Homeಮುಖಪುಟ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

- Advertisement -
- Advertisement -

ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್‌ ಫೈಲ್ಸ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದು, ಚಿತ್ರದಲ್ಲಿ ಸತ್ಯವನ್ನು ತೋರಿಸಲಾಗಿದ್ದು, ಜನರು ತಪ್ಪದೇ ನೋಡಬೇಕು ಎಂದಿದ್ದಾರೆ.

ಕಾಶ್ಮೀರ್‌ ಫೈಲ್ಸ್‌ ಅಷ್ಟೇ ಅಲ್ಲ, ದಲಿತ್‌ ಫೈಲ್ಸ್‌, ಗುಜರಾತ್ ಫೈಲ್ಸ್‌, ನೆಲ್ಲಿ ಫೈಲ್ಸ್‌ ಹೀಗೆ ಹಲವು ಕಥೆಗಳ ಕುರಿತು ಸಿನಿಮಾ ಮಾಡಬೇಕು. ಸರ್ಕಾರ ಒಂದು ಸಿನಿಮಾವನ್ನು ತನ್ನ ಪ್ರೊಪಗಾಂಡಕ್ಕೆ ಬಳಸಬಾರದು ಎಂಬ ಚರ್ಚೆ ಮುನ್ನೆಲೆಯಲ್ಲಿದೆ.

ಇದರ ನಡುವೆ ಬಾಲಿವುಡ್ ನಿರ್ದೇಶಕ ವಿನೋದ್ ಕಾಪ್ರಿ ಶೀಘ್ರದಲ್ಲೇ ಗುಜರಾತ್ ಫೈಲ್ಸ್ ಎಂಬ ಹೊಸ ಚಿತ್ರವನ್ನು ಮಾಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿಯವರಿಗೆ ಕೆಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ‘ಗುಜರಾತ್ ಫೈಲ್ಸ್‌’ ಸಂಬಂಧ ಎರಡು ಟ್ವೀಟ್‌ ಮಾಡಿದ್ದಾರೆ.

ವಿನೋದ್ ಕಾಪ್ರಿ ಅವರು ತಮ್ಮ ಮೊದಲ ಟ್ವೀಟ್‌ನಲ್ಲಿ ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿದ್ದು, ‘ಗುಜರಾತ್ ಫೈಲ್ಸ್ ಹೆಸರಿನಲ್ಲಿ, ಕಲೆ ಹಾಗೂ ಸತ್ಯಗಳ ಆಧಾರದ ಮೇಲೆ ಚಲನಚಿತ್ರ ಮಾಡಲು ನಾನು ಸಿದ್ಧನಿದ್ದೇನೆ. ಅದರಲ್ಲಿ ನಿಮ್ಮ ಪಾತ್ರವನ್ನು ಸಹ ವಿವರವಾಗಿ ತೋರಿಸಲಾಗುತ್ತಿದೆ’ ಎಂದಿದ್ದಾರೆ. ಮುಂದುವರಿದು, ‘ನರೇಂದ್ರ ಮೋದಿ ಜಿ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದಿಲ್ಲ ಎಂದು ನೀವು ಇಂದು ದೇಶದ ಮುಂದೆ ನನಗೆ ಭರವಸೆ ನೀಡುತ್ತೀರಾ?’ ಎಂದು ಕೇಳಿದ್ದಾರೆ.

ಎರಡನೇ ಟ್ವೀಟ್‌ನಲ್ಲಿ, ವಿನೋದ್ ಕಾಪ್ರಿ, “ನನ್ನ ಈ ಟ್ವೀಟ್ ನಂತರ, ನಾನು ಕೆಲವು ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಗುಜರಾತ್ ಫೈಲ್ಸ್ ನಿರ್ಮಿಸಲು ಸಿದ್ಧರಾಗಿದ್ದಾರೆ. ಈಗ ಪ್ರಧಾನಿಯವರು ಹೇಳುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭರವಸೆಯನ್ನು ಈ ಚಿತ್ರಕ್ಕೂ ನೀಡಬೇಕು ಎಂಬ ಭರವಸೆ ಮಾತ್ರ ಅವರಿಗೆ ಬೇಕಾಗಿದೆ” ಎಂದಿದ್ದಾರೆ. ವಿನೋದ್ ಕಾಪ್ರಿ ಅವರ ಈ ಎರಡೂ ಟ್ವೀಟ್‌ಗಳು ಹೆಚ್ಚು ವೈರಲ್ ಆಗುತ್ತಿವೆ.

‘ಕಾಶ್ಮೀರ್‌ ಫೈಲ್ಸ್’ ಎನ್ನುವವರಿಗೆ ‘ದಲಿತ್‌ ಫೈಲ್ಸ್’ ಕಾಣುವುದಿಲ್ಲವೇ?

ಡಿಸೆಂಬರ್‌ 15, 2021ರಲ್ಲಿ ಪ್ರಕಟವಾಗಿರುವ ಸುದ್ದಿ ಇದು. ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ಶ್ರೀನಗರ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯ ಡಿಎಸ್‌‌ಪಿ, “1990ರಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ 1,724 ಜನರನ್ನು ಕೊಲ್ಲಲಾಗಿದೆ. ಅದರಲ್ಲಿ 89 ಕಾಶ್ಮೀರಿ ಪಂಡಿತರು ಸೇರಿದ್ದಾರೆ. 89 ಕಾಶ್ಮೀರಿ ಪಂಡಿತರನ್ನು ಹೊರತುಪಡಿಸಿ, ಅದೇ ಅವಧಿಯಲ್ಲಿ 1,635 ಇತರ ಧರ್ಮದ ಜನರೂ ಕೊಲೆಯಾಗಿದ್ದಾರೆ” ಎಂದಿದ್ದರು.

ಯಾವುದೇ ಕೊಲೆ, ಅಪರಾಧ ಖಂಡನೀಯ. ಆದರೆ ಕಾಶ್ಮೀರ್ ಫೈಲ್ಸ್ ಎನ್ನುವವವರು ದಲಿತ್ ಫೈಲ್ಸ್‌ಗಳ ಬಗ್ಗೆ ಯಾಕೆ ಮೌನ ವಹಿಸುತ್ತಾರೆ ಎಂದು ಕೇಳಲಾಗುತ್ತಿದೆ. ನ್ಯಾಷನಲ್‌ ಕ್ರೈಮ್‌ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, 2011 ಮತ್ತು 2020ರ ನಡುವೆ ನಡೆದ ದಲಿತರ ಮೇಲಿನ ದೌರ್ಜನ್ಯಗಳ ಸಂಖ್ಯೆ 4,15,821. ಎನ್‌ಸಿಆರ್‌ಬಿ ಮಾಹಿತಿಯ ಪ್ರಕಾರ, 2011ರಲ್ಲಿ ದಲಿತರ ವಿರುದ್ಧ 33,719 ಅಪರಾಧ ಪ್ರಕರಣಗಳು ದಾಖಲಾಗಿವೆ. 2020ರಲ್ಲಿ ಈ ಸಂಖ್ಯೆ 50,291ಕ್ಕೆ ಏರಿದೆ. ಅಂದರೆ ಒಂದು ದಶಕದ ಅವಧಿಯಲ್ಲಿ ದಲಿತರ ಮೇಲೆ ಹಲ್ಲೆಗಳು ಗಣನೀಯವಾಗಿ ಹೆಚ್ಚಾದವು. ಮುಖ್ಯವಾಗಿ ಕೇಸರಿ ಪಕ್ಷ ಆಡಳಿತವಿರುವಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ದ್ವಿಗುಣವಾಗುತ್ತಿವೆ. ಕಳೆದ ಒಂದು ದಶಕದ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶ (95,751), ಬಿಹಾರ (63,116), ರಾಜಸ್ಥಾನ (58,945), ಮಧ್ಯಪ್ರದೇಶ (44,469) ಮತ್ತು ಆಂಧ್ರಪ್ರದೇಶ (26,881) ರಾಜ್ಯಗಳಲ್ಲಿ ದಾಖಲಾಗಿವೆ. (ವಿವರಗಳಿಗೆ ‘ಇಲ್ಲಿ’ ಓದಿ)


ಇದನ್ನೂ ಓದಿರಿ: ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...