Homeಕರ್ನಾಟಕಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಹೋರಾಟ 46 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಮ್‌ ಆದ್ಮಿ ಪಕ್ಷ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರುವ ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಬೆಂಬಲ ನೀಡಿದ್ದು, “ಕಂಪೆನಿ ತನ್ನ ಹಠಮಾರಿ ದೋರಣೆ ಕೈಬಿಟ್ಟು, ಕಾರ್ಮಿಕರ ಅಮಾನತು ಆದೇಶ ಹಿಂಪಡೆಯಬೇಕು, ಇಲ್ಲವಾದರೆ ನಾನೇ ಹೋರಾಟದ ನೇತೃತ್ವ ವಹಿಸುತ್ತೇನೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಟೊಯೊಟಾ ಕಿಲೋಸ್ಕರ್‌ ಆಡಳಿತ ಮಂಡಳಿಯ ದುರ್ವರ್ತನೆಯ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 46 ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸ್ಥಳೀಯ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಹೋರಾಟ ನಿರತ ಕಾರ್ಮಿಕರನ್ನು ಬೇಟಿ ಮಾಡಿ ಬೆಂಬಲ ಘೋಷಿಸಿದರು.

ಇದನ್ನೂ ಓದಿ:  ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಪ್ರತಿಭಟನಾ ನಿರತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮೊದಲ ದಿನದಿಂದಲೂ ನಿಮ್ಮ ಹೋರಾಟದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ, ಕಾರ್ಮಿಕರು ಹಾಗೂ ಆಡಳಿತ ಮಂಡಳಿಯ ಸಂಬಂಧ ಕೌಟುಂಬಿಕವಾದುದು ಅವರವರೆ ಕುಳಿತು ಮಾತನಾಡಿ ಬಗೆಹರಿಸಿ ಕೊಳ್ಳಲಿ, ನಾವು ಬಂದರೆ ರಾಜಕಾರಣವಾಗುತ್ತದೆ ಎಂದು ಭಾವಿಸಿದ್ದೆ. ಆದರೆ ಆ ರೀತಿ ಆಗಲಿಲ್ಲ, ಕಾರ್ಮಿಕ ಇಲಾಖೆಯಾಗಲಿ, ಸರ್ಕಾರವಾಗಲಿ ಬಗೆಹರಿಸದಿರುವುದನ್ನು ಕಂಡು ನಾನೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

“ಇಲ್ಲಿಗೆ ಬರುವ ಮುಂಚೆ ನಾನೇ ಆಡಳಿತ ಮಂಡಳಿಯ ಜೊತೆ 2 ಗಂಟೆ ಸಭೆ ಮಾಡಿ ಪ್ರಯತ್ನ ಪಟ್ಟೆ, ಆದರೆ ಆಡಳಿತ ಮಂಡಳಿಯ ಹಠಮಾರಿ ಧೋರಣೆಯಿಂದಾಗಿ ಸಮಸ್ಯೆ ಜಟಿಲವಾಗುತ್ತಿದೆ. ಆಡಳಿತ ಮಂಡಳಿಯು ಕಾರ್ಮಿಕ ಶೋಷಣೆ ಮಾಡುವುದರಲ್ಲಿ ಬೇರೆ ಸಂಸ್ಥೆಗಳಿಗೆ ಪ್ರೇರಣೆ ನೀಡುತ್ತಿದೆ. ಶೋಷಣೆಯನ್ನು ಈ ಕೂಡಲೇ ನಿಲ್ಲಿಸಬೇಕು. ನಮ್ಮ ನೆಲ, ಜಲ ಹಾಗೂ ಕಾರ್ಮಿಕರ ಬೆವರಿನ ಶಕ್ತಿಯಿಂದ ಇಂದು ಸಂಸ್ಥೆಯು ಈ ಮಟ್ಟಕ್ಕೆ ಬೆಳೆದಿದೆ. ಅಮಾನತಾದ 65 ಹಾಗೂ ವಜಾಗೊಂಡ 6 ಸದಸ್ಯರನ್ನು ಈ ಕೂಡಲೇ ಕೆಲಸ ತೆಗೆದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಯಾವುದೇ ಕಾರ್ಮಿಕರಿಂದ ತಪ್ಪಾಗಿದ್ದರೆ ಕಾರ್ಮಿಕ ಸಂಘದ ಜೊತೆ ಮಾತನಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಿ, ಆಡಳಿತ ಮಂಡಳಿ 48 ಗಂಟೆಗಳಲ್ಲಿ ಸಮಸ್ಯೆಯನ್ನು ಕಾರ್ಮಿಕ ಸಂಘದ ಜೊತೆಗೆ ಮಾತನಾಡಿ ಇತ್ಯರ್ಥ ಪಡಿಸದಿದ್ದರೆ, ನಾನೇ ಕಾರ್ಮಿಕರ ಜೊತೆ ಸೇರಿ ಪ್ರತಿಭಟನೆ ಮಾಡುತ್ತೇನೆ. ಈ ಗೌರವದ ಬದುಕಿಗಾಗಿ ನಡೆಯುತ್ತಿರುವ ನ್ಯಾಯ ಸಮ್ಮತವಾದ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ನಿಮ್ಮ ಹೋರಾಟ ಯಶಸ್ವಿಯಾಗಲಿದೆ” ಎಂದು ಹೇಳಿದ್ದಾರೆ.

ಅಲ್ಲದೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸುಧಾಕರ್ ಲಾಲ್ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಕೈಲಾದ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಮುಖ್ಯಮಂತ್ರಿಗಳೇ ಟೊಯೋಟಾ, ವಿಸ್ಟ್ರಾನ್ ಕಂಪೆನಿಗಳ ಕಾರ್ಮಿಕರ ಭವಿಷ್ಯ ಕಾಪಾಡಿ: ಆಮ್‌ ಆದ್ಮಿ ಆಗ್ರಹ

ಕೋರೋನಾ ನಂತರ ಚೈನಾ ಬಿಟ್ಟು ಭಾರತದ ಕಡೆ ಮುಖಮಾಡುತ್ತಿದ್ದ ವಿಶ್ವದ ಪ್ರತಿಷ್ಠಿತ ಕಂಪೆನಿಗಳು
ವಿಸ್ಟ್ರಾನ್ ಹಾಗೂ ಟೊಯೋಟಾ ಕಂಪೆನಿಗಳ ಬಿಕ್ಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಡೆದುಕೊಂಡ ಬೇಜವಾಬ್ದಾರಿ ನೀತಿಯಿಂದ ಭಾರತಕ್ಕೆ ಬರಲು ಹಿಂದೇಟು ಹಾಕುತ್ತಿವೆ. ಇದರಿಂದ ದೇಶದ, ಕರ್ನಾಟಕದ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿದೆ. ಈ ವೈಫಲ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಹೊರಬೇಕು, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಮಂತ್ರಿ ಶಿವರಾಂ ಹೆಬ್ಬಾರ್ ಅಂತಹ ನಾಲಾಯಕ್ ಮಂತ್ರಿಗಳನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಗುರುವಾರ ನಡೆದ ಪ್ರತಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ನಂತರ ಆಗಬಹುದಾಗಿದ್ದ ಔದ್ಯೋಗಿಕ ಕ್ರಾಂತಿಗೆ ಕರ್ನಾಟಕದಲ್ಲಿ ನಡೆದ ಘಟನೆಗಳಿಂದ ಲಕ್ಷಾಂತರ ಉದ್ಯೋಗ ನಷ್ಟವಾಗಿದೆ. 60 ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಬೊಗಳೆ ಬಿಟ್ಟ ಮುಖ್ಯಮಂತ್ರಿಗಳೇ ಮೊದಲು ಟೊಯೋಟಾ ಹಾಗೂ ವಿಸ್ಟ್ರಾನ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ 20 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಭವಿಷ್ಯ ಕಾಪಾಡಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...