Homeಮುಖಪುಟಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ ಎಂದ ಆದಿತ್ಯನಾಥ್

- Advertisement -
- Advertisement -

ಧ್ವಂಸವಾಗಿರುವ ಬಾಬರಿ ಮಸೀದಿಯ ಬದಲಿಗೆ ಅಯೋಧ್ಯೆಯಲ್ಲಿ ನಿರ್ಮಿಸಲಿರುವ ಮಸೀದಿಯ ಉದ್ಘಾಟನೆಗೆ ತಾನು ಹೋಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಸಮಾಜವಾದಿ ಪಕ್ಷ, ಅವರು ಕ್ಷಮೆ ಯಾಚಿಸುವಂತೆ ಆಗ್ರಹಿಸಿದೆ.

ಅಯೋಧ್ಯೆಯ ರಾಮ ಮಂದಿರ ಭೂಮಿ ಪೂಜೆ ನಂತರ ದೂರದರ್ಶನದಲ್ಲಿ ಮಾತನಾಡಿದ ಆದಿತ್ಯನಾಥ್ “ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಎಸ್ಪಿ, ಅವರು ರಾಜ್ಯದ ಜನರ ಬಳಿ ಕ್ಷಮೆಯಾಚಿಸಬೇಕು ಹೇಳಿದೆ. ಆದರೆ ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ಮಸೀದಿಯ ಬಗ್ಗೆ ಮುಖ್ಯಮಂತ್ರಿಯ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

“ನೀವು ನನ್ನನ್ನು ಮುಖ್ಯಮಂತ್ರಿಯಾಗಿ ಕೇಳಿದರೆ, ನನಗೆ ಯಾವುದೇ ನಂಬಿಕೆ, ಧರ್ಮ ಅಥವಾ ಸಮುದಾಯದೊಂದಿಗೆ ಯಾವುದೇ ಸಮಸ್ಯೆ ಇಲ್ಲ. ನೀವು ನನ್ನನ್ನು ಯೋಗಿಯೆಂದು ಕೇಳಿದರೆ, ನಾನು ಖಂಡಿತವಾಗಿಯೂ ಹೋಗುವುದಿಲ್ಲ. ಏಕೆಂದರೆ ಹಿಂದೂ ಆಗಿ ನನ್ನ ’ಉಪಾಸನ ವಿಧಿ’ (ಪೂಜಾ ವಿಧಾನ) ವ್ಯಕ್ತಪಡಿಸಲು ಮತ್ತು ಅದಕ್ಕೆ ತಕ್ಕಂತೆ ನಡೆದುಕೊಳ್ಳುವ ಹಕ್ಕು ನನಗಿದೆ” ಎಂದು ಆದಿತ್ಯನಾಥ್ ಹೇಳಿದ್ದರು.

“ನಾನು ವಾದಿ ಅಥವಾ ಪ್ರತಿವಾದಿ ಅಲ್ಲ. ಅದಕ್ಕಾಗಿಯೇ ನನ್ನನ್ನು ಆಹ್ವಾನಿಸಿದರೂ ನಾನು ಹೋಗುವುದಿಲ್ಲ. ಅಂತಹ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.

ಅವರು ನನ್ನನ್ನು ಆಹ್ವಾನಿಸಿದ ದಿನ, ಅನೇಕರ ಜಾತ್ಯತೀತತೆಯು ಅಪಾಯದಲ್ಲಿರುತ್ತದೆ. ಅದಕ್ಕಾಗಿಯೇ ಅವರ ಜಾತ್ಯತೀತತೆಯು ಅಪಾಯದಲ್ಲಿರಬಾರದು ಎಂದು ನಾನು ಬಯಸುತ್ತೇನೆ. ಯಾವುದೇ ತಾರತಮ್ಯವಿಲ್ಲದೆ ಸರ್ಕಾರಿ ಯೋಜನೆಯಿಂದ ಪ್ರತಿಯೊಬ್ಬರೂ ಪ್ರಯೋಜನ ಪಡೆಯುವಂತೆ ಖಚಿತಪಡಿಸಿಕೊಳ್ಳಲು ನಾನು ಮೌನವಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಅಯೋಧ್ಯೆ ವಿವಾದದ ಬಗ್ಗೆ ಕಾಂಗ್ರೆಸ್ ಎಂದಿಗೂ ಪರಿಹಾರವನ್ನು ಬಯಸಿರಲಿಲ್ಲ. “ತಮ್ಮ ರಾಜಕೀಯ ಲಾಭಕ್ಕಾಗಿ ವಿವಾದ ಮುಂದುವರಿಯಬೇಕೆಂದು ಅವರು ಬಯಸಿದ್ದರು. ತಲೆಯ ಮೇಲೆ ಟೋಪಿ ಹಾಕುವುದರಿಂದ, ಉಪವಾಸ-ಇಫ್ತಾರ್‌ಗೆ ಹಾಜರಾಗುವುದು ಜಾತ್ಯತೀತತೆಯಲ್ಲ. ಇದು ನಾಟಕ ಎಂದು ಜನರಿಗೆ ತಿಳಿದಿದೆ. ಜನರಿಗೆ ವಾಸ್ತವ ತಿಳಿದಿದೆ” ಎಂದು ಸಿಎಂ ಹೇಳಿದರು.

ಎಸ್ಪಿ ವಕ್ತಾರ ಪವನ್ ಪಾಂಡೆ ಆದಿತ್ಯನಾಥ್ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಮಾಡಿದ ಪ್ರಮಾಣವಚನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ಇಡೀ ರಾಜ್ಯದ ಸಿಎಂ. ಕೇವಲ ಹಿಂದೂ ಸಮುದಾಯದವರು ಮಾತ್ರವಲ್ಲ. ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಮರ ಜನಸಂಖ್ಯೆ ಏನೇ ಇರಲಿ, ಅವರು ಎಲ್ಲರ ಸಿಎಂ. ಸಿಎಂ ಅವರ ಈ ಮಾತಿಗೆ ಘನತೆ ಇಲ್ಲ. ಇದಕ್ಕಾಗಿ ಅವರು ಜನರಿಂದ ಕ್ಷಮೆಯಾಚಿಸಬೇಕು” ಎಂದು ಪಾಂಡೆ ಹೇಳಿದರು.

ಉತ್ತರ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಕ್ತಾರ ಲಾಲನ್ ಕುಮಾರ್, “ಅವರ ಮಸೀದಿ ಹೇಳಿಕೆಯ ಬಗ್ಗೆ ನಮಗೆ ಯಾವುದೇ ಅಭಿಪ್ರಾಯಗಳಿಲ್ಲ.” ಆದರೆ ರಾಮ ಜನ್ಮಭೂಮಿ-ಬಾಬರಿ ಮಸೀದಿಯ ಬೀಗಗಳನ್ನು ತೆರೆದ ಗೌರವ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಉಲ್ಲೇಖಿಸಿದ ಕಾಂಗ್ರೆಸ್ ವಕ್ತಾರ, “ಅವರು ನಕಲಿ ಹಿಂದುತ್ವದ ರಾಜಕೀಯವನ್ನು ಮಾಡುತ್ತಾರೆ. ಕಾಂಗ್ರೆಸ್ ಯಾವಾಗಲೂ ಜನರ ಹಿತದೃಷ್ಟಿಯಿಂದ ಮಾತನಾಡುತ್ತದೆ. ರಾಮ ಪ್ರತಿಯೊಬ್ಬರದ್ದು ಆಗಿದ್ದಾನೆ, ಆದರೆ ರಾಮ ಅವರದು ಮಾತ್ರ ಎಂದು ಬಿಜೆಪಿ ತೋರಿಸಲು ಬಯಸಿದೆ” ಎಂದು ಅವರು ಹೇಳಿದ್ದಾರೆ.


ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...