Homeಮುಖಪುಟಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ: ರಾಹುಲ್‌ ಗಾಂಧಿ

ಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ: ರಾಹುಲ್‌ ಗಾಂಧಿ

- Advertisement -
- Advertisement -

ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ರಾಹುಲ್ ಗಾಂಧಿಯವರ ‘ರೇಪ್ ಇನ್ ಇಂಡಿಯಾ’ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಇಂದು ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲಿಯೂ ತೀವ್ರ ಪ್ರತಿಭಟನೆ ನಡೆದಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರೆ ರಾಜನಾಥ್‌ ಸಿಂಗ್‌ ಲೋಕಸಭೆಯಲ್ಲಿ ಗುಡುಗಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ. ಈ ಹಿಂದೆ ದೆಹಲಿ ದೇಶದ ಅತ್ಯಾಚಾರದ ರಾಜಧಾನಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ವಿಡಿಯೋ ನನ್ನ ಬಳಿ ಇದೆ. ಅದನ್ನು ಟ್ವೀಟ್‌ ಮಾಡುತ್ತೇನೆ ಎಲ್ಲರಿಗು ತಿಳಿಯಲಿ. ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರವು ದೊಡ್ಡ ಪ್ರತಿಭಟನೆಗಳಿಂದ ಜನರ ಮನಸನ್ನು ಬೇರೆಡೆಗೆ ತಿರುಗಿಸಲು ಬಿಜಿಪಿ ಷಡ್ಯಂತ್ರ ರೂಪಿಸಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಈ ರೀತಿಯ ಹೇಳಿಕೆಗಳನ್ನು ನೀಡುವ ವ್ಯಕ್ತಿ ಈ ಸದನದ ಸದಸ್ಯನಾಗಿರಲು ಸಾಧ್ಯವಿಲ್ಲ ಎಂದು ರಾಜನಾಥ್‌ ಸಿಂಗ್‌ ಆಕ್ರೋಶ ವ್ಯಕ್ತಿಪಡಿಸಿದ್ದರು.

“ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ನಾಯಕ ಭಾರತೀಯ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಬೇಕೆಂದು ಸ್ಪಷ್ಟ ಕರೆ ನೀಡುತ್ತಿದ್ದಾನೆ. ಇದು ದೇಶದ ಜನರಿಗೆ ರಾಹುಲ್ ಗಾಂಧಿಯವರ ಸಂದೇಶವೇ? ಅವರಿಗೆ ಶಿಕ್ಷೆಯಾಗಬೇಕು” ಎಂದು ಸ್ಮೃತಿ ಇರಾನಿ ಲೋಕಸಭೆಯಲ್ಲಿ ಹೇಳಿದರು.

ರಾಜ್ಯಸಭೆಯಲ್ಲಿ ಸದಸ್ಯರು ರಾಹುಲ್‌ ಗಾಂಧಿಯವರ ಹೇಳಿಕೆಗೆ ವಿರುದ್ಧವಾಗಿ ‘ರಾಹುಲ್ ಗಾಂಧಿ ಮಾಫಿ ಮಾವು’ ಎಂಬ ಘೋಷಣೆಗಳನ್ನು ಕೂಗಿದರು.

“ಈ ಸದನದ ಸದಸ್ಯರಲ್ಲದ ವ್ಯಕ್ತಿಯ ಹೆಸರನ್ನು ನೀವು ತೆಗೆದುಕೊಳ್ಳಲು ಸಾಧ್ಯವಿಲ್ಲ. ಸದನವನ್ನು ತೊಂದರೆಗೊಳಿಸುವ ಹಕ್ಕು ಯಾರಿಗೂ ಇಲ್ಲ” ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಹೇಳಿದರು ಮತ್ತು ಕೋಲಾಹಲದ ನಂತರ ಉಭಯ ಸದನಗಳನ್ನು ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು. ಮೂರು ಬಾರಿ ಸದನವನ್ನು ಇದೇ ವಿಷಯಕ್ಕಾಗಿ ಮುಂದೂಡಬೇಕಾಗಿದೆ.

“ನರೇಂದ್ರ ಮೋದಿ ಅವರು‘ ಮೇಕ್ ಇನ್ ಇಂಡಿಯಾ ’ಎಂದು ಹೇಳಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ನೀವು ಎಲ್ಲಿ ನೋಡಿದರೂ ಅದು ‘ರೇಪ್ ಇನ್ ಇಂಡಿಯಾ’ ಆಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳೆಯ ಮೇಲೆ ಅತ್ಯಾಚಾರವೆಸಗಿದರು, ನಂತರ ಅವರು ಅಪಘಾತಕ್ಕೀಡಾದರು. ಆದರೆ ನರೇಂದ್ರ ಮೋದಿ ಅವರು ಈ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ” ಎಂದು ಜಾರ್ಖಂಡ್‌ನ ಗೊಡ್ಡಾದಲ್ಲಿ ಗುರುವಾರ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡುತ್ತಾ ರಾಹುಲ್‌ ಗಾಂಧಿ ಹೇಳಿದ್ದರು.

ಸ್ಮೃತಿ ಇರಾನಿಯವರ ಪ್ರತಿಭಟನೆಗೆ ಡಿಎಂಕೆ ಸಂಸದೆ ಕನಿಮೋಳಿ ತಿರುಗೇಟು ನೀಡಿದ್ದಾರೆ. ನಾವು ಗೌರವಿಸುವ ಪ್ರಧಾನಿ ಮೋದಿಯವರು ‘ಮೇಕ್ ಇನ್ ಇಂಡಿಯಾ’ ಎಂದು ಹೇಳಿದ್ದರು. ಆದರೆ ದೇಶದಲ್ಲಿ ಇಂದು ಏನು ನಡೆಯುತ್ತಿದೆ? ಅದನ್ನೇ ರಾಹುಲ್ ಗಾಂಧಿ ಸಹ ಹೇಳಲು ಉದ್ದೇಶಿಸಿದ್ದರು. ದುರದೃಷ್ಟವಶಾತ್ ಮೇಕ್ ಇನ್ ಇಂಡಿಯಾ ನಡೆಯುತ್ತಿಲ್ಲ ಬದಲಿಗೆ ದೇಶದ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಇದು ಒಂದು ಕಳವಳ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Rahul given example only i.e ho told make in India but it’s not change v/s only happen lots of rape cases in India but don’t mistake it i have respect to our nation women’s and every one woman like my mom, sisters,and ದೇವತೆ, ಸೋ smiti erani is given rang statement to social-media, please understand everyone…..

LEAVE A REPLY

Please enter your comment!
Please enter your name here

- Advertisment -

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com...

ವಯನಾಡ್ ಭೂಕುಸಿತ; ಪುನರ್ವಸತಿ ಕಾರ್ಯದಲ್ಲಿ ಸಂತ್ರಸ್ತರಿಗೆ 229 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರ್ಕಾರ, ಐಯುಎಂಎಲ್

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಸುಮಾರು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವು ಭಾನುವಾರ ಕಲ್ಪೆಟ್ಟಾದ ಪುನರ್ವಸತಿ ಪಟ್ಟಣದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ₹299...

ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ...

ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ

ಇಸ್ರೇಲ್ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯು ಟೆಹ್ರಾನ್‌ನ ಈಶಾನ್ಯ ನರ್ಮಕ್ ಜಿಲ್ಲೆಯಲ್ಲಿರುವ ಅಹ್ಮದಿನೆಜಾದ್...

ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ. ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್...

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ 'ಅಘೋಷಿತ ಯುದ್ದ'ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು. ಕಲಬುರಗಿ...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...