Homeಮುಖಪುಟಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

ಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

- Advertisement -
- Advertisement -

ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ಲೋಕಸಭೆಯಿಂದ ಉಚ್ಛಾಟಿಸಲ್ಪಟ್ಟಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಅವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರು ಬೆಂಬಲ ಸೂಚಿಸಿದರು. ಸಂಸತ್ತಿನ ಗಾಂಧಿ ಪ್ರತಿಮೆ ಮಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ನೈತಿಕ ಸಮಿತಿ ಶಿಫಾರಸ್ಸಿನ ಮೇರೆಗೆ ಲೋಕಸಭೆ ಸ್ಪೀಕರ್ ಮಹುವಾ ಅವರನ್ನು ಉಚ್ಛಾಟಿಸಿದ್ದು, ಈ ಕುರಿತು ಸಂಸತ್ತಿನ ಹೊರಗೆ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನೈತಿಕ ಸಮಿತಿಯು ಪ್ರತಿಯೊಂದು ನಿಯಮವನ್ನೂ ಉಲ್ಲಂಘಿಸಿದೆ. ನನಗೂ ಈ ಬಗ್ಗೆ ಮಾತನಾಡುವ ಹಕ್ಕಿದೆ’ ಎಂದರು.

‘ಅಸ್ತಿತ್ವದಲ್ಲೇ ಇಲ್ಲದ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಾನು ತಪ್ಪಿತಸ್ಥೆ ಎಂದು ಸಮಿತಿ ಸದಸ್ಯರು ಹೇಳಿದ್ದಾರೆ. ಸದಸ್ಯರು ತನ್ನ ವರದಿಯು ಪುಸ್ತಕದಲ್ಲಿನ ಪ್ರತಿಯೊಂದು ನಿಯಮಗಳನ್ನೂ ಮುರಿದಿದ್ದಾರೆ’ ಎಂದು ಕಿಡಿಕಾರಿದರು.

ಮೊಯಿತ್ರಾ ಅವರ ಉಚ್ಚಾಟನೆ ಆದೇಶ ಹೊರಬೀಳುತ್ತಿದ್ದಂತೆಯೇ ಸೋನಿಯಾ ಗಾಂಧಿ ಸೇರಿದಂತೆ ಇತರೆ ವಿರೋಧ ಪಕ್ಷದ ನಾಯಕರು ಲೋಕಸಭೆಯಿಂದ ಹೊರನಡೆದರು, ಕೇಂದ್ರ ಸರ್ಕಾರದ ಈ ಕ್ರಮವನ್ನು ‘ಅನೈತಿಕ ನಡವಳಿಕೆ’ ಎಂದು ವಾಗ್ದಾಳಿ ನಡೆಸಿದರು.

ಮಹುವಾ ಮೊಯಿತ್ರಾ ಅವರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡುವ ನೀತಿಸಂಹಿತೆ ಸಮಿತಿಯ ವರದಿಯನ್ನು ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದರು. ಇದೇ ವೇಳೆ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ‘ನಾನು ನಗದು ತೆಗೆದುಕೊಂಡಿದ್ದರೆ ಅದು ಎಲ್ಲಿದೆ ಎಂಬುದನ್ನು ನೀವು ಸಾಬೀತು ಮಾಡಬೇಕಾಗಿದೆ’ ಎಂದು ಮಹುವಾ ಮೊಯಿತ್ರಾ ಪ್ರಶ್ನಿಸಿದರು.

ಮಹುವಾ ಮೇಲಿನ ಆರೋಪವೇನು?

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನೂ ಓದಿ; ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...