Homeಮುಖಪುಟಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ: ರಾಹುಲ್‌ ಗಾಂಧಿ

ಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ: ರಾಹುಲ್‌ ಗಾಂಧಿ

- Advertisement -
- Advertisement -

ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ರಾಹುಲ್ ಗಾಂಧಿಯವರ ‘ರೇಪ್ ಇನ್ ಇಂಡಿಯಾ’ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಇಂದು ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲಿಯೂ ತೀವ್ರ ಪ್ರತಿಭಟನೆ ನಡೆದಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರೆ ರಾಜನಾಥ್‌ ಸಿಂಗ್‌ ಲೋಕಸಭೆಯಲ್ಲಿ ಗುಡುಗಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ. ಈ ಹಿಂದೆ ದೆಹಲಿ ದೇಶದ ಅತ್ಯಾಚಾರದ ರಾಜಧಾನಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ವಿಡಿಯೋ ನನ್ನ ಬಳಿ ಇದೆ. ಅದನ್ನು ಟ್ವೀಟ್‌ ಮಾಡುತ್ತೇನೆ ಎಲ್ಲರಿಗು ತಿಳಿಯಲಿ. ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರವು ದೊಡ್ಡ ಪ್ರತಿಭಟನೆಗಳಿಂದ ಜನರ ಮನಸನ್ನು ಬೇರೆಡೆಗೆ ತಿರುಗಿಸಲು ಬಿಜಿಪಿ ಷಡ್ಯಂತ್ರ ರೂಪಿಸಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಈ ರೀತಿಯ ಹೇಳಿಕೆಗಳನ್ನು ನೀಡುವ ವ್ಯಕ್ತಿ ಈ ಸದನದ ಸದಸ್ಯನಾಗಿರಲು ಸಾಧ್ಯವಿಲ್ಲ ಎಂದು ರಾಜನಾಥ್‌ ಸಿಂಗ್‌ ಆಕ್ರೋಶ ವ್ಯಕ್ತಿಪಡಿಸಿದ್ದರು.

“ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ನಾಯಕ ಭಾರತೀಯ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಬೇಕೆಂದು ಸ್ಪಷ್ಟ ಕರೆ ನೀಡುತ್ತಿದ್ದಾನೆ. ಇದು ದೇಶದ ಜನರಿಗೆ ರಾಹುಲ್ ಗಾಂಧಿಯವರ ಸಂದೇಶವೇ? ಅವರಿಗೆ ಶಿಕ್ಷೆಯಾಗಬೇಕು” ಎಂದು ಸ್ಮೃತಿ ಇರಾನಿ ಲೋಕಸಭೆಯಲ್ಲಿ ಹೇಳಿದರು.

ರಾಜ್ಯಸಭೆಯಲ್ಲಿ ಸದಸ್ಯರು ರಾಹುಲ್‌ ಗಾಂಧಿಯವರ ಹೇಳಿಕೆಗೆ ವಿರುದ್ಧವಾಗಿ ‘ರಾಹುಲ್ ಗಾಂಧಿ ಮಾಫಿ ಮಾವು’ ಎಂಬ ಘೋಷಣೆಗಳನ್ನು ಕೂಗಿದರು.

“ಈ ಸದನದ ಸದಸ್ಯರಲ್ಲದ ವ್ಯಕ್ತಿಯ ಹೆಸರನ್ನು ನೀವು ತೆಗೆದುಕೊಳ್ಳಲು ಸಾಧ್ಯವಿಲ್ಲ. ಸದನವನ್ನು ತೊಂದರೆಗೊಳಿಸುವ ಹಕ್ಕು ಯಾರಿಗೂ ಇಲ್ಲ” ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಹೇಳಿದರು ಮತ್ತು ಕೋಲಾಹಲದ ನಂತರ ಉಭಯ ಸದನಗಳನ್ನು ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು. ಮೂರು ಬಾರಿ ಸದನವನ್ನು ಇದೇ ವಿಷಯಕ್ಕಾಗಿ ಮುಂದೂಡಬೇಕಾಗಿದೆ.

“ನರೇಂದ್ರ ಮೋದಿ ಅವರು‘ ಮೇಕ್ ಇನ್ ಇಂಡಿಯಾ ’ಎಂದು ಹೇಳಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ನೀವು ಎಲ್ಲಿ ನೋಡಿದರೂ ಅದು ‘ರೇಪ್ ಇನ್ ಇಂಡಿಯಾ’ ಆಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳೆಯ ಮೇಲೆ ಅತ್ಯಾಚಾರವೆಸಗಿದರು, ನಂತರ ಅವರು ಅಪಘಾತಕ್ಕೀಡಾದರು. ಆದರೆ ನರೇಂದ್ರ ಮೋದಿ ಅವರು ಈ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ” ಎಂದು ಜಾರ್ಖಂಡ್‌ನ ಗೊಡ್ಡಾದಲ್ಲಿ ಗುರುವಾರ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡುತ್ತಾ ರಾಹುಲ್‌ ಗಾಂಧಿ ಹೇಳಿದ್ದರು.

ಸ್ಮೃತಿ ಇರಾನಿಯವರ ಪ್ರತಿಭಟನೆಗೆ ಡಿಎಂಕೆ ಸಂಸದೆ ಕನಿಮೋಳಿ ತಿರುಗೇಟು ನೀಡಿದ್ದಾರೆ. ನಾವು ಗೌರವಿಸುವ ಪ್ರಧಾನಿ ಮೋದಿಯವರು ‘ಮೇಕ್ ಇನ್ ಇಂಡಿಯಾ’ ಎಂದು ಹೇಳಿದ್ದರು. ಆದರೆ ದೇಶದಲ್ಲಿ ಇಂದು ಏನು ನಡೆಯುತ್ತಿದೆ? ಅದನ್ನೇ ರಾಹುಲ್ ಗಾಂಧಿ ಸಹ ಹೇಳಲು ಉದ್ದೇಶಿಸಿದ್ದರು. ದುರದೃಷ್ಟವಶಾತ್ ಮೇಕ್ ಇನ್ ಇಂಡಿಯಾ ನಡೆಯುತ್ತಿಲ್ಲ ಬದಲಿಗೆ ದೇಶದ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಇದು ಒಂದು ಕಳವಳ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Rahul given example only i.e ho told make in India but it’s not change v/s only happen lots of rape cases in India but don’t mistake it i have respect to our nation women’s and every one woman like my mom, sisters,and ದೇವತೆ, ಸೋ smiti erani is given rang statement to social-media, please understand everyone…..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...