Homeಕರ್ನಾಟಕಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಹೋರಾಟ 46 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಮ್‌ ಆದ್ಮಿ ಪಕ್ಷ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರುವ ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಬೆಂಬಲ ನೀಡಿದ್ದು, “ಕಂಪೆನಿ ತನ್ನ ಹಠಮಾರಿ ದೋರಣೆ ಕೈಬಿಟ್ಟು, ಕಾರ್ಮಿಕರ ಅಮಾನತು ಆದೇಶ ಹಿಂಪಡೆಯಬೇಕು, ಇಲ್ಲವಾದರೆ ನಾನೇ ಹೋರಾಟದ ನೇತೃತ್ವ ವಹಿಸುತ್ತೇನೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಟೊಯೊಟಾ ಕಿಲೋಸ್ಕರ್‌ ಆಡಳಿತ ಮಂಡಳಿಯ ದುರ್ವರ್ತನೆಯ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 46 ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸ್ಥಳೀಯ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಹೋರಾಟ ನಿರತ ಕಾರ್ಮಿಕರನ್ನು ಬೇಟಿ ಮಾಡಿ ಬೆಂಬಲ ಘೋಷಿಸಿದರು.

ಇದನ್ನೂ ಓದಿ:  ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಪ್ರತಿಭಟನಾ ನಿರತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮೊದಲ ದಿನದಿಂದಲೂ ನಿಮ್ಮ ಹೋರಾಟದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ, ಕಾರ್ಮಿಕರು ಹಾಗೂ ಆಡಳಿತ ಮಂಡಳಿಯ ಸಂಬಂಧ ಕೌಟುಂಬಿಕವಾದುದು ಅವರವರೆ ಕುಳಿತು ಮಾತನಾಡಿ ಬಗೆಹರಿಸಿ ಕೊಳ್ಳಲಿ, ನಾವು ಬಂದರೆ ರಾಜಕಾರಣವಾಗುತ್ತದೆ ಎಂದು ಭಾವಿಸಿದ್ದೆ. ಆದರೆ ಆ ರೀತಿ ಆಗಲಿಲ್ಲ, ಕಾರ್ಮಿಕ ಇಲಾಖೆಯಾಗಲಿ, ಸರ್ಕಾರವಾಗಲಿ ಬಗೆಹರಿಸದಿರುವುದನ್ನು ಕಂಡು ನಾನೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

“ಇಲ್ಲಿಗೆ ಬರುವ ಮುಂಚೆ ನಾನೇ ಆಡಳಿತ ಮಂಡಳಿಯ ಜೊತೆ 2 ಗಂಟೆ ಸಭೆ ಮಾಡಿ ಪ್ರಯತ್ನ ಪಟ್ಟೆ, ಆದರೆ ಆಡಳಿತ ಮಂಡಳಿಯ ಹಠಮಾರಿ ಧೋರಣೆಯಿಂದಾಗಿ ಸಮಸ್ಯೆ ಜಟಿಲವಾಗುತ್ತಿದೆ. ಆಡಳಿತ ಮಂಡಳಿಯು ಕಾರ್ಮಿಕ ಶೋಷಣೆ ಮಾಡುವುದರಲ್ಲಿ ಬೇರೆ ಸಂಸ್ಥೆಗಳಿಗೆ ಪ್ರೇರಣೆ ನೀಡುತ್ತಿದೆ. ಶೋಷಣೆಯನ್ನು ಈ ಕೂಡಲೇ ನಿಲ್ಲಿಸಬೇಕು. ನಮ್ಮ ನೆಲ, ಜಲ ಹಾಗೂ ಕಾರ್ಮಿಕರ ಬೆವರಿನ ಶಕ್ತಿಯಿಂದ ಇಂದು ಸಂಸ್ಥೆಯು ಈ ಮಟ್ಟಕ್ಕೆ ಬೆಳೆದಿದೆ. ಅಮಾನತಾದ 65 ಹಾಗೂ ವಜಾಗೊಂಡ 6 ಸದಸ್ಯರನ್ನು ಈ ಕೂಡಲೇ ಕೆಲಸ ತೆಗೆದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಯಾವುದೇ ಕಾರ್ಮಿಕರಿಂದ ತಪ್ಪಾಗಿದ್ದರೆ ಕಾರ್ಮಿಕ ಸಂಘದ ಜೊತೆ ಮಾತನಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಿ, ಆಡಳಿತ ಮಂಡಳಿ 48 ಗಂಟೆಗಳಲ್ಲಿ ಸಮಸ್ಯೆಯನ್ನು ಕಾರ್ಮಿಕ ಸಂಘದ ಜೊತೆಗೆ ಮಾತನಾಡಿ ಇತ್ಯರ್ಥ ಪಡಿಸದಿದ್ದರೆ, ನಾನೇ ಕಾರ್ಮಿಕರ ಜೊತೆ ಸೇರಿ ಪ್ರತಿಭಟನೆ ಮಾಡುತ್ತೇನೆ. ಈ ಗೌರವದ ಬದುಕಿಗಾಗಿ ನಡೆಯುತ್ತಿರುವ ನ್ಯಾಯ ಸಮ್ಮತವಾದ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ನಿಮ್ಮ ಹೋರಾಟ ಯಶಸ್ವಿಯಾಗಲಿದೆ” ಎಂದು ಹೇಳಿದ್ದಾರೆ.

ಅಲ್ಲದೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸುಧಾಕರ್ ಲಾಲ್ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಕೈಲಾದ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಮುಖ್ಯಮಂತ್ರಿಗಳೇ ಟೊಯೋಟಾ, ವಿಸ್ಟ್ರಾನ್ ಕಂಪೆನಿಗಳ ಕಾರ್ಮಿಕರ ಭವಿಷ್ಯ ಕಾಪಾಡಿ: ಆಮ್‌ ಆದ್ಮಿ ಆಗ್ರಹ

ಕೋರೋನಾ ನಂತರ ಚೈನಾ ಬಿಟ್ಟು ಭಾರತದ ಕಡೆ ಮುಖಮಾಡುತ್ತಿದ್ದ ವಿಶ್ವದ ಪ್ರತಿಷ್ಠಿತ ಕಂಪೆನಿಗಳು
ವಿಸ್ಟ್ರಾನ್ ಹಾಗೂ ಟೊಯೋಟಾ ಕಂಪೆನಿಗಳ ಬಿಕ್ಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಡೆದುಕೊಂಡ ಬೇಜವಾಬ್ದಾರಿ ನೀತಿಯಿಂದ ಭಾರತಕ್ಕೆ ಬರಲು ಹಿಂದೇಟು ಹಾಕುತ್ತಿವೆ. ಇದರಿಂದ ದೇಶದ, ಕರ್ನಾಟಕದ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿದೆ. ಈ ವೈಫಲ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಹೊರಬೇಕು, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಮಂತ್ರಿ ಶಿವರಾಂ ಹೆಬ್ಬಾರ್ ಅಂತಹ ನಾಲಾಯಕ್ ಮಂತ್ರಿಗಳನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಗುರುವಾರ ನಡೆದ ಪ್ರತಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ನಂತರ ಆಗಬಹುದಾಗಿದ್ದ ಔದ್ಯೋಗಿಕ ಕ್ರಾಂತಿಗೆ ಕರ್ನಾಟಕದಲ್ಲಿ ನಡೆದ ಘಟನೆಗಳಿಂದ ಲಕ್ಷಾಂತರ ಉದ್ಯೋಗ ನಷ್ಟವಾಗಿದೆ. 60 ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಬೊಗಳೆ ಬಿಟ್ಟ ಮುಖ್ಯಮಂತ್ರಿಗಳೇ ಮೊದಲು ಟೊಯೋಟಾ ಹಾಗೂ ವಿಸ್ಟ್ರಾನ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ 20 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಭವಿಷ್ಯ ಕಾಪಾಡಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...