Homeಮುಖಪುಟನನ್ನ ಮೇಲಿನ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ

ನನ್ನ ಮೇಲಿನ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ, ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿದ ಸಿಂಗ್, ”ನನ್ನ ಮೇಲಿನ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕು ಮತ್ತು ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕಳೆದ ಎರಡು ವಾರಗಳಿಂದ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ದೆಹಲಿ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿತ್ತು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಬೆಂಬಲಕ್ಕಾಗಿ ದೇಶದ ರೈತರು, ಸಾರ್ವಜನಿಕರಿಗೆ ಬಜರಂಗ್ ಪುನಿಯಾ ಮನವಿ

ಶನಿವಾರದ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯ ಪ್ರಕಾರ, ಮೇ 7 ರಂದು, ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಸಂಘಟನೆಯ ಹಲವಾರು ಮುಖಂಡರು ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಾರೆ ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ನೀಡುತ್ತಾರೆ ಎಂದು ಹೇಳಲಾಗಿದೆ.

ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪದ ಕುರಿತು ಮಾತನಾಡಿದ ರೈತ ನಾಯಕ ಜೋಗಿಂದರ್ ಸಿಂಗ್, ”ಅವರು ಅಧಿಕಾರದಲ್ಲಿದ್ದಾರೆ. ಅಧಿಕಾರ ಮತ್ತು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವ ಈ ವ್ಯಕ್ತಿಯ ವಿರುದ್ಧ ನಿಲ್ಲುವುದು ತುಂಬಾ ಕಷ್ಟ. ಆದರೆ ನಾವು ಅದರ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

”ನಮ್ಮನ್ನು ತಡೆಯುವುದು ಸರ್ಕಾರದ ಕೆಲಸ ಆದರೆ ನಾವು ಹೋಗಬೇಕಾದ ಸ್ಥಳಕ್ಕೆ ನಾವು ಹೋಗುತ್ತೇವೆ, ಅವರು ನಮ್ಮನ್ನು ತಡೆಯಲು ಪ್ರಯತ್ನಿಸಿದರೆ ಅದು ಅವರಿಗೆ ನಷ್ಟವಾಗುತ್ತದೆ. ಇಲ್ಲಿ ಉಳಿಯುವ ಯಾವುದೇ ಯೋಜನೆ ಇಲ್ಲ, ಸರ್ಕಾರ ಮತ್ತು ಆಡಳಿತ ನಮ್ಮನ್ನು ತಡೆದರೆ, ನಾವು ಇಲ್ಲಿಯೇ ಇರಬೇಕಾಗುತ್ತದೆ” ಎಂದು ಅವರು ಎಎನ್‌ಐಗೆ ತಿಳಿಸಿದರು.

ಗಮನಾರ್ಹವಾದ ವಿಚಾರವೆಂದರೆ ಸಂಯುಕ್ತ ಕಿಸಾನ್ ಮೋರ್ಚಾ, ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಒಂದು ವರ್ಷದ ವರೆಗೆ ರೈತರ ಪ್ರತಿಭಟನೆಯನ್ನು ಮುನ್ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...