Homeಮುಖಪುಟಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ ಎಂದ ಆದಿತ್ಯನಾಥ್

- Advertisement -
- Advertisement -

ಧ್ವಂಸವಾಗಿರುವ ಬಾಬರಿ ಮಸೀದಿಯ ಬದಲಿಗೆ ಅಯೋಧ್ಯೆಯಲ್ಲಿ ನಿರ್ಮಿಸಲಿರುವ ಮಸೀದಿಯ ಉದ್ಘಾಟನೆಗೆ ತಾನು ಹೋಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಸಮಾಜವಾದಿ ಪಕ್ಷ, ಅವರು ಕ್ಷಮೆ ಯಾಚಿಸುವಂತೆ ಆಗ್ರಹಿಸಿದೆ.

ಅಯೋಧ್ಯೆಯ ರಾಮ ಮಂದಿರ ಭೂಮಿ ಪೂಜೆ ನಂತರ ದೂರದರ್ಶನದಲ್ಲಿ ಮಾತನಾಡಿದ ಆದಿತ್ಯನಾಥ್ “ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಎಸ್ಪಿ, ಅವರು ರಾಜ್ಯದ ಜನರ ಬಳಿ ಕ್ಷಮೆಯಾಚಿಸಬೇಕು ಹೇಳಿದೆ. ಆದರೆ ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ಮಸೀದಿಯ ಬಗ್ಗೆ ಮುಖ್ಯಮಂತ್ರಿಯ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

“ನೀವು ನನ್ನನ್ನು ಮುಖ್ಯಮಂತ್ರಿಯಾಗಿ ಕೇಳಿದರೆ, ನನಗೆ ಯಾವುದೇ ನಂಬಿಕೆ, ಧರ್ಮ ಅಥವಾ ಸಮುದಾಯದೊಂದಿಗೆ ಯಾವುದೇ ಸಮಸ್ಯೆ ಇಲ್ಲ. ನೀವು ನನ್ನನ್ನು ಯೋಗಿಯೆಂದು ಕೇಳಿದರೆ, ನಾನು ಖಂಡಿತವಾಗಿಯೂ ಹೋಗುವುದಿಲ್ಲ. ಏಕೆಂದರೆ ಹಿಂದೂ ಆಗಿ ನನ್ನ ’ಉಪಾಸನ ವಿಧಿ’ (ಪೂಜಾ ವಿಧಾನ) ವ್ಯಕ್ತಪಡಿಸಲು ಮತ್ತು ಅದಕ್ಕೆ ತಕ್ಕಂತೆ ನಡೆದುಕೊಳ್ಳುವ ಹಕ್ಕು ನನಗಿದೆ” ಎಂದು ಆದಿತ್ಯನಾಥ್ ಹೇಳಿದ್ದರು.

“ನಾನು ವಾದಿ ಅಥವಾ ಪ್ರತಿವಾದಿ ಅಲ್ಲ. ಅದಕ್ಕಾಗಿಯೇ ನನ್ನನ್ನು ಆಹ್ವಾನಿಸಿದರೂ ನಾನು ಹೋಗುವುದಿಲ್ಲ. ಅಂತಹ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.

ಅವರು ನನ್ನನ್ನು ಆಹ್ವಾನಿಸಿದ ದಿನ, ಅನೇಕರ ಜಾತ್ಯತೀತತೆಯು ಅಪಾಯದಲ್ಲಿರುತ್ತದೆ. ಅದಕ್ಕಾಗಿಯೇ ಅವರ ಜಾತ್ಯತೀತತೆಯು ಅಪಾಯದಲ್ಲಿರಬಾರದು ಎಂದು ನಾನು ಬಯಸುತ್ತೇನೆ. ಯಾವುದೇ ತಾರತಮ್ಯವಿಲ್ಲದೆ ಸರ್ಕಾರಿ ಯೋಜನೆಯಿಂದ ಪ್ರತಿಯೊಬ್ಬರೂ ಪ್ರಯೋಜನ ಪಡೆಯುವಂತೆ ಖಚಿತಪಡಿಸಿಕೊಳ್ಳಲು ನಾನು ಮೌನವಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಅಯೋಧ್ಯೆ ವಿವಾದದ ಬಗ್ಗೆ ಕಾಂಗ್ರೆಸ್ ಎಂದಿಗೂ ಪರಿಹಾರವನ್ನು ಬಯಸಿರಲಿಲ್ಲ. “ತಮ್ಮ ರಾಜಕೀಯ ಲಾಭಕ್ಕಾಗಿ ವಿವಾದ ಮುಂದುವರಿಯಬೇಕೆಂದು ಅವರು ಬಯಸಿದ್ದರು. ತಲೆಯ ಮೇಲೆ ಟೋಪಿ ಹಾಕುವುದರಿಂದ, ಉಪವಾಸ-ಇಫ್ತಾರ್‌ಗೆ ಹಾಜರಾಗುವುದು ಜಾತ್ಯತೀತತೆಯಲ್ಲ. ಇದು ನಾಟಕ ಎಂದು ಜನರಿಗೆ ತಿಳಿದಿದೆ. ಜನರಿಗೆ ವಾಸ್ತವ ತಿಳಿದಿದೆ” ಎಂದು ಸಿಎಂ ಹೇಳಿದರು.

ಎಸ್ಪಿ ವಕ್ತಾರ ಪವನ್ ಪಾಂಡೆ ಆದಿತ್ಯನಾಥ್ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಮಾಡಿದ ಪ್ರಮಾಣವಚನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ಇಡೀ ರಾಜ್ಯದ ಸಿಎಂ. ಕೇವಲ ಹಿಂದೂ ಸಮುದಾಯದವರು ಮಾತ್ರವಲ್ಲ. ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಮರ ಜನಸಂಖ್ಯೆ ಏನೇ ಇರಲಿ, ಅವರು ಎಲ್ಲರ ಸಿಎಂ. ಸಿಎಂ ಅವರ ಈ ಮಾತಿಗೆ ಘನತೆ ಇಲ್ಲ. ಇದಕ್ಕಾಗಿ ಅವರು ಜನರಿಂದ ಕ್ಷಮೆಯಾಚಿಸಬೇಕು” ಎಂದು ಪಾಂಡೆ ಹೇಳಿದರು.

ಉತ್ತರ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಕ್ತಾರ ಲಾಲನ್ ಕುಮಾರ್, “ಅವರ ಮಸೀದಿ ಹೇಳಿಕೆಯ ಬಗ್ಗೆ ನಮಗೆ ಯಾವುದೇ ಅಭಿಪ್ರಾಯಗಳಿಲ್ಲ.” ಆದರೆ ರಾಮ ಜನ್ಮಭೂಮಿ-ಬಾಬರಿ ಮಸೀದಿಯ ಬೀಗಗಳನ್ನು ತೆರೆದ ಗೌರವ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಉಲ್ಲೇಖಿಸಿದ ಕಾಂಗ್ರೆಸ್ ವಕ್ತಾರ, “ಅವರು ನಕಲಿ ಹಿಂದುತ್ವದ ರಾಜಕೀಯವನ್ನು ಮಾಡುತ್ತಾರೆ. ಕಾಂಗ್ರೆಸ್ ಯಾವಾಗಲೂ ಜನರ ಹಿತದೃಷ್ಟಿಯಿಂದ ಮಾತನಾಡುತ್ತದೆ. ರಾಮ ಪ್ರತಿಯೊಬ್ಬರದ್ದು ಆಗಿದ್ದಾನೆ, ಆದರೆ ರಾಮ ಅವರದು ಮಾತ್ರ ಎಂದು ಬಿಜೆಪಿ ತೋರಿಸಲು ಬಯಸಿದೆ” ಎಂದು ಅವರು ಹೇಳಿದ್ದಾರೆ.


ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...