Homeಮುಖಪುಟಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ: ರಾಹುಲ್‌ ಗಾಂಧಿ

ಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ: ರಾಹುಲ್‌ ಗಾಂಧಿ

- Advertisement -
- Advertisement -

ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ರಾಹುಲ್ ಗಾಂಧಿಯವರ ‘ರೇಪ್ ಇನ್ ಇಂಡಿಯಾ’ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಇಂದು ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲಿಯೂ ತೀವ್ರ ಪ್ರತಿಭಟನೆ ನಡೆದಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರೆ ರಾಜನಾಥ್‌ ಸಿಂಗ್‌ ಲೋಕಸಭೆಯಲ್ಲಿ ಗುಡುಗಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ. ಈ ಹಿಂದೆ ದೆಹಲಿ ದೇಶದ ಅತ್ಯಾಚಾರದ ರಾಜಧಾನಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ವಿಡಿಯೋ ನನ್ನ ಬಳಿ ಇದೆ. ಅದನ್ನು ಟ್ವೀಟ್‌ ಮಾಡುತ್ತೇನೆ ಎಲ್ಲರಿಗು ತಿಳಿಯಲಿ. ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರವು ದೊಡ್ಡ ಪ್ರತಿಭಟನೆಗಳಿಂದ ಜನರ ಮನಸನ್ನು ಬೇರೆಡೆಗೆ ತಿರುಗಿಸಲು ಬಿಜಿಪಿ ಷಡ್ಯಂತ್ರ ರೂಪಿಸಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಈ ರೀತಿಯ ಹೇಳಿಕೆಗಳನ್ನು ನೀಡುವ ವ್ಯಕ್ತಿ ಈ ಸದನದ ಸದಸ್ಯನಾಗಿರಲು ಸಾಧ್ಯವಿಲ್ಲ ಎಂದು ರಾಜನಾಥ್‌ ಸಿಂಗ್‌ ಆಕ್ರೋಶ ವ್ಯಕ್ತಿಪಡಿಸಿದ್ದರು.

“ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ನಾಯಕ ಭಾರತೀಯ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಬೇಕೆಂದು ಸ್ಪಷ್ಟ ಕರೆ ನೀಡುತ್ತಿದ್ದಾನೆ. ಇದು ದೇಶದ ಜನರಿಗೆ ರಾಹುಲ್ ಗಾಂಧಿಯವರ ಸಂದೇಶವೇ? ಅವರಿಗೆ ಶಿಕ್ಷೆಯಾಗಬೇಕು” ಎಂದು ಸ್ಮೃತಿ ಇರಾನಿ ಲೋಕಸಭೆಯಲ್ಲಿ ಹೇಳಿದರು.

ರಾಜ್ಯಸಭೆಯಲ್ಲಿ ಸದಸ್ಯರು ರಾಹುಲ್‌ ಗಾಂಧಿಯವರ ಹೇಳಿಕೆಗೆ ವಿರುದ್ಧವಾಗಿ ‘ರಾಹುಲ್ ಗಾಂಧಿ ಮಾಫಿ ಮಾವು’ ಎಂಬ ಘೋಷಣೆಗಳನ್ನು ಕೂಗಿದರು.

“ಈ ಸದನದ ಸದಸ್ಯರಲ್ಲದ ವ್ಯಕ್ತಿಯ ಹೆಸರನ್ನು ನೀವು ತೆಗೆದುಕೊಳ್ಳಲು ಸಾಧ್ಯವಿಲ್ಲ. ಸದನವನ್ನು ತೊಂದರೆಗೊಳಿಸುವ ಹಕ್ಕು ಯಾರಿಗೂ ಇಲ್ಲ” ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಹೇಳಿದರು ಮತ್ತು ಕೋಲಾಹಲದ ನಂತರ ಉಭಯ ಸದನಗಳನ್ನು ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು. ಮೂರು ಬಾರಿ ಸದನವನ್ನು ಇದೇ ವಿಷಯಕ್ಕಾಗಿ ಮುಂದೂಡಬೇಕಾಗಿದೆ.

“ನರೇಂದ್ರ ಮೋದಿ ಅವರು‘ ಮೇಕ್ ಇನ್ ಇಂಡಿಯಾ ’ಎಂದು ಹೇಳಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ನೀವು ಎಲ್ಲಿ ನೋಡಿದರೂ ಅದು ‘ರೇಪ್ ಇನ್ ಇಂಡಿಯಾ’ ಆಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳೆಯ ಮೇಲೆ ಅತ್ಯಾಚಾರವೆಸಗಿದರು, ನಂತರ ಅವರು ಅಪಘಾತಕ್ಕೀಡಾದರು. ಆದರೆ ನರೇಂದ್ರ ಮೋದಿ ಅವರು ಈ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ” ಎಂದು ಜಾರ್ಖಂಡ್‌ನ ಗೊಡ್ಡಾದಲ್ಲಿ ಗುರುವಾರ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡುತ್ತಾ ರಾಹುಲ್‌ ಗಾಂಧಿ ಹೇಳಿದ್ದರು.

ಸ್ಮೃತಿ ಇರಾನಿಯವರ ಪ್ರತಿಭಟನೆಗೆ ಡಿಎಂಕೆ ಸಂಸದೆ ಕನಿಮೋಳಿ ತಿರುಗೇಟು ನೀಡಿದ್ದಾರೆ. ನಾವು ಗೌರವಿಸುವ ಪ್ರಧಾನಿ ಮೋದಿಯವರು ‘ಮೇಕ್ ಇನ್ ಇಂಡಿಯಾ’ ಎಂದು ಹೇಳಿದ್ದರು. ಆದರೆ ದೇಶದಲ್ಲಿ ಇಂದು ಏನು ನಡೆಯುತ್ತಿದೆ? ಅದನ್ನೇ ರಾಹುಲ್ ಗಾಂಧಿ ಸಹ ಹೇಳಲು ಉದ್ದೇಶಿಸಿದ್ದರು. ದುರದೃಷ್ಟವಶಾತ್ ಮೇಕ್ ಇನ್ ಇಂಡಿಯಾ ನಡೆಯುತ್ತಿಲ್ಲ ಬದಲಿಗೆ ದೇಶದ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಇದು ಒಂದು ಕಳವಳ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Rahul given example only i.e ho told make in India but it’s not change v/s only happen lots of rape cases in India but don’t mistake it i have respect to our nation women’s and every one woman like my mom, sisters,and ದೇವತೆ, ಸೋ smiti erani is given rang statement to social-media, please understand everyone…..

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...