Homeಮುಖಪುಟ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

- Advertisement -
- Advertisement -

ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್‌ ಫೈಲ್ಸ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದು, ಚಿತ್ರದಲ್ಲಿ ಸತ್ಯವನ್ನು ತೋರಿಸಲಾಗಿದ್ದು, ಜನರು ತಪ್ಪದೇ ನೋಡಬೇಕು ಎಂದಿದ್ದಾರೆ.

ಕಾಶ್ಮೀರ್‌ ಫೈಲ್ಸ್‌ ಅಷ್ಟೇ ಅಲ್ಲ, ದಲಿತ್‌ ಫೈಲ್ಸ್‌, ಗುಜರಾತ್ ಫೈಲ್ಸ್‌, ನೆಲ್ಲಿ ಫೈಲ್ಸ್‌ ಹೀಗೆ ಹಲವು ಕಥೆಗಳ ಕುರಿತು ಸಿನಿಮಾ ಮಾಡಬೇಕು. ಸರ್ಕಾರ ಒಂದು ಸಿನಿಮಾವನ್ನು ತನ್ನ ಪ್ರೊಪಗಾಂಡಕ್ಕೆ ಬಳಸಬಾರದು ಎಂಬ ಚರ್ಚೆ ಮುನ್ನೆಲೆಯಲ್ಲಿದೆ.

ಇದರ ನಡುವೆ ಬಾಲಿವುಡ್ ನಿರ್ದೇಶಕ ವಿನೋದ್ ಕಾಪ್ರಿ ಶೀಘ್ರದಲ್ಲೇ ಗುಜರಾತ್ ಫೈಲ್ಸ್ ಎಂಬ ಹೊಸ ಚಿತ್ರವನ್ನು ಮಾಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿಯವರಿಗೆ ಕೆಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ‘ಗುಜರಾತ್ ಫೈಲ್ಸ್‌’ ಸಂಬಂಧ ಎರಡು ಟ್ವೀಟ್‌ ಮಾಡಿದ್ದಾರೆ.

ವಿನೋದ್ ಕಾಪ್ರಿ ಅವರು ತಮ್ಮ ಮೊದಲ ಟ್ವೀಟ್‌ನಲ್ಲಿ ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿದ್ದು, ‘ಗುಜರಾತ್ ಫೈಲ್ಸ್ ಹೆಸರಿನಲ್ಲಿ, ಕಲೆ ಹಾಗೂ ಸತ್ಯಗಳ ಆಧಾರದ ಮೇಲೆ ಚಲನಚಿತ್ರ ಮಾಡಲು ನಾನು ಸಿದ್ಧನಿದ್ದೇನೆ. ಅದರಲ್ಲಿ ನಿಮ್ಮ ಪಾತ್ರವನ್ನು ಸಹ ವಿವರವಾಗಿ ತೋರಿಸಲಾಗುತ್ತಿದೆ’ ಎಂದಿದ್ದಾರೆ. ಮುಂದುವರಿದು, ‘ನರೇಂದ್ರ ಮೋದಿ ಜಿ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದಿಲ್ಲ ಎಂದು ನೀವು ಇಂದು ದೇಶದ ಮುಂದೆ ನನಗೆ ಭರವಸೆ ನೀಡುತ್ತೀರಾ?’ ಎಂದು ಕೇಳಿದ್ದಾರೆ.

ಎರಡನೇ ಟ್ವೀಟ್‌ನಲ್ಲಿ, ವಿನೋದ್ ಕಾಪ್ರಿ, “ನನ್ನ ಈ ಟ್ವೀಟ್ ನಂತರ, ನಾನು ಕೆಲವು ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಗುಜರಾತ್ ಫೈಲ್ಸ್ ನಿರ್ಮಿಸಲು ಸಿದ್ಧರಾಗಿದ್ದಾರೆ. ಈಗ ಪ್ರಧಾನಿಯವರು ಹೇಳುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭರವಸೆಯನ್ನು ಈ ಚಿತ್ರಕ್ಕೂ ನೀಡಬೇಕು ಎಂಬ ಭರವಸೆ ಮಾತ್ರ ಅವರಿಗೆ ಬೇಕಾಗಿದೆ” ಎಂದಿದ್ದಾರೆ. ವಿನೋದ್ ಕಾಪ್ರಿ ಅವರ ಈ ಎರಡೂ ಟ್ವೀಟ್‌ಗಳು ಹೆಚ್ಚು ವೈರಲ್ ಆಗುತ್ತಿವೆ.

‘ಕಾಶ್ಮೀರ್‌ ಫೈಲ್ಸ್’ ಎನ್ನುವವರಿಗೆ ‘ದಲಿತ್‌ ಫೈಲ್ಸ್’ ಕಾಣುವುದಿಲ್ಲವೇ?

ಡಿಸೆಂಬರ್‌ 15, 2021ರಲ್ಲಿ ಪ್ರಕಟವಾಗಿರುವ ಸುದ್ದಿ ಇದು. ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ಶ್ರೀನಗರ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯ ಡಿಎಸ್‌‌ಪಿ, “1990ರಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ 1,724 ಜನರನ್ನು ಕೊಲ್ಲಲಾಗಿದೆ. ಅದರಲ್ಲಿ 89 ಕಾಶ್ಮೀರಿ ಪಂಡಿತರು ಸೇರಿದ್ದಾರೆ. 89 ಕಾಶ್ಮೀರಿ ಪಂಡಿತರನ್ನು ಹೊರತುಪಡಿಸಿ, ಅದೇ ಅವಧಿಯಲ್ಲಿ 1,635 ಇತರ ಧರ್ಮದ ಜನರೂ ಕೊಲೆಯಾಗಿದ್ದಾರೆ” ಎಂದಿದ್ದರು.

ಯಾವುದೇ ಕೊಲೆ, ಅಪರಾಧ ಖಂಡನೀಯ. ಆದರೆ ಕಾಶ್ಮೀರ್ ಫೈಲ್ಸ್ ಎನ್ನುವವವರು ದಲಿತ್ ಫೈಲ್ಸ್‌ಗಳ ಬಗ್ಗೆ ಯಾಕೆ ಮೌನ ವಹಿಸುತ್ತಾರೆ ಎಂದು ಕೇಳಲಾಗುತ್ತಿದೆ. ನ್ಯಾಷನಲ್‌ ಕ್ರೈಮ್‌ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, 2011 ಮತ್ತು 2020ರ ನಡುವೆ ನಡೆದ ದಲಿತರ ಮೇಲಿನ ದೌರ್ಜನ್ಯಗಳ ಸಂಖ್ಯೆ 4,15,821. ಎನ್‌ಸಿಆರ್‌ಬಿ ಮಾಹಿತಿಯ ಪ್ರಕಾರ, 2011ರಲ್ಲಿ ದಲಿತರ ವಿರುದ್ಧ 33,719 ಅಪರಾಧ ಪ್ರಕರಣಗಳು ದಾಖಲಾಗಿವೆ. 2020ರಲ್ಲಿ ಈ ಸಂಖ್ಯೆ 50,291ಕ್ಕೆ ಏರಿದೆ. ಅಂದರೆ ಒಂದು ದಶಕದ ಅವಧಿಯಲ್ಲಿ ದಲಿತರ ಮೇಲೆ ಹಲ್ಲೆಗಳು ಗಣನೀಯವಾಗಿ ಹೆಚ್ಚಾದವು. ಮುಖ್ಯವಾಗಿ ಕೇಸರಿ ಪಕ್ಷ ಆಡಳಿತವಿರುವಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ದ್ವಿಗುಣವಾಗುತ್ತಿವೆ. ಕಳೆದ ಒಂದು ದಶಕದ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶ (95,751), ಬಿಹಾರ (63,116), ರಾಜಸ್ಥಾನ (58,945), ಮಧ್ಯಪ್ರದೇಶ (44,469) ಮತ್ತು ಆಂಧ್ರಪ್ರದೇಶ (26,881) ರಾಜ್ಯಗಳಲ್ಲಿ ದಾಖಲಾಗಿವೆ. (ವಿವರಗಳಿಗೆ ‘ಇಲ್ಲಿ’ ಓದಿ)


ಇದನ್ನೂ ಓದಿರಿ: ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...