Homeಕರ್ನಾಟಕಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಹೋರಾಟ 46 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಮ್‌ ಆದ್ಮಿ ಪಕ್ಷ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರುವ ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಬೆಂಬಲ ನೀಡಿದ್ದು, “ಕಂಪೆನಿ ತನ್ನ ಹಠಮಾರಿ ದೋರಣೆ ಕೈಬಿಟ್ಟು, ಕಾರ್ಮಿಕರ ಅಮಾನತು ಆದೇಶ ಹಿಂಪಡೆಯಬೇಕು, ಇಲ್ಲವಾದರೆ ನಾನೇ ಹೋರಾಟದ ನೇತೃತ್ವ ವಹಿಸುತ್ತೇನೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಟೊಯೊಟಾ ಕಿಲೋಸ್ಕರ್‌ ಆಡಳಿತ ಮಂಡಳಿಯ ದುರ್ವರ್ತನೆಯ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 46 ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸ್ಥಳೀಯ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಹೋರಾಟ ನಿರತ ಕಾರ್ಮಿಕರನ್ನು ಬೇಟಿ ಮಾಡಿ ಬೆಂಬಲ ಘೋಷಿಸಿದರು.

ಇದನ್ನೂ ಓದಿ:  ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಪ್ರತಿಭಟನಾ ನಿರತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮೊದಲ ದಿನದಿಂದಲೂ ನಿಮ್ಮ ಹೋರಾಟದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ, ಕಾರ್ಮಿಕರು ಹಾಗೂ ಆಡಳಿತ ಮಂಡಳಿಯ ಸಂಬಂಧ ಕೌಟುಂಬಿಕವಾದುದು ಅವರವರೆ ಕುಳಿತು ಮಾತನಾಡಿ ಬಗೆಹರಿಸಿ ಕೊಳ್ಳಲಿ, ನಾವು ಬಂದರೆ ರಾಜಕಾರಣವಾಗುತ್ತದೆ ಎಂದು ಭಾವಿಸಿದ್ದೆ. ಆದರೆ ಆ ರೀತಿ ಆಗಲಿಲ್ಲ, ಕಾರ್ಮಿಕ ಇಲಾಖೆಯಾಗಲಿ, ಸರ್ಕಾರವಾಗಲಿ ಬಗೆಹರಿಸದಿರುವುದನ್ನು ಕಂಡು ನಾನೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

“ಇಲ್ಲಿಗೆ ಬರುವ ಮುಂಚೆ ನಾನೇ ಆಡಳಿತ ಮಂಡಳಿಯ ಜೊತೆ 2 ಗಂಟೆ ಸಭೆ ಮಾಡಿ ಪ್ರಯತ್ನ ಪಟ್ಟೆ, ಆದರೆ ಆಡಳಿತ ಮಂಡಳಿಯ ಹಠಮಾರಿ ಧೋರಣೆಯಿಂದಾಗಿ ಸಮಸ್ಯೆ ಜಟಿಲವಾಗುತ್ತಿದೆ. ಆಡಳಿತ ಮಂಡಳಿಯು ಕಾರ್ಮಿಕ ಶೋಷಣೆ ಮಾಡುವುದರಲ್ಲಿ ಬೇರೆ ಸಂಸ್ಥೆಗಳಿಗೆ ಪ್ರೇರಣೆ ನೀಡುತ್ತಿದೆ. ಶೋಷಣೆಯನ್ನು ಈ ಕೂಡಲೇ ನಿಲ್ಲಿಸಬೇಕು. ನಮ್ಮ ನೆಲ, ಜಲ ಹಾಗೂ ಕಾರ್ಮಿಕರ ಬೆವರಿನ ಶಕ್ತಿಯಿಂದ ಇಂದು ಸಂಸ್ಥೆಯು ಈ ಮಟ್ಟಕ್ಕೆ ಬೆಳೆದಿದೆ. ಅಮಾನತಾದ 65 ಹಾಗೂ ವಜಾಗೊಂಡ 6 ಸದಸ್ಯರನ್ನು ಈ ಕೂಡಲೇ ಕೆಲಸ ತೆಗೆದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಯಾವುದೇ ಕಾರ್ಮಿಕರಿಂದ ತಪ್ಪಾಗಿದ್ದರೆ ಕಾರ್ಮಿಕ ಸಂಘದ ಜೊತೆ ಮಾತನಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಿ, ಆಡಳಿತ ಮಂಡಳಿ 48 ಗಂಟೆಗಳಲ್ಲಿ ಸಮಸ್ಯೆಯನ್ನು ಕಾರ್ಮಿಕ ಸಂಘದ ಜೊತೆಗೆ ಮಾತನಾಡಿ ಇತ್ಯರ್ಥ ಪಡಿಸದಿದ್ದರೆ, ನಾನೇ ಕಾರ್ಮಿಕರ ಜೊತೆ ಸೇರಿ ಪ್ರತಿಭಟನೆ ಮಾಡುತ್ತೇನೆ. ಈ ಗೌರವದ ಬದುಕಿಗಾಗಿ ನಡೆಯುತ್ತಿರುವ ನ್ಯಾಯ ಸಮ್ಮತವಾದ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ನಿಮ್ಮ ಹೋರಾಟ ಯಶಸ್ವಿಯಾಗಲಿದೆ” ಎಂದು ಹೇಳಿದ್ದಾರೆ.

ಅಲ್ಲದೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸುಧಾಕರ್ ಲಾಲ್ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಕೈಲಾದ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಮುಖ್ಯಮಂತ್ರಿಗಳೇ ಟೊಯೋಟಾ, ವಿಸ್ಟ್ರಾನ್ ಕಂಪೆನಿಗಳ ಕಾರ್ಮಿಕರ ಭವಿಷ್ಯ ಕಾಪಾಡಿ: ಆಮ್‌ ಆದ್ಮಿ ಆಗ್ರಹ

ಕೋರೋನಾ ನಂತರ ಚೈನಾ ಬಿಟ್ಟು ಭಾರತದ ಕಡೆ ಮುಖಮಾಡುತ್ತಿದ್ದ ವಿಶ್ವದ ಪ್ರತಿಷ್ಠಿತ ಕಂಪೆನಿಗಳು
ವಿಸ್ಟ್ರಾನ್ ಹಾಗೂ ಟೊಯೋಟಾ ಕಂಪೆನಿಗಳ ಬಿಕ್ಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಡೆದುಕೊಂಡ ಬೇಜವಾಬ್ದಾರಿ ನೀತಿಯಿಂದ ಭಾರತಕ್ಕೆ ಬರಲು ಹಿಂದೇಟು ಹಾಕುತ್ತಿವೆ. ಇದರಿಂದ ದೇಶದ, ಕರ್ನಾಟಕದ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿದೆ. ಈ ವೈಫಲ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಹೊರಬೇಕು, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಮಂತ್ರಿ ಶಿವರಾಂ ಹೆಬ್ಬಾರ್ ಅಂತಹ ನಾಲಾಯಕ್ ಮಂತ್ರಿಗಳನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಗುರುವಾರ ನಡೆದ ಪ್ರತಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ನಂತರ ಆಗಬಹುದಾಗಿದ್ದ ಔದ್ಯೋಗಿಕ ಕ್ರಾಂತಿಗೆ ಕರ್ನಾಟಕದಲ್ಲಿ ನಡೆದ ಘಟನೆಗಳಿಂದ ಲಕ್ಷಾಂತರ ಉದ್ಯೋಗ ನಷ್ಟವಾಗಿದೆ. 60 ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಬೊಗಳೆ ಬಿಟ್ಟ ಮುಖ್ಯಮಂತ್ರಿಗಳೇ ಮೊದಲು ಟೊಯೋಟಾ ಹಾಗೂ ವಿಸ್ಟ್ರಾನ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ 20 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಭವಿಷ್ಯ ಕಾಪಾಡಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...