Homeಕರ್ನಾಟಕಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದನ್ನು ಖಂಡಿಸಿ ಸಮ್ಮೇಳನದ ಕವಿಗೋಷ್ಟಿಯಲ್ಲಿ ಭಾಗವಹಿಸುವುದಿಲ್ಲ ಎಂದು ಯುವ ಬರಹಗಾರ ಚಾಂದ್ ಪಾಷ ಘೋಷಿಸಿದ್ದಾರೆ.

ಮೂರನೇ ಕವಿಗೋಷ್ಟಿಯಲ್ಲಿ ಕವನ ವಾಚಿಸಲು ಚಾಂದ್ ಪಾಷ ಎನ್ ಎಸ್‌ರವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಮ್ಮೇಳನದ ರೀತಿ ನೀತಿ, ಸಮ್ಮೇಳನಾಧ್ಯಕ್ಷರ ಹಿಂದಿ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು ಗೋಷ್ಠಿಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, “ಕನ್ನಡ ಸಾಹಿತ್ಯ ಪರಿಷತ್ ಸಮಸ್ತ ಕನ್ನಡಿಗರನ್ನು ಪ್ರತಿನಿಧಿಸುವ ಪ್ರಜ್ಞೆ. ಅದೊಂದು ಜಾತಿ, ಧರ್ಮವನ್ನು ಪ್ರತಿನಿಧಿಸುವ ಮತ್ತು ಧರ್ಮದ ವಿಶೇಷಣವನ್ನು ಹೊತ್ತು ಮೆರೆಸುವ ಧಾರ್ಮಿಕ ಕೇಂದ್ರವಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯ ಪರಿಷತ್ ಸಂಪೂರ್ಣವಾಗಿ ಜಾತಿ ಮತ್ತು ಧರ್ಮ ಕೇಂದ್ರಿತ ಹಾಗೂ ಪುರುಷ ಪ್ರಧಾನತೆಯನ್ನೆ ಪ್ರತಿಪಾದಿಸುವ ಮನುಸಂಸ್ಕೃತಿಯನ್ನು ಚಲಾವಣೆಗೆ ತರಲು ಹಾತೊರೆಯುತ್ತಿರುವುದು ದುರಂತವೇ ಸರಿ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡು ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, “ಸರ್ವ ಜನಾಂಗದ ಶಾಂತಿಯ ತೋಟ”ಕ್ಕೆ ಬೆಂಕಿ ಹಚ್ಚಿದ ಹಾಗಿದೆ. ಹಾವೇರಿಯಂತಹ ಸಾಮರಸ್ಯ ಉಳ್ಳ ಸ್ಥಳದಲ್ಲಿ ನಡೆಯುವ ಸಮ್ಮೇಳನವು ದಲಿತ ಮತ್ತು ಮುಸ್ಲಿಂ ಸಮುದಾಯದ ಬರಹಗಾರನ್ನು ವ್ಯವಸ್ಥತವಾಗಿ ಹೊರಗಿಟ್ಟಿದ್ದು, ಉಡುಪಿ ಮಠದಿಂದ ಕನಕದಾಸನನ್ನು ಹೊರಗಿಟ್ಟ ಹಾಗೆಯೇ ಇದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡೆ ಇಲ್ಲ. ವಿಶ್ವಕ್ಕೆ ವಿಶ್ವಮಾನವತ್ವ ಸಂದೇಶ ಸಾರಿದೆ ಕುವೆಂಪು ನೆಲದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯವನ್ನು ಹಬ್ಬಿಸುತ್ತಿರುವುದು, ಸರ್ಕಾರಿ ಶಾಲೆಗಳ ಸ್ಥಿತಿ ಗತಿ…. ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಕೂಡ ಸಮ್ಮೇಳನದಲ್ಲಿ ಇದರ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ” ಎಂದಿದ್ದಾರೆ.

ಇಂಥ ದುರಿತ ಕಾಲದಲ್ಲಿ ಸಾಮರಸ್ಯವನ್ನು ಹಬ್ಬಿಸಬೇಕೆ ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ. “ಹಿಂದಿ ಭಾರತದ ರಾಷ್ಟ್ರೀಯ ಭಾಷೆ” ಎಂದು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡರಂಗೇಗೌಡರು ಸಂದರ್ಶನದಲ್ಲಿ ಹೇಳಿದ ಮಾತಿದು. ಇಂಥ ಕನ್ನಡ ಭಾಷಾ ವಿರೋಧಿಯನ್ನು ಅಧ್ಯಕ್ಷ ಸ್ಥಾನದಲ್ಲಿರಿಸುವ ಸಮ್ಮೇಳನದಲ್ಲಿ ಆಹ್ವಾನಿತ ಕವಿಯಾಗಿರುವ ನಾನು ಖಂಡಿತವಾಗಿಯು ಕವಿತೆ ಓದಲಾರೆ, ಭಾಗವಹಿಸಿಲಾರೆ. ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕದ ಹಾಗೆಯೇ ಇದೆ. ಅಷ್ಟಕ್ಕೂ ಷರೀಫನನ್ನು ಹೊರಗಿಟ್ಟಿದ್ದನ್ನೆ ಗುರು ಗೋವಿಂದ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...