Homeಮುಖಪುಟನಾನು ಬಿಜೆಪಿ ಸೇರುವುದಿಲ್ಲ: ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್

ನಾನು ಬಿಜೆಪಿ ಸೇರುವುದಿಲ್ಲ: ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್

ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿತ ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪಕ್ಷಾಂತರ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಲಿದೆ ಎಂದು ವರದಿಯಾಗಿತ್ತು.

- Advertisement -
- Advertisement -

ಕಾಂಗ್ರೆಸ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಹಿರಂಗವಾಗಿಯೇ ದಂಗೆ ಘೋಷಿಸಿದ್ದ ರಾಜಸ್ಥಾನ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, “ನಾನು ಬಿಜೆಪಿಗೆ ಸೇರುತ್ತಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿತ ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪಕ್ಷಾಂತರ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ. ಹೀಗಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಲಿದೆ ಎಂದು ವರದಿಯಾಗಿತ್ತು.

ಈ ವರದಿಯ ಬೆನ್ನಿಗೆ ಕಾಂಗ್ರೆಸ್ ಇಂದು ಜೈಪುರದಲ್ಲಿ ಎಲ್ಲಾ ಶಾಸಕರ ಸಭೆ ಕರೆದಿತ್ತು. ಇದರ ಕುರಿತು ಇಂದು ಸ್ಪಷ್ಟನೆ ನೀಡಿರುವ ಸಚಿನ್ ಪೈಲಟ್ ತಾವು ಯಾವುದೇ ಪಕ್ಷಕ್ಕೆ ಸೇರುತ್ತಿಲ್ಲ ಎಂಬುದನ್ನು ತಿಳಿಸಿದ್ದಾರೆ.

ಇಂದು ರಾಜಸ್ಥಾನ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಎಲ್ಲಾ ಶಾಸಕರೂ ಪಕ್ಷದ ಬೆನ್ನಿಗೆ ಇದ್ದಾರೆ ಎಂದು ತೋರಿಸಲು ಕೈ ನಾಯಕರು ಮುಂದಾಗಿದ್ದಾರೆ. ಅಲ್ಲದೆ, ಪಕ್ಷದ ಎಲ್ಲಾ ಶಾಸಕರು ಈ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು, ಇಲ್ಲದಿದ್ದರೆ ಸೂಕ್ತ ಕ್ರಮ ಜರುಗಿಸುವುದಾಗಿಯೂ ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ಆಂತರಿಕ ಭಿನ್ನಮತ ಆರಂಭವಾಗುತ್ತಿದ್ದಂತೆ ಪಕ್ಷದ ಕೇಂದ್ರ ನಾಯಕರು ಈಗಾಗಲೇ ರಾಜಸ್ಥಾನಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ, ಇಂದಿನ ಸಭೆಯಲ್ಲಿ 106 ಕಾಂಗ್ರೆಸ್ ಶಾಸಕರ ಬೆಂಬಲ ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಇದೆ ಎಂದು ಸಹಿ ಸಂಗ್ರಹಿಸುವುದು ಇಂದಿನ ಸಭೆಯ ಮುಖ್ಯ ಉದ್ದೇಶ.

ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರಿಗೆ 19 ರಿಂದ 30 ಶಾಸಕರ ಬೆಂಬಲ ಇದೆ ಎಂದು ಹೇಳಲಾಗುತ್ತಿದೆಯಾದರೂ ಅವರ ಬೆನ್ನಿಗೆ ಯಾರಿದ್ದಾರೆ? ಎಂಬುದು ಈವರೆಗೆ ಸ್ಪಷ್ಟವಾಗಿಲ್ಲ. ಈ ನಡುವೆ ಅವರ ಬಣದಲ್ಲಿ ಗುರುತಿಸಿಕೊಂಡಿದ್ದ ಪ್ರಮುಖ ಮೂರು ಜನ ಶಾಸಕರು ಭಾನುವಾರ ಸಂಜೆ ವೇಳೆಗೆ ಯೂ-ಟರ್ನ್ ತೆಗೆದುಕೊಂಡಿದ್ದರು. ಹೀಗಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿಯನ್ನು ಸಚಿನ್ ಪೈಲಟ್ ರದ್ದು ಮಾಡಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಸಚಿನ್ ಪೈಲಟ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗದಿದ್ದರೂ ಸಹ ಸ್ವತಂತ್ಯ್ರ ಪಕ್ಷ ಸ್ಥಾಪನೆಗೆ ಮುಂದಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಅವರ ಮನವೋಲಿಸಲು ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಸ್ಥಾನಗಳನ್ನು ಹೊಂದಿದ್ದು, 12 ಸ್ವತಂತ್ರ ಅಭ್ಯರ್ಥಿಗಳ ಬೆಂಬಲವನ್ನು ಪಡೆದುಕೊಂಡಿದೆ. ಇದಲ್ಲದೆ ಇತರ ಪಕ್ಷಗಳ ಐದು ಶಾಸಕರು ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದ್ದಾರೆ. 


ಇದನ್ನೂ ಓದಿ: ಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...