Homeಮುಖಪುಟ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

- Advertisement -
- Advertisement -

ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್‌ ಫೈಲ್ಸ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದು, ಚಿತ್ರದಲ್ಲಿ ಸತ್ಯವನ್ನು ತೋರಿಸಲಾಗಿದ್ದು, ಜನರು ತಪ್ಪದೇ ನೋಡಬೇಕು ಎಂದಿದ್ದಾರೆ.

ಕಾಶ್ಮೀರ್‌ ಫೈಲ್ಸ್‌ ಅಷ್ಟೇ ಅಲ್ಲ, ದಲಿತ್‌ ಫೈಲ್ಸ್‌, ಗುಜರಾತ್ ಫೈಲ್ಸ್‌, ನೆಲ್ಲಿ ಫೈಲ್ಸ್‌ ಹೀಗೆ ಹಲವು ಕಥೆಗಳ ಕುರಿತು ಸಿನಿಮಾ ಮಾಡಬೇಕು. ಸರ್ಕಾರ ಒಂದು ಸಿನಿಮಾವನ್ನು ತನ್ನ ಪ್ರೊಪಗಾಂಡಕ್ಕೆ ಬಳಸಬಾರದು ಎಂಬ ಚರ್ಚೆ ಮುನ್ನೆಲೆಯಲ್ಲಿದೆ.

ಇದರ ನಡುವೆ ಬಾಲಿವುಡ್ ನಿರ್ದೇಶಕ ವಿನೋದ್ ಕಾಪ್ರಿ ಶೀಘ್ರದಲ್ಲೇ ಗುಜರಾತ್ ಫೈಲ್ಸ್ ಎಂಬ ಹೊಸ ಚಿತ್ರವನ್ನು ಮಾಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿಯವರಿಗೆ ಕೆಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ‘ಗುಜರಾತ್ ಫೈಲ್ಸ್‌’ ಸಂಬಂಧ ಎರಡು ಟ್ವೀಟ್‌ ಮಾಡಿದ್ದಾರೆ.

ವಿನೋದ್ ಕಾಪ್ರಿ ಅವರು ತಮ್ಮ ಮೊದಲ ಟ್ವೀಟ್‌ನಲ್ಲಿ ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿದ್ದು, ‘ಗುಜರಾತ್ ಫೈಲ್ಸ್ ಹೆಸರಿನಲ್ಲಿ, ಕಲೆ ಹಾಗೂ ಸತ್ಯಗಳ ಆಧಾರದ ಮೇಲೆ ಚಲನಚಿತ್ರ ಮಾಡಲು ನಾನು ಸಿದ್ಧನಿದ್ದೇನೆ. ಅದರಲ್ಲಿ ನಿಮ್ಮ ಪಾತ್ರವನ್ನು ಸಹ ವಿವರವಾಗಿ ತೋರಿಸಲಾಗುತ್ತಿದೆ’ ಎಂದಿದ್ದಾರೆ. ಮುಂದುವರಿದು, ‘ನರೇಂದ್ರ ಮೋದಿ ಜಿ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದಿಲ್ಲ ಎಂದು ನೀವು ಇಂದು ದೇಶದ ಮುಂದೆ ನನಗೆ ಭರವಸೆ ನೀಡುತ್ತೀರಾ?’ ಎಂದು ಕೇಳಿದ್ದಾರೆ.

ಎರಡನೇ ಟ್ವೀಟ್‌ನಲ್ಲಿ, ವಿನೋದ್ ಕಾಪ್ರಿ, “ನನ್ನ ಈ ಟ್ವೀಟ್ ನಂತರ, ನಾನು ಕೆಲವು ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಗುಜರಾತ್ ಫೈಲ್ಸ್ ನಿರ್ಮಿಸಲು ಸಿದ್ಧರಾಗಿದ್ದಾರೆ. ಈಗ ಪ್ರಧಾನಿಯವರು ಹೇಳುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭರವಸೆಯನ್ನು ಈ ಚಿತ್ರಕ್ಕೂ ನೀಡಬೇಕು ಎಂಬ ಭರವಸೆ ಮಾತ್ರ ಅವರಿಗೆ ಬೇಕಾಗಿದೆ” ಎಂದಿದ್ದಾರೆ. ವಿನೋದ್ ಕಾಪ್ರಿ ಅವರ ಈ ಎರಡೂ ಟ್ವೀಟ್‌ಗಳು ಹೆಚ್ಚು ವೈರಲ್ ಆಗುತ್ತಿವೆ.

‘ಕಾಶ್ಮೀರ್‌ ಫೈಲ್ಸ್’ ಎನ್ನುವವರಿಗೆ ‘ದಲಿತ್‌ ಫೈಲ್ಸ್’ ಕಾಣುವುದಿಲ್ಲವೇ?

ಡಿಸೆಂಬರ್‌ 15, 2021ರಲ್ಲಿ ಪ್ರಕಟವಾಗಿರುವ ಸುದ್ದಿ ಇದು. ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ಶ್ರೀನಗರ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯ ಡಿಎಸ್‌‌ಪಿ, “1990ರಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ 1,724 ಜನರನ್ನು ಕೊಲ್ಲಲಾಗಿದೆ. ಅದರಲ್ಲಿ 89 ಕಾಶ್ಮೀರಿ ಪಂಡಿತರು ಸೇರಿದ್ದಾರೆ. 89 ಕಾಶ್ಮೀರಿ ಪಂಡಿತರನ್ನು ಹೊರತುಪಡಿಸಿ, ಅದೇ ಅವಧಿಯಲ್ಲಿ 1,635 ಇತರ ಧರ್ಮದ ಜನರೂ ಕೊಲೆಯಾಗಿದ್ದಾರೆ” ಎಂದಿದ್ದರು.

ಯಾವುದೇ ಕೊಲೆ, ಅಪರಾಧ ಖಂಡನೀಯ. ಆದರೆ ಕಾಶ್ಮೀರ್ ಫೈಲ್ಸ್ ಎನ್ನುವವವರು ದಲಿತ್ ಫೈಲ್ಸ್‌ಗಳ ಬಗ್ಗೆ ಯಾಕೆ ಮೌನ ವಹಿಸುತ್ತಾರೆ ಎಂದು ಕೇಳಲಾಗುತ್ತಿದೆ. ನ್ಯಾಷನಲ್‌ ಕ್ರೈಮ್‌ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, 2011 ಮತ್ತು 2020ರ ನಡುವೆ ನಡೆದ ದಲಿತರ ಮೇಲಿನ ದೌರ್ಜನ್ಯಗಳ ಸಂಖ್ಯೆ 4,15,821. ಎನ್‌ಸಿಆರ್‌ಬಿ ಮಾಹಿತಿಯ ಪ್ರಕಾರ, 2011ರಲ್ಲಿ ದಲಿತರ ವಿರುದ್ಧ 33,719 ಅಪರಾಧ ಪ್ರಕರಣಗಳು ದಾಖಲಾಗಿವೆ. 2020ರಲ್ಲಿ ಈ ಸಂಖ್ಯೆ 50,291ಕ್ಕೆ ಏರಿದೆ. ಅಂದರೆ ಒಂದು ದಶಕದ ಅವಧಿಯಲ್ಲಿ ದಲಿತರ ಮೇಲೆ ಹಲ್ಲೆಗಳು ಗಣನೀಯವಾಗಿ ಹೆಚ್ಚಾದವು. ಮುಖ್ಯವಾಗಿ ಕೇಸರಿ ಪಕ್ಷ ಆಡಳಿತವಿರುವಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ದ್ವಿಗುಣವಾಗುತ್ತಿವೆ. ಕಳೆದ ಒಂದು ದಶಕದ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶ (95,751), ಬಿಹಾರ (63,116), ರಾಜಸ್ಥಾನ (58,945), ಮಧ್ಯಪ್ರದೇಶ (44,469) ಮತ್ತು ಆಂಧ್ರಪ್ರದೇಶ (26,881) ರಾಜ್ಯಗಳಲ್ಲಿ ದಾಖಲಾಗಿವೆ. (ವಿವರಗಳಿಗೆ ‘ಇಲ್ಲಿ’ ಓದಿ)


ಇದನ್ನೂ ಓದಿರಿ: ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...