Homeಮುಖಪುಟಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ ಎಂದ ಆದಿತ್ಯನಾಥ್

- Advertisement -
- Advertisement -

ಧ್ವಂಸವಾಗಿರುವ ಬಾಬರಿ ಮಸೀದಿಯ ಬದಲಿಗೆ ಅಯೋಧ್ಯೆಯಲ್ಲಿ ನಿರ್ಮಿಸಲಿರುವ ಮಸೀದಿಯ ಉದ್ಘಾಟನೆಗೆ ತಾನು ಹೋಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಸಮಾಜವಾದಿ ಪಕ್ಷ, ಅವರು ಕ್ಷಮೆ ಯಾಚಿಸುವಂತೆ ಆಗ್ರಹಿಸಿದೆ.

ಅಯೋಧ್ಯೆಯ ರಾಮ ಮಂದಿರ ಭೂಮಿ ಪೂಜೆ ನಂತರ ದೂರದರ್ಶನದಲ್ಲಿ ಮಾತನಾಡಿದ ಆದಿತ್ಯನಾಥ್ “ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಎಸ್ಪಿ, ಅವರು ರಾಜ್ಯದ ಜನರ ಬಳಿ ಕ್ಷಮೆಯಾಚಿಸಬೇಕು ಹೇಳಿದೆ. ಆದರೆ ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ಮಸೀದಿಯ ಬಗ್ಗೆ ಮುಖ್ಯಮಂತ್ರಿಯ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

“ನೀವು ನನ್ನನ್ನು ಮುಖ್ಯಮಂತ್ರಿಯಾಗಿ ಕೇಳಿದರೆ, ನನಗೆ ಯಾವುದೇ ನಂಬಿಕೆ, ಧರ್ಮ ಅಥವಾ ಸಮುದಾಯದೊಂದಿಗೆ ಯಾವುದೇ ಸಮಸ್ಯೆ ಇಲ್ಲ. ನೀವು ನನ್ನನ್ನು ಯೋಗಿಯೆಂದು ಕೇಳಿದರೆ, ನಾನು ಖಂಡಿತವಾಗಿಯೂ ಹೋಗುವುದಿಲ್ಲ. ಏಕೆಂದರೆ ಹಿಂದೂ ಆಗಿ ನನ್ನ ’ಉಪಾಸನ ವಿಧಿ’ (ಪೂಜಾ ವಿಧಾನ) ವ್ಯಕ್ತಪಡಿಸಲು ಮತ್ತು ಅದಕ್ಕೆ ತಕ್ಕಂತೆ ನಡೆದುಕೊಳ್ಳುವ ಹಕ್ಕು ನನಗಿದೆ” ಎಂದು ಆದಿತ್ಯನಾಥ್ ಹೇಳಿದ್ದರು.

“ನಾನು ವಾದಿ ಅಥವಾ ಪ್ರತಿವಾದಿ ಅಲ್ಲ. ಅದಕ್ಕಾಗಿಯೇ ನನ್ನನ್ನು ಆಹ್ವಾನಿಸಿದರೂ ನಾನು ಹೋಗುವುದಿಲ್ಲ. ಅಂತಹ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.

ಅವರು ನನ್ನನ್ನು ಆಹ್ವಾನಿಸಿದ ದಿನ, ಅನೇಕರ ಜಾತ್ಯತೀತತೆಯು ಅಪಾಯದಲ್ಲಿರುತ್ತದೆ. ಅದಕ್ಕಾಗಿಯೇ ಅವರ ಜಾತ್ಯತೀತತೆಯು ಅಪಾಯದಲ್ಲಿರಬಾರದು ಎಂದು ನಾನು ಬಯಸುತ್ತೇನೆ. ಯಾವುದೇ ತಾರತಮ್ಯವಿಲ್ಲದೆ ಸರ್ಕಾರಿ ಯೋಜನೆಯಿಂದ ಪ್ರತಿಯೊಬ್ಬರೂ ಪ್ರಯೋಜನ ಪಡೆಯುವಂತೆ ಖಚಿತಪಡಿಸಿಕೊಳ್ಳಲು ನಾನು ಮೌನವಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಅಯೋಧ್ಯೆ ವಿವಾದದ ಬಗ್ಗೆ ಕಾಂಗ್ರೆಸ್ ಎಂದಿಗೂ ಪರಿಹಾರವನ್ನು ಬಯಸಿರಲಿಲ್ಲ. “ತಮ್ಮ ರಾಜಕೀಯ ಲಾಭಕ್ಕಾಗಿ ವಿವಾದ ಮುಂದುವರಿಯಬೇಕೆಂದು ಅವರು ಬಯಸಿದ್ದರು. ತಲೆಯ ಮೇಲೆ ಟೋಪಿ ಹಾಕುವುದರಿಂದ, ಉಪವಾಸ-ಇಫ್ತಾರ್‌ಗೆ ಹಾಜರಾಗುವುದು ಜಾತ್ಯತೀತತೆಯಲ್ಲ. ಇದು ನಾಟಕ ಎಂದು ಜನರಿಗೆ ತಿಳಿದಿದೆ. ಜನರಿಗೆ ವಾಸ್ತವ ತಿಳಿದಿದೆ” ಎಂದು ಸಿಎಂ ಹೇಳಿದರು.

ಎಸ್ಪಿ ವಕ್ತಾರ ಪವನ್ ಪಾಂಡೆ ಆದಿತ್ಯನಾಥ್ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಮಾಡಿದ ಪ್ರಮಾಣವಚನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ಇಡೀ ರಾಜ್ಯದ ಸಿಎಂ. ಕೇವಲ ಹಿಂದೂ ಸಮುದಾಯದವರು ಮಾತ್ರವಲ್ಲ. ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಮರ ಜನಸಂಖ್ಯೆ ಏನೇ ಇರಲಿ, ಅವರು ಎಲ್ಲರ ಸಿಎಂ. ಸಿಎಂ ಅವರ ಈ ಮಾತಿಗೆ ಘನತೆ ಇಲ್ಲ. ಇದಕ್ಕಾಗಿ ಅವರು ಜನರಿಂದ ಕ್ಷಮೆಯಾಚಿಸಬೇಕು” ಎಂದು ಪಾಂಡೆ ಹೇಳಿದರು.

ಉತ್ತರ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಕ್ತಾರ ಲಾಲನ್ ಕುಮಾರ್, “ಅವರ ಮಸೀದಿ ಹೇಳಿಕೆಯ ಬಗ್ಗೆ ನಮಗೆ ಯಾವುದೇ ಅಭಿಪ್ರಾಯಗಳಿಲ್ಲ.” ಆದರೆ ರಾಮ ಜನ್ಮಭೂಮಿ-ಬಾಬರಿ ಮಸೀದಿಯ ಬೀಗಗಳನ್ನು ತೆರೆದ ಗೌರವ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಉಲ್ಲೇಖಿಸಿದ ಕಾಂಗ್ರೆಸ್ ವಕ್ತಾರ, “ಅವರು ನಕಲಿ ಹಿಂದುತ್ವದ ರಾಜಕೀಯವನ್ನು ಮಾಡುತ್ತಾರೆ. ಕಾಂಗ್ರೆಸ್ ಯಾವಾಗಲೂ ಜನರ ಹಿತದೃಷ್ಟಿಯಿಂದ ಮಾತನಾಡುತ್ತದೆ. ರಾಮ ಪ್ರತಿಯೊಬ್ಬರದ್ದು ಆಗಿದ್ದಾನೆ, ಆದರೆ ರಾಮ ಅವರದು ಮಾತ್ರ ಎಂದು ಬಿಜೆಪಿ ತೋರಿಸಲು ಬಯಸಿದೆ” ಎಂದು ಅವರು ಹೇಳಿದ್ದಾರೆ.


ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...