸ್ಥೆಯು ಈ ಮಟ್ಟಕ್ಕೆ ಬೆಳೆದಿದೆ. ಅಮಾನತಾದ 65 ಹಾಗೂ ವಜಾಗೊಂಡ 6 ಸದಸ್ಯರನ್ನು ಈ ಕೂಡಲೇ ಕೆಲಸ ತೆಗೆದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಯಾವುದೇ ಕಾರ್ಮಿಕರಿಂದ ತಪ್ಪಾಗಿದ್ದರೆ ಕಾರ್ಮಿಕ ಸಂಘದ ಜೊತೆ ಮಾತನಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಿ, ಆಡಳಿತ ಮಂಡಳಿ 48 ಗಂಟೆಗಳಲ್ಲಿ ಸಮಸ್ಯೆಯನ್ನು ಕಾರ್ಮಿಕ ಸಂಘದ ಜೊತೆಗೆ ಮಾತನಾಡಿ ಇತ್ಯರ್ಥ ಪಡಿಸದಿದ್ದರೆ, ನಾನೇ ಕಾರ್ಮಿಕರ ಜೊತೆ ಸೇರಿ ಪ್ರತಿಭಟನೆ ಮಾಡುತ್ತೇನೆ. ಈ ಗೌರವದ ಬದುಕಿಗಾಗಿ ನಡೆಯುತ್ತಿರುವ ನ್ಯಾಯ ಸಮ್ಮತವಾದ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ನಿಮ್ಮ ಹೋರಾಟ ಯಶಸ್ವಿಯಾಗಲಿದೆ” ಎಂದು ಹೇಳಿದ್ದಾರೆ.

ಅಲ್ಲದೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸುಧಾಕರ್ ಲಾಲ್ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಕೈಲಾದ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಮುಖ್ಯಮಂತ್ರಿಗಳೇ ಟೊಯೋಟಾ, ವಿಸ್ಟ್ರಾನ್ ಕಂಪೆನಿಗಳ ಕಾರ್ಮಿಕರ ಭವಿಷ್ಯ ಕಾಪಾಡಿ: ಆಮ್‌ ಆದ್ಮಿ ಆಗ್ರಹ

ಕೋರೋನಾ ನಂತರ ಚೈನಾ ಬಿಟ್ಟು ಭಾರತದ ಕಡೆ ಮುಖಮಾಡುತ್ತಿದ್ದ ವಿಶ್ವದ ಪ್ರತಿಷ್ಠಿತ ಕಂಪೆನಿಗಳು
ವಿಸ್ಟ್ರಾನ್ ಹಾಗೂ ಟೊಯೋಟಾ ಕಂಪೆನಿಗಳ ಬಿಕ್ಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಡೆದುಕೊಂಡ ಬೇಜವಾಬ್ದಾರಿ ನೀತಿಯಿಂದ ಭಾರತಕ್ಕೆ ಬರಲು ಹಿಂದೇಟು ಹಾಕುತ್ತಿವೆ. ಇದರಿಂದ ದೇಶದ, ಕರ್ನಾಟಕದ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿದೆ. ಈ ವೈಫಲ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಹೊರಬೇಕು, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಮಂತ್ರಿ ಶಿವರಾಂ ಹೆಬ್ಬಾರ್ ಅಂತಹ ನಾಲಾಯಕ್ ಮಂತ್ರಿಗಳನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಗುರುವಾರ ನಡೆದ ಪ್ರತಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ನಂತರ ಆಗಬಹುದಾಗಿದ್ದ ಔದ್ಯೋಗಿಕ ಕ್ರಾಂತಿಗೆ ಕರ್ನಾಟಕದಲ್ಲಿ ನಡೆದ ಘಟನೆಗಳಿಂದ ಲಕ್ಷಾಂತರ ಉದ್ಯೋಗ ನಷ್ಟವಾಗಿದೆ. 60 ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಬೊಗಳೆ ಬಿಟ್ಟ ಮುಖ್ಯಮಂತ್ರಿಗಳೇ ಮೊದಲು ಟೊಯೋಟಾ ಹಾಗೂ ವಿಸ್ಟ್ರಾನ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ 20 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಭವಿಷ್ಯ ಕಾಪಾಡಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....