Homeಮುಖಪುಟನಾನು ಬಿಜೆಪಿ ಸೇರುವುದಿಲ್ಲ: ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್

ನಾನು ಬಿಜೆಪಿ ಸೇರುವುದಿಲ್ಲ: ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್

ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿತ ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪಕ್ಷಾಂತರ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಲಿದೆ ಎಂದು ವರದಿಯಾಗಿತ್ತು.

- Advertisement -
- Advertisement -

ಕಾಂಗ್ರೆಸ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಹಿರಂಗವಾಗಿಯೇ ದಂಗೆ ಘೋಷಿಸಿದ್ದ ರಾಜಸ್ಥಾನ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, “ನಾನು ಬಿಜೆಪಿಗೆ ಸೇರುತ್ತಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿತ ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪಕ್ಷಾಂತರ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಲಿದೆ ಎಂದು ವರದಿಯಾಗಿತ್ತು.

ಈ ವರದಿಯ ಬೆನ್ನಿಗೆ ಕಾಂಗ್ರೆಸ್ ಇಂದು ಜೈಪುರದಲ್ಲಿ ಎಲ್ಲಾ ಶಾಸಕರ ಸಭೆ ಕರೆದಿತ್ತು. ಇದರ ಕುರಿತು ಇಂದು ಸ್ಪಷ್ಟನೆ ನೀಡಿರುವ ಸಚಿನ್ ಪೈಲಟ್ ತಾವು ಯಾವುದೇ ಪಕ್ಷಕ್ಕೆ ಸೇರುತ್ತಿಲ್ಲ ಎಂಬುದನ್ನು ತಿಳಿಸಿದ್ದಾರೆ.

ಇಂದು ರಾಜಸ್ಥಾನ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಎಲ್ಲಾ ಶಾಸಕರೂ ಪಕ್ಷದ ಬೆನ್ನಿಗೆ ಇದ್ದಾರೆ ಎಂದು ತೋರಿಸಲು ಕೈ ನಾಯಕರು ಮುಂದಾಗಿದ್ದಾರೆ. ಅಲ್ಲದೆ, ಪಕ್ಷದ ಎಲ್ಲಾ ಶಾಸಕರು ಈ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು, ಇಲ್ಲದಿದ್ದರೆ ಸೂಕ್ತ ಕ್ರಮ ಜರುಗಿಸುವುದಾಗಿಯೂ ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ಆಂತರಿಕ ಭಿನ್ನಮತ ಆರಂಭವಾಗುತ್ತಿದ್ದಂತೆ ಪಕ್ಷದ ಕೇಂದ್ರ ನಾಯಕರು ಈಗಾಗಲೇ ರಾಜಸ್ಥಾನಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ, ಇಂದಿನ ಸಭೆಯಲ್ಲಿ 106 ಕಾಂಗ್ರೆಸ್ ಶಾಸಕರ ಬೆಂಬಲ ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಇದೆ ಎಂದು ಸಹಿ ಸಂಗ್ರಹಿಸುವುದು ಇಂದಿನ ಸಭೆಯ ಮುಖ್ಯ ಉದ್ದೇಶ.

ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರಿಗೆ 19 ರಿಂದ 30 ಶಾಸಕರ ಬೆಂಬಲ ಇದೆ ಎಂದು ಹೇಳಲಾಗುತ್ತಿದೆಯಾದರೂ ಅವರ ಬೆನ್ನಿಗೆ ಯಾರಿದ್ದಾರೆ? ಎಂಬುದು ಈವರೆಗೆ ಸ್ಪಷ್ಟವಾಗಿಲ್ಲ. ಈ ನಡುವೆ ಅವರ ಬಣದಲ್ಲಿ ಗುರುತಿಸಿಕೊಂಡಿದ್ದ ಪ್ರಮುಖ ಮೂರು ಜನ ಶಾಸಕರು ಭಾನುವಾರ ಸಂಜೆ ವೇಳೆಗೆ ಯೂ-ಟರ್ನ್ ತೆಗೆದುಕೊಂಡಿದ್ದರು. ಹೀಗಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿಯನ್ನು ಸಚಿನ್ ಪೈಲಟ್ ರದ್ದು ಮಾಡಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಸಚಿನ್ ಪೈಲಟ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗದಿದ್ದರೂ ಸಹ ಸ್ವತಂತ್ಯ್ರ ಪಕ್ಷ ಸ್ಥಾಪನೆಗೆ ಮುಂದಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಅವರ ಮನವೋಲಿಸಲು ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಸ್ಥಾನಗಳನ್ನು ಹೊಂದಿದ್ದು, 12 ಸ್ವತಂತ್ರ ಅಭ್ಯರ್ಥಿಗಳ ಬೆಂಬಲವನ್ನು ಪಡೆದುಕೊಂಡಿದೆ. ಇದಲ್ಲದೆ ಇತರ ಪಕ್ಷಗಳ ಐದು ಶಾಸಕರು ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದ್ದಾರೆ. 


ಇದನ್ನೂ ಓದಿ: ಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...