Homeಚಳವಳಿವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್: ಠಾಣೆಗೆ ಹೋಗುತ್ತೇನೆ, ಹೋರಾಟ ಮುಂದುವರೆಸುತ್ತೇನೆ ಎಂದ ನಟ ಚೇತನ್‌

ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್: ಠಾಣೆಗೆ ಹೋಗುತ್ತೇನೆ, ಹೋರಾಟ ಮುಂದುವರೆಸುತ್ತೇನೆ ಎಂದ ನಟ ಚೇತನ್‌

ನಾಳೆ ಬೆಳಿಗ್ಗೆ ಪೊಲೀಸ್ ಠಾಣೆಗೆ ಹೋಗುತ್ತೇನೆ ಮತ್ತು ಸಂವಿಧಾನದ ಮೌಲ್ಯಗಳಾದ ಸಮಾನತೆ ಮತ್ತು ನ್ಯಾಯಕ್ಕಾಗಿನ ಹೋರಾಟ ಮುಂದುವರೆಯುತ್ತದೆ. - ನಟ ಚೇತನ್

- Advertisement -
- Advertisement -

ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ್ ತಮ್ಮ ವಿಡಿಯೋ ಮತ್ತು ಬರಹಗಳಲ್ಲಿ ’ಬ್ರಾಹ್ಮಣ್ಯ’ ಎಂಬ ಪದ ಬಳಸಿರುವುದರ ವಿರುದ್ಧ ವಿಶ್ವ ಯುವ ವೇದಿಕೆಯ ಪವನ್‌ ಕುಮಾರ್‌ ಎಂಬುವವರು ದೂರು ನೀಡಿರುವುದರ ಹಿನ್ನೆಲೆಯಲ್ಲಿ ಬಸವನಗುಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್‌ಗೆ ನೋಟಿಸ್ ನೀಡಿದ್ದಾರೆ.

ನಟ ಚೇತನ್‌ರವರು ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೋಗಳಿಗೆ ಸಂಬಂಧಿಸಿದಂತೆ ಯಾವ ಐಟಿಯಿಂದ ಅಪ್‌ಲೋಡ್ ಮಾಡಲಾಗಿದೆ ಎಂಬುದರ ಕುರಿತು ಮಾಹಿತಿ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

ಈ ಕುರಿತು ನಟ ಚೇತನ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿ “ಬ್ರಾಹ್ಮಣ್ಯದ ವಿರುದ್ಧದ ನನ್ನ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಕುರಿತು ತನಿಖೆಗಾಗಿ ಬಸವನಗುಡಿ ಪೊಲೀಸ್‌ ಠಾಣೆಗೆ ಹಾಜರಾಗುವಂತೆ ಇಂದು ನೋಟಿಸ್ ಸ್ವೀಕರಿಸಿದ್ದೇನೆ. ನಾಳೆ ಬೆಳಿಗ್ಗೆ ಪೊಲೀಸ್ ಠಾಣೆಗೆ ಹೋಗುತ್ತೇನೆ ಮತ್ತು ಸಂವಿಧಾನದ ಮೌಲ್ಯಗಳಾದ ಸಮಾನತೆ ಮತ್ತು ನ್ಯಾಯಕ್ಕಾಗಿನ ಹೋರಾಟ ಮುಂದುವರೆಯುತ್ತದೆ” ಎಂದು ತಿಳಿಸಿದ್ದಾರೆ.

‘ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಅವಮಾನ ಮಾಡಿರುತ್ತಾರೆ. ಇದರಿಂದ ಸಮುದಾಯ ಮಾನಸಿಕವಾಗಿ ನೊಂದಿದ್ದು, ರಾಜ್ಯಾದ್ಯಂತ ವಿವಿಧ ಸಂಘ ಸಂಸ್ಥೆಗಳು ನನಗೆ ಮನವಿ ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಎಂಬುವವರು ಸಹ ನಗರ ಪೊಲೀಸ್​ ಆಯುಕ್ತರಿಗೆ ಈ ಹಿಂದೆ ದೂರು ಸಲ್ಲಿಸಿದ್ದಾರೆ.

ನಟ ಚೇತನ್ ಪೋಸ್ಟ್‌ನಲ್ಲಿ ಇದ್ದದ್ದು ಏನು…?

ಜೂನ್ 6 ರಂದು ನಟ ಚೇತನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಪೆರಿಯಾರ್‌ ಅವರ ಹೇಳಿಕೆಗಳನ್ನು ಕೋಟ್ ಮಾಡಿ, ಪೋಸ್ಟ್ ಮಾಡಿದ್ದರು.
‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ — ಅಂಬೇಡ್ಕರ್
‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪ್ರಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ’- ಪೆರಿಯಾರ್

ಇಬ್ಬರ ಹೇಳಿಕೆಗಳ ಜೊತೆಗೆ #Brahminism #Ambedkar #Periyar ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದರು.

’ಚೇತನ್ ಅವರು ತಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧ ಹೊರತು ಬ್ರಾಹ್ಮಣರ ವಿರುದ್ಧ ಅಲ್ಲ ಅಂತ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಅವರೆಲ್ಲೂ ಜನಾಂಗದ ನಿಂದನೆ ಮಾಡಿಲ್ಲ. ಅವರ ಮೇಲಿನ ಈ ದಾಳಿ ನಿಲ್ಲಬೇಕು ಎಂದು ಹಲವರು ಚೇತನ್‌ ಬೆಂಬಲಕ್ಕೆ ನಿಂತಿದ್ದಾರೆ.


ಇದನ್ನೂ ಓದಿ; ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...