Homeಮುಖಪುಟ"ನಾನು ಈ ಬಗ್ಗೆ ಪರಿಶೀಲಿಸುತ್ತೇನೆ": ಬೀದಿ ನಾಯಿಗಳ ಕುರಿತ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಿಜೆಐ...

“ನಾನು ಈ ಬಗ್ಗೆ ಪರಿಶೀಲಿಸುತ್ತೇನೆ”: ಬೀದಿ ನಾಯಿಗಳ ಕುರಿತ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಿಜೆಐ ಪ್ರತಿಕ್ರಿಯೆ

- Advertisement -
- Advertisement -

ಬೀದಿ ನಾಯಿಗಳಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆಗಾಗಿ ಬುಧವಾರ (ಆ.13) ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ನೇತೃತ್ವದ ಪೀಠದ ಮುಂದೆ ಪ್ರಸ್ತಾಪಿಸಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ. “ನಾನು ಈ ಬಗ್ಗೆ ಪರಿಶೀಲಿಸುತ್ತೇನೆ” ಎಂದು ಅರ್ಜಿದಾರರಿಗೆ ಭರವಸೆ ನೀಡಿದರು.

ಕಾನ್ಫರೆನ್ಸ್ ಫಾರ್ ಹ್ಯೂಮನ್ ರೈಟ್ಸ್ (ಇಂಡಿಯಾ) ಸಂಸ್ಥೆಯ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠದ ಮುಂದೆ ಸಂಸ್ಥೆಯ ಪರ ವಕೀಲ ಪ್ರಸ್ತಾಪಿಸಿದರು. ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಮತ್ತೊಂದು ಪೀಠವು ಈಗಾಗಲೇ ಆದೇಶವನ್ನು ನೀಡಿದೆ ಎಂದು ಸಿಜೆಐ ಗಮನಸೆಳೆದರು.

ಆಗಸ್ಟ್ 11ರಂದು, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು, “ನಾಯಿ ಕಡಿತದ ಪ್ರಕರಣಗಳು ‘ಅತ್ಯಂತ ಭೀಕರ’ ಪರಿಸ್ಥಿತಿಗೆ ಕಾರಣವಾಗಿವೆ ಎಂದಿತ್ತು. ದೆಹಲಿ-ಎನ್‌ಸಿಆರ್‌ನಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ‘ಸಾಧ್ಯವಾದಷ್ಟು ಬೇಗ’ ಶಾಶ್ವತವಾಗಿ ಸ್ಥಳಾಂತರಿಸಲು ಆದೇಶಿಸಿತ್ತು.

ಬೀದಿ ನಾಯಿಗಳ ಸಮಸ್ಯೆಗೆ ಸಂಬಂಧಿಸಿದ ಅರ್ಜಿಗಳನ್ನು ಆಯಾ ಹೈಕೋರ್ಟ್‌ಗಳಿಗೆ ವರ್ಗಾಯಿಸಿ ನ್ಯಾಯಮೂರ್ತಿ ಜೆ.ಕೆ ಮಹೇಶ್ವರಿ ನೇತೃತ್ವದ ಪೀಠವು ಮೇ 2024ರಲ್ಲಿ ಹೊರಡಿಸಿದ ಆದೇಶವನ್ನು ಬುಧವಾರ ವಕೀಲರು ಸಿಜೆಐ ಪೀಠದ ಮುಂದೆ ಉಲ್ಲೇಖಿಸಿದರು. ‘ಈ ಬಗ್ಗೆ ನಾವು ಪರಿಶೀಲಿಸುತ್ತೇವೆ’ ಎಂದು ಸಿಜೆಐ ಹೇಳಿದರು.

ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ನಿಯಂತ್ರಿಸಲು ನಿಯಮಿತ ಸಂತಾನಹರಣ ಮತ್ತು ರೋಗನಿರೋಧಕ ಕಾರ್ಯಕ್ರಮಗಳನ್ನು ಕಡ್ಡಾಯಗೊಳಿಸುವ 2001ರ ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಕಾನ್ಫರೆನ್ಸ್ ಫಾರ್ ಹ್ಯೂಮನ್ ರೈಟ್ಸ್ (ಇಂಡಿಯಾ) ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ.

ಆಗಸ್ಟ್ 11ರ ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ನಾಯಿ ಆಶ್ರಯಗಳನ್ನು ಕಾಲಾನಂತರದಲ್ಲಿ ಹೆಚ್ಚಿಸಬೇಕಾಗುತ್ತದೆ ಎಂದು ಹೇಳಿತ್ತು. ಆರರಿಂದ ಎಂಟು ವಾರಗಳಲ್ಲಿ ಸುಮಾರು 5,000 ನಾಯಿಗಳ ಆಶ್ರಯವನ್ನು ಸ್ಥಾಪಿಸುವ ಮೂಲಕ ಈ ಕಾರ್ಯ ಪ್ರಾರಂಭಿಸಲು ದೆಹಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಇದಲ್ಲದೆ, ನಾಯಿಗಳ ಸ್ಥಳಾಂತರ ಕಾರ್ಯಾಚರಣೆ ವೇಳೆ ಯಾವುದೇ ರೀತಿಯ ಅಡಚಣೆ ಉಂಟಾದರೆ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನ್ಯಾಯಪೀಠ ಎಚ್ಚರಿಸಿತ್ತು. ಇದು ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕಾರಣವಾಗಬಹುದು ಎಂದಿತ್ತು

ನಾಯಿ ಕಡಿತ ಪ್ರಕರಣ: ಬಿಬಿಎಂಪಿ ವ್ಯಾಪ್ತಿಯ ಆರು ತಿಂಗಳಲ್ಲಿ 13,800 ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...