Homeಮುಖಪುಟಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ ಎಂದ ಆದಿತ್ಯನಾಥ್

- Advertisement -
- Advertisement -

ಧ್ವಂಸವಾಗಿರುವ ಬಾಬರಿ ಮಸೀದಿಯ ಬದಲಿಗೆ ಅಯೋಧ್ಯೆಯಲ್ಲಿ ನಿರ್ಮಿಸಲಿರುವ ಮಸೀದಿಯ ಉದ್ಘಾಟನೆಗೆ ತಾನು ಹೋಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಸಮಾಜವಾದಿ ಪಕ್ಷ, ಅವರು ಕ್ಷಮೆ ಯಾಚಿಸುವಂತೆ ಆಗ್ರಹಿಸಿದೆ.

ಅಯೋಧ್ಯೆಯ ರಾಮ ಮಂದಿರ ಭೂಮಿ ಪೂಜೆ ನಂತರ ದೂರದರ್ಶನದಲ್ಲಿ ಮಾತನಾಡಿದ ಆದಿತ್ಯನಾಥ್ “ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಎಸ್ಪಿ, ಅವರು ರಾಜ್ಯದ ಜನರ ಬಳಿ ಕ್ಷಮೆಯಾಚಿಸಬೇಕು ಹೇಳಿದೆ. ಆದರೆ ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ಮಸೀದಿಯ ಬಗ್ಗೆ ಮುಖ್ಯಮಂತ್ರಿಯ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

“ನೀವು ನನ್ನನ್ನು ಮುಖ್ಯಮಂತ್ರಿಯಾಗಿ ಕೇಳಿದರೆ, ನನಗೆ ಯಾವುದೇ ನಂಬಿಕೆ, ಧರ್ಮ ಅಥವಾ ಸಮುದಾಯದೊಂದಿಗೆ ಯಾವುದೇ ಸಮಸ್ಯೆ ಇಲ್ಲ. ನೀವು ನನ್ನನ್ನು ಯೋಗಿಯೆಂದು ಕೇಳಿದರೆ, ನಾನು ಖಂಡಿತವಾಗಿಯೂ ಹೋಗುವುದಿಲ್ಲ. ಏಕೆಂದರೆ ಹಿಂದೂ ಆಗಿ ನನ್ನ ’ಉಪಾಸನ ವಿಧಿ’ (ಪೂಜಾ ವಿಧಾನ) ವ್ಯಕ್ತಪಡಿಸಲು ಮತ್ತು ಅದಕ್ಕೆ ತಕ್ಕಂತೆ ನಡೆದುಕೊಳ್ಳುವ ಹಕ್ಕು ನನಗಿದೆ” ಎಂದು ಆದಿತ್ಯನಾಥ್ ಹೇಳಿದ್ದರು.

“ನಾನು ವಾದಿ ಅಥವಾ ಪ್ರತಿವಾದಿ ಅಲ್ಲ. ಅದಕ್ಕಾಗಿಯೇ ನನ್ನನ್ನು ಆಹ್ವಾನಿಸಿದರೂ ನಾನು ಹೋಗುವುದಿಲ್ಲ. ಅಂತಹ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.

ಅವರು ನನ್ನನ್ನು ಆಹ್ವಾನಿಸಿದ ದಿನ, ಅನೇಕರ ಜಾತ್ಯತೀತತೆಯು ಅಪಾಯದಲ್ಲಿರುತ್ತದೆ. ಅದಕ್ಕಾಗಿಯೇ ಅವರ ಜಾತ್ಯತೀತತೆಯು ಅಪಾಯದಲ್ಲಿರಬಾರದು ಎಂದು ನಾನು ಬಯಸುತ್ತೇನೆ. ಯಾವುದೇ ತಾರತಮ್ಯವಿಲ್ಲದೆ ಸರ್ಕಾರಿ ಯೋಜನೆಯಿಂದ ಪ್ರತಿಯೊಬ್ಬರೂ ಪ್ರಯೋಜನ ಪಡೆಯುವಂತೆ ಖಚಿತಪಡಿಸಿಕೊಳ್ಳಲು ನಾನು ಮೌನವಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಅಯೋಧ್ಯೆ ವಿವಾದದ ಬಗ್ಗೆ ಕಾಂಗ್ರೆಸ್ ಎಂದಿಗೂ ಪರಿಹಾರವನ್ನು ಬಯಸಿರಲಿಲ್ಲ. “ತಮ್ಮ ರಾಜಕೀಯ ಲಾಭಕ್ಕಾಗಿ ವಿವಾದ ಮುಂದುವರಿಯಬೇಕೆಂದು ಅವರು ಬಯಸಿದ್ದರು. ತಲೆಯ ಮೇಲೆ ಟೋಪಿ ಹಾಕುವುದರಿಂದ, ಉಪವಾಸ-ಇಫ್ತಾರ್‌ಗೆ ಹಾಜರಾಗುವುದು ಜಾತ್ಯತೀತತೆಯಲ್ಲ. ಇದು ನಾಟಕ ಎಂದು ಜನರಿಗೆ ತಿಳಿದಿದೆ. ಜನರಿಗೆ ವಾಸ್ತವ ತಿಳಿದಿದೆ” ಎಂದು ಸಿಎಂ ಹೇಳಿದರು.

ಎಸ್ಪಿ ವಕ್ತಾರ ಪವನ್ ಪಾಂಡೆ ಆದಿತ್ಯನಾಥ್ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಮಾಡಿದ ಪ್ರಮಾಣವಚನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ಇಡೀ ರಾಜ್ಯದ ಸಿಎಂ. ಕೇವಲ ಹಿಂದೂ ಸಮುದಾಯದವರು ಮಾತ್ರವಲ್ಲ. ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಮರ ಜನಸಂಖ್ಯೆ ಏನೇ ಇರಲಿ, ಅವರು ಎಲ್ಲರ ಸಿಎಂ. ಸಿಎಂ ಅವರ ಈ ಮಾತಿಗೆ ಘನತೆ ಇಲ್ಲ. ಇದಕ್ಕಾಗಿ ಅವರು ಜನರಿಂದ ಕ್ಷಮೆಯಾಚಿಸಬೇಕು” ಎಂದು ಪಾಂಡೆ ಹೇಳಿದರು.

ಉತ್ತರ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಕ್ತಾರ ಲಾಲನ್ ಕುಮಾರ್, “ಅವರ ಮಸೀದಿ ಹೇಳಿಕೆಯ ಬಗ್ಗೆ ನಮಗೆ ಯಾವುದೇ ಅಭಿಪ್ರಾಯಗಳಿಲ್ಲ.” ಆದರೆ ರಾಮ ಜನ್ಮಭೂಮಿ-ಬಾಬರಿ ಮಸೀದಿಯ ಬೀಗಗಳನ್ನು ತೆರೆದ ಗೌರವ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಉಲ್ಲೇಖಿಸಿದ ಕಾಂಗ್ರೆಸ್ ವಕ್ತಾರ, “ಅವರು ನಕಲಿ ಹಿಂದುತ್ವದ ರಾಜಕೀಯವನ್ನು ಮಾಡುತ್ತಾರೆ. ಕಾಂಗ್ರೆಸ್ ಯಾವಾಗಲೂ ಜನರ ಹಿತದೃಷ್ಟಿಯಿಂದ ಮಾತನಾಡುತ್ತದೆ. ರಾಮ ಪ್ರತಿಯೊಬ್ಬರದ್ದು ಆಗಿದ್ದಾನೆ, ಆದರೆ ರಾಮ ಅವರದು ಮಾತ್ರ ಎಂದು ಬಿಜೆಪಿ ತೋರಿಸಲು ಬಯಸಿದೆ” ಎಂದು ಅವರು ಹೇಳಿದ್ದಾರೆ.


ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...