Homeಮುಖಪುಟಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ ಎಂದ ಆದಿತ್ಯನಾಥ್

- Advertisement -
- Advertisement -

ಧ್ವಂಸವಾಗಿರುವ ಬಾಬರಿ ಮಸೀದಿಯ ಬದಲಿಗೆ ಅಯೋಧ್ಯೆಯಲ್ಲಿ ನಿರ್ಮಿಸಲಿರುವ ಮಸೀದಿಯ ಉದ್ಘಾಟನೆಗೆ ತಾನು ಹೋಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಸಮಾಜವಾದಿ ಪಕ್ಷ, ಅವರು ಕ್ಷಮೆ ಯಾಚಿಸುವಂತೆ ಆಗ್ರಹಿಸಿದೆ.

ಅಯೋಧ್ಯೆಯ ರಾಮ ಮಂದಿರ ಭೂಮಿ ಪೂಜೆ ನಂತರ ದೂರದರ್ಶನದಲ್ಲಿ ಮಾತನಾಡಿದ ಆದಿತ್ಯನಾಥ್ “ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಎಸ್ಪಿ, ಅವರು ರಾಜ್ಯದ ಜನರ ಬಳಿ ಕ್ಷಮೆಯಾಚಿಸಬೇಕು ಹೇಳಿದೆ. ಆದರೆ ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ಮಸೀದಿಯ ಬಗ್ಗೆ ಮುಖ್ಯಮಂತ್ರಿಯ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

“ನೀವು ನನ್ನನ್ನು ಮುಖ್ಯಮಂತ್ರಿಯಾಗಿ ಕೇಳಿದರೆ, ನನಗೆ ಯಾವುದೇ ನಂಬಿಕೆ, ಧರ್ಮ ಅಥವಾ ಸಮುದಾಯದೊಂದಿಗೆ ಯಾವುದೇ ಸಮಸ್ಯೆ ಇಲ್ಲ. ನೀವು ನನ್ನನ್ನು ಯೋಗಿಯೆಂದು ಕೇಳಿದರೆ, ನಾನು ಖಂಡಿತವಾಗಿಯೂ ಹೋಗುವುದಿಲ್ಲ. ಏಕೆಂದರೆ ಹಿಂದೂ ಆಗಿ ನನ್ನ ’ಉಪಾಸನ ವಿಧಿ’ (ಪೂಜಾ ವಿಧಾನ) ವ್ಯಕ್ತಪಡಿಸಲು ಮತ್ತು ಅದಕ್ಕೆ ತಕ್ಕಂತೆ ನಡೆದುಕೊಳ್ಳುವ ಹಕ್ಕು ನನಗಿದೆ” ಎಂದು ಆದಿತ್ಯನಾಥ್ ಹೇಳಿದ್ದರು.

“ನಾನು ವಾದಿ ಅಥವಾ ಪ್ರತಿವಾದಿ ಅಲ್ಲ. ಅದಕ್ಕಾಗಿಯೇ ನನ್ನನ್ನು ಆಹ್ವಾನಿಸಿದರೂ ನಾನು ಹೋಗುವುದಿಲ್ಲ. ಅಂತಹ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.

ಅವರು ನನ್ನನ್ನು ಆಹ್ವಾನಿಸಿದ ದಿನ, ಅನೇಕರ ಜಾತ್ಯತೀತತೆಯು ಅಪಾಯದಲ್ಲಿರುತ್ತದೆ. ಅದಕ್ಕಾಗಿಯೇ ಅವರ ಜಾತ್ಯತೀತತೆಯು ಅಪಾಯದಲ್ಲಿರಬಾರದು ಎಂದು ನಾನು ಬಯಸುತ್ತೇನೆ. ಯಾವುದೇ ತಾರತಮ್ಯವಿಲ್ಲದೆ ಸರ್ಕಾರಿ ಯೋಜನೆಯಿಂದ ಪ್ರತಿಯೊಬ್ಬರೂ ಪ್ರಯೋಜನ ಪಡೆಯುವಂತೆ ಖಚಿತಪಡಿಸಿಕೊಳ್ಳಲು ನಾನು ಮೌನವಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಅಯೋಧ್ಯೆ ವಿವಾದದ ಬಗ್ಗೆ ಕಾಂಗ್ರೆಸ್ ಎಂದಿಗೂ ಪರಿಹಾರವನ್ನು ಬಯಸಿರಲಿಲ್ಲ. “ತಮ್ಮ ರಾಜಕೀಯ ಲಾಭಕ್ಕಾಗಿ ವಿವಾದ ಮುಂದುವರಿಯಬೇಕೆಂದು ಅವರು ಬಯಸಿದ್ದರು. ತಲೆಯ ಮೇಲೆ ಟೋಪಿ ಹಾಕುವುದರಿಂದ, ಉಪವಾಸ-ಇಫ್ತಾರ್‌ಗೆ ಹಾಜರಾಗುವುದು ಜಾತ್ಯತೀತತೆಯಲ್ಲ. ಇದು ನಾಟಕ ಎಂದು ಜನರಿಗೆ ತಿಳಿದಿದೆ. ಜನರಿಗೆ ವಾಸ್ತವ ತಿಳಿದಿದೆ” ಎಂದು ಸಿಎಂ ಹೇಳಿದರು.

ಎಸ್ಪಿ ವಕ್ತಾರ ಪವನ್ ಪಾಂಡೆ ಆದಿತ್ಯನಾಥ್ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಮಾಡಿದ ಪ್ರಮಾಣವಚನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ಇಡೀ ರಾಜ್ಯದ ಸಿಎಂ. ಕೇವಲ ಹಿಂದೂ ಸಮುದಾಯದವರು ಮಾತ್ರವಲ್ಲ. ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಮರ ಜನಸಂಖ್ಯೆ ಏನೇ ಇರಲಿ, ಅವರು ಎಲ್ಲರ ಸಿಎಂ. ಸಿಎಂ ಅವರ ಈ ಮಾತಿಗೆ ಘನತೆ ಇಲ್ಲ. ಇದಕ್ಕಾಗಿ ಅವರು ಜನರಿಂದ ಕ್ಷಮೆಯಾಚಿಸಬೇಕು” ಎಂದು ಪಾಂಡೆ ಹೇಳಿದರು.

ಉತ್ತರ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಕ್ತಾರ ಲಾಲನ್ ಕುಮಾರ್, “ಅವರ ಮಸೀದಿ ಹೇಳಿಕೆಯ ಬಗ್ಗೆ ನಮಗೆ ಯಾವುದೇ ಅಭಿಪ್ರಾಯಗಳಿಲ್ಲ.” ಆದರೆ ರಾಮ ಜನ್ಮಭೂಮಿ-ಬಾಬರಿ ಮಸೀದಿಯ ಬೀಗಗಳನ್ನು ತೆರೆದ ಗೌರವ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಉಲ್ಲೇಖಿಸಿದ ಕಾಂಗ್ರೆಸ್ ವಕ್ತಾರ, “ಅವರು ನಕಲಿ ಹಿಂದುತ್ವದ ರಾಜಕೀಯವನ್ನು ಮಾಡುತ್ತಾರೆ. ಕಾಂಗ್ರೆಸ್ ಯಾವಾಗಲೂ ಜನರ ಹಿತದೃಷ್ಟಿಯಿಂದ ಮಾತನಾಡುತ್ತದೆ. ರಾಮ ಪ್ರತಿಯೊಬ್ಬರದ್ದು ಆಗಿದ್ದಾನೆ, ಆದರೆ ರಾಮ ಅವರದು ಮಾತ್ರ ಎಂದು ಬಿಜೆಪಿ ತೋರಿಸಲು ಬಯಸಿದೆ” ಎಂದು ಅವರು ಹೇಳಿದ್ದಾರೆ.


ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...