Homeಮುಖಪುಟ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

- Advertisement -
- Advertisement -

ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್‌ ಫೈಲ್ಸ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದು, ಚಿತ್ರದಲ್ಲಿ ಸತ್ಯವನ್ನು ತೋರಿಸಲಾಗಿದ್ದು, ಜನರು ತಪ್ಪದೇ ನೋಡಬೇಕು ಎಂದಿದ್ದಾರೆ.

ಕಾಶ್ಮೀರ್‌ ಫೈಲ್ಸ್‌ ಅಷ್ಟೇ ಅಲ್ಲ, ದಲಿತ್‌ ಫೈಲ್ಸ್‌, ಗುಜರಾತ್ ಫೈಲ್ಸ್‌, ನೆಲ್ಲಿ ಫೈಲ್ಸ್‌ ಹೀಗೆ ಹಲವು ಕಥೆಗಳ ಕುರಿತು ಸಿನಿಮಾ ಮಾಡಬೇಕು. ಸರ್ಕಾರ ಒಂದು ಸಿನಿಮಾವನ್ನು ತನ್ನ ಪ್ರೊಪಗಾಂಡಕ್ಕೆ ಬಳಸಬಾರದು ಎಂಬ ಚರ್ಚೆ ಮುನ್ನೆಲೆಯಲ್ಲಿದೆ.

ಇದರ ನಡುವೆ ಬಾಲಿವುಡ್ ನಿರ್ದೇಶಕ ವಿನೋದ್ ಕಾಪ್ರಿ ಶೀಘ್ರದಲ್ಲೇ ಗುಜರಾತ್ ಫೈಲ್ಸ್ ಎಂಬ ಹೊಸ ಚಿತ್ರವನ್ನು ಮಾಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿಯವರಿಗೆ ಕೆಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ‘ಗುಜರಾತ್ ಫೈಲ್ಸ್‌’ ಸಂಬಂಧ ಎರಡು ಟ್ವೀಟ್‌ ಮಾಡಿದ್ದಾರೆ.

ವಿನೋದ್ ಕಾಪ್ರಿ ಅವರು ತಮ್ಮ ಮೊದಲ ಟ್ವೀಟ್‌ನಲ್ಲಿ ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿದ್ದು, ‘ಗುಜರಾತ್ ಫೈಲ್ಸ್ ಹೆಸರಿನಲ್ಲಿ, ಕಲೆ ಹಾಗೂ ಸತ್ಯಗಳ ಆಧಾರದ ಮೇಲೆ ಚಲನಚಿತ್ರ ಮಾಡಲು ನಾನು ಸಿದ್ಧನಿದ್ದೇನೆ. ಅದರಲ್ಲಿ ನಿಮ್ಮ ಪಾತ್ರವನ್ನು ಸಹ ವಿವರವಾಗಿ ತೋರಿಸಲಾಗುತ್ತಿದೆ’ ಎಂದಿದ್ದಾರೆ. ಮುಂದುವರಿದು, ‘ನರೇಂದ್ರ ಮೋದಿ ಜಿ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದಿಲ್ಲ ಎಂದು ನೀವು ಇಂದು ದೇಶದ ಮುಂದೆ ನನಗೆ ಭರವಸೆ ನೀಡುತ್ತೀರಾ?’ ಎಂದು ಕೇಳಿದ್ದಾರೆ.

ಎರಡನೇ ಟ್ವೀಟ್‌ನಲ್ಲಿ, ವಿನೋದ್ ಕಾಪ್ರಿ, “ನನ್ನ ಈ ಟ್ವೀಟ್ ನಂತರ, ನಾನು ಕೆಲವು ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಗುಜರಾತ್ ಫೈಲ್ಸ್ ನಿರ್ಮಿಸಲು ಸಿದ್ಧರಾಗಿದ್ದಾರೆ. ಈಗ ಪ್ರಧಾನಿಯವರು ಹೇಳುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭರವಸೆಯನ್ನು ಈ ಚಿತ್ರಕ್ಕೂ ನೀಡಬೇಕು ಎಂಬ ಭರವಸೆ ಮಾತ್ರ ಅವರಿಗೆ ಬೇಕಾಗಿದೆ” ಎಂದಿದ್ದಾರೆ. ವಿನೋದ್ ಕಾಪ್ರಿ ಅವರ ಈ ಎರಡೂ ಟ್ವೀಟ್‌ಗಳು ಹೆಚ್ಚು ವೈರಲ್ ಆಗುತ್ತಿವೆ.

‘ಕಾಶ್ಮೀರ್‌ ಫೈಲ್ಸ್’ ಎನ್ನುವವರಿಗೆ ‘ದಲಿತ್‌ ಫೈಲ್ಸ್’ ಕಾಣುವುದಿಲ್ಲವೇ?

ಡಿಸೆಂಬರ್‌ 15, 2021ರಲ್ಲಿ ಪ್ರಕಟವಾಗಿರುವ ಸುದ್ದಿ ಇದು. ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ಶ್ರೀನಗರ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯ ಡಿಎಸ್‌‌ಪಿ, “1990ರಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ 1,724 ಜನರನ್ನು ಕೊಲ್ಲಲಾಗಿದೆ. ಅದರಲ್ಲಿ 89 ಕಾಶ್ಮೀರಿ ಪಂಡಿತರು ಸೇರಿದ್ದಾರೆ. 89 ಕಾಶ್ಮೀರಿ ಪಂಡಿತರನ್ನು ಹೊರತುಪಡಿಸಿ, ಅದೇ ಅವಧಿಯಲ್ಲಿ 1,635 ಇತರ ಧರ್ಮದ ಜನರೂ ಕೊಲೆಯಾಗಿದ್ದಾರೆ” ಎಂದಿದ್ದರು.

ಯಾವುದೇ ಕೊಲೆ, ಅಪರಾಧ ಖಂಡನೀಯ. ಆದರೆ ಕಾಶ್ಮೀರ್ ಫೈಲ್ಸ್ ಎನ್ನುವವವರು ದಲಿತ್ ಫೈಲ್ಸ್‌ಗಳ ಬಗ್ಗೆ ಯಾಕೆ ಮೌನ ವಹಿಸುತ್ತಾರೆ ಎಂದು ಕೇಳಲಾಗುತ್ತಿದೆ. ನ್ಯಾಷನಲ್‌ ಕ್ರೈಮ್‌ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, 2011 ಮತ್ತು 2020ರ ನಡುವೆ ನಡೆದ ದಲಿತರ ಮೇಲಿನ ದೌರ್ಜನ್ಯಗಳ ಸಂಖ್ಯೆ 4,15,821. ಎನ್‌ಸಿಆರ್‌ಬಿ ಮಾಹಿತಿಯ ಪ್ರಕಾರ, 2011ರಲ್ಲಿ ದಲಿತರ ವಿರುದ್ಧ 33,719 ಅಪರಾಧ ಪ್ರಕರಣಗಳು ದಾಖಲಾಗಿವೆ. 2020ರಲ್ಲಿ ಈ ಸಂಖ್ಯೆ 50,291ಕ್ಕೆ ಏರಿದೆ. ಅಂದರೆ ಒಂದು ದಶಕದ ಅವಧಿಯಲ್ಲಿ ದಲಿತರ ಮೇಲೆ ಹಲ್ಲೆಗಳು ಗಣನೀಯವಾಗಿ ಹೆಚ್ಚಾದವು. ಮುಖ್ಯವಾಗಿ ಕೇಸರಿ ಪಕ್ಷ ಆಡಳಿತವಿರುವಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ದ್ವಿಗುಣವಾಗುತ್ತಿವೆ. ಕಳೆದ ಒಂದು ದಶಕದ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶ (95,751), ಬಿಹಾರ (63,116), ರಾಜಸ್ಥಾನ (58,945), ಮಧ್ಯಪ್ರದೇಶ (44,469) ಮತ್ತು ಆಂಧ್ರಪ್ರದೇಶ (26,881) ರಾಜ್ಯಗಳಲ್ಲಿ ದಾಖಲಾಗಿವೆ. (ವಿವರಗಳಿಗೆ ‘ಇಲ್ಲಿ’ ಓದಿ)


ಇದನ್ನೂ ಓದಿರಿ: ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...