Homeಕರ್ನಾಟಕಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದನ್ನು ಖಂಡಿಸಿ ಸಮ್ಮೇಳನದ ಕವಿಗೋಷ್ಟಿಯಲ್ಲಿ ಭಾಗವಹಿಸುವುದಿಲ್ಲ ಎಂದು ಯುವ ಬರಹಗಾರ ಚಾಂದ್ ಪಾಷ ಘೋಷಿಸಿದ್ದಾರೆ.

ಮೂರನೇ ಕವಿಗೋಷ್ಟಿಯಲ್ಲಿ ಕವನ ವಾಚಿಸಲು ಚಾಂದ್ ಪಾಷ ಎನ್ ಎಸ್‌ರವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಮ್ಮೇಳನದ ರೀತಿ ನೀತಿ, ಸಮ್ಮೇಳನಾಧ್ಯಕ್ಷರ ಹಿಂದಿ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು ಗೋಷ್ಠಿಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, “ಕನ್ನಡ ಸಾಹಿತ್ಯ ಪರಿಷತ್ ಸಮಸ್ತ ಕನ್ನಡಿಗರನ್ನು ಪ್ರತಿನಿಧಿಸುವ ಪ್ರಜ್ಞೆ. ಅದೊಂದು ಜಾತಿ, ಧರ್ಮವನ್ನು ಪ್ರತಿನಿಧಿಸುವ ಮತ್ತು ಧರ್ಮದ ವಿಶೇಷಣವನ್ನು ಹೊತ್ತು ಮೆರೆಸುವ ಧಾರ್ಮಿಕ ಕೇಂದ್ರವಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯ ಪರಿಷತ್ ಸಂಪೂರ್ಣವಾಗಿ ಜಾತಿ ಮತ್ತು ಧರ್ಮ ಕೇಂದ್ರಿತ ಹಾಗೂ ಪುರುಷ ಪ್ರಧಾನತೆಯನ್ನೆ ಪ್ರತಿಪಾದಿಸುವ ಮನುಸಂಸ್ಕೃತಿಯನ್ನು ಚಲಾವಣೆಗೆ ತರಲು ಹಾತೊರೆಯುತ್ತಿರುವುದು ದುರಂತವೇ ಸರಿ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡು ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, “ಸರ್ವ ಜನಾಂಗದ ಶಾಂತಿಯ ತೋಟ”ಕ್ಕೆ ಬೆಂಕಿ ಹಚ್ಚಿದ ಹಾಗಿದೆ. ಹಾವೇರಿಯಂತಹ ಸಾಮರಸ್ಯ ಉಳ್ಳ ಸ್ಥಳದಲ್ಲಿ ನಡೆಯುವ ಸಮ್ಮೇಳನವು ದಲಿತ ಮತ್ತು ಮುಸ್ಲಿಂ ಸಮುದಾಯದ ಬರಹಗಾರನ್ನು ವ್ಯವಸ್ಥತವಾಗಿ ಹೊರಗಿಟ್ಟಿದ್ದು, ಉಡುಪಿ ಮಠದಿಂದ ಕನಕದಾಸನನ್ನು ಹೊರಗಿಟ್ಟ ಹಾಗೆಯೇ ಇದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡೆ ಇಲ್ಲ. ವಿಶ್ವಕ್ಕೆ ವಿಶ್ವಮಾನವತ್ವ ಸಂದೇಶ ಸಾರಿದೆ ಕುವೆಂಪು ನೆಲದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯವನ್ನು ಹಬ್ಬಿಸುತ್ತಿರುವುದು, ಸರ್ಕಾರಿ ಶಾಲೆಗಳ ಸ್ಥಿತಿ ಗತಿ…. ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಕೂಡ ಸಮ್ಮೇಳನದಲ್ಲಿ ಇದರ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ” ಎಂದಿದ್ದಾರೆ.

ಇಂಥ ದುರಿತ ಕಾಲದಲ್ಲಿ ಸಾಮರಸ್ಯವನ್ನು ಹಬ್ಬಿಸಬೇಕೆ ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ. “ಹಿಂದಿ ಭಾರತದ ರಾಷ್ಟ್ರೀಯ ಭಾಷೆ” ಎಂದು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡರಂಗೇಗೌಡರು ಸಂದರ್ಶನದಲ್ಲಿ ಹೇಳಿದ ಮಾತಿದು. ಇಂಥ ಕನ್ನಡ ಭಾಷಾ ವಿರೋಧಿಯನ್ನು ಅಧ್ಯಕ್ಷ ಸ್ಥಾನದಲ್ಲಿರಿಸುವ ಸಮ್ಮೇಳನದಲ್ಲಿ ಆಹ್ವಾನಿತ ಕವಿಯಾಗಿರುವ ನಾನು ಖಂಡಿತವಾಗಿಯು ಕವಿತೆ ಓದಲಾರೆ, ಭಾಗವಹಿಸಿಲಾರೆ. ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕದ ಹಾಗೆಯೇ ಇದೆ. ಅಷ್ಟಕ್ಕೂ ಷರೀಫನನ್ನು ಹೊರಗಿಟ್ಟಿದ್ದನ್ನೆ ಗುರು ಗೋವಿಂದ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...