Homeಕರ್ನಾಟಕಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕ.ಸಾ.ಪ ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ

- Advertisement -
- Advertisement -

ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿದ್ದನ್ನು ಖಂಡಿಸಿ ಸಮ್ಮೇಳನದ ಕವಿಗೋಷ್ಟಿಯಲ್ಲಿ ಭಾಗವಹಿಸುವುದಿಲ್ಲ ಎಂದು ಯುವ ಬರಹಗಾರ ಚಾಂದ್ ಪಾಷ ಘೋಷಿಸಿದ್ದಾರೆ.

ಮೂರನೇ ಕವಿಗೋಷ್ಟಿಯಲ್ಲಿ ಕವನ ವಾಚಿಸಲು ಚಾಂದ್ ಪಾಷ ಎನ್ ಎಸ್‌ರವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಮ್ಮೇಳನದ ರೀತಿ ನೀತಿ, ಸಮ್ಮೇಳನಾಧ್ಯಕ್ಷರ ಹಿಂದಿ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು ಗೋಷ್ಠಿಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, “ಕನ್ನಡ ಸಾಹಿತ್ಯ ಪರಿಷತ್ ಸಮಸ್ತ ಕನ್ನಡಿಗರನ್ನು ಪ್ರತಿನಿಧಿಸುವ ಪ್ರಜ್ಞೆ. ಅದೊಂದು ಜಾತಿ, ಧರ್ಮವನ್ನು ಪ್ರತಿನಿಧಿಸುವ ಮತ್ತು ಧರ್ಮದ ವಿಶೇಷಣವನ್ನು ಹೊತ್ತು ಮೆರೆಸುವ ಧಾರ್ಮಿಕ ಕೇಂದ್ರವಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯ ಪರಿಷತ್ ಸಂಪೂರ್ಣವಾಗಿ ಜಾತಿ ಮತ್ತು ಧರ್ಮ ಕೇಂದ್ರಿತ ಹಾಗೂ ಪುರುಷ ಪ್ರಧಾನತೆಯನ್ನೆ ಪ್ರತಿಪಾದಿಸುವ ಮನುಸಂಸ್ಕೃತಿಯನ್ನು ಚಲಾವಣೆಗೆ ತರಲು ಹಾತೊರೆಯುತ್ತಿರುವುದು ದುರಂತವೇ ಸರಿ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡು ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, “ಸರ್ವ ಜನಾಂಗದ ಶಾಂತಿಯ ತೋಟ”ಕ್ಕೆ ಬೆಂಕಿ ಹಚ್ಚಿದ ಹಾಗಿದೆ. ಹಾವೇರಿಯಂತಹ ಸಾಮರಸ್ಯ ಉಳ್ಳ ಸ್ಥಳದಲ್ಲಿ ನಡೆಯುವ ಸಮ್ಮೇಳನವು ದಲಿತ ಮತ್ತು ಮುಸ್ಲಿಂ ಸಮುದಾಯದ ಬರಹಗಾರನ್ನು ವ್ಯವಸ್ಥತವಾಗಿ ಹೊರಗಿಟ್ಟಿದ್ದು, ಉಡುಪಿ ಮಠದಿಂದ ಕನಕದಾಸನನ್ನು ಹೊರಗಿಟ್ಟ ಹಾಗೆಯೇ ಇದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡೆ ಇಲ್ಲ. ವಿಶ್ವಕ್ಕೆ ವಿಶ್ವಮಾನವತ್ವ ಸಂದೇಶ ಸಾರಿದೆ ಕುವೆಂಪು ನೆಲದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯವನ್ನು ಹಬ್ಬಿಸುತ್ತಿರುವುದು, ಸರ್ಕಾರಿ ಶಾಲೆಗಳ ಸ್ಥಿತಿ ಗತಿ…. ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದ್ದರೂ ಕೂಡ ಸಮ್ಮೇಳನದಲ್ಲಿ ಇದರ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ” ಎಂದಿದ್ದಾರೆ.

ಇಂಥ ದುರಿತ ಕಾಲದಲ್ಲಿ ಸಾಮರಸ್ಯವನ್ನು ಹಬ್ಬಿಸಬೇಕೆ ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ. “ಹಿಂದಿ ಭಾರತದ ರಾಷ್ಟ್ರೀಯ ಭಾಷೆ” ಎಂದು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡರಂಗೇಗೌಡರು ಸಂದರ್ಶನದಲ್ಲಿ ಹೇಳಿದ ಮಾತಿದು. ಇಂಥ ಕನ್ನಡ ಭಾಷಾ ವಿರೋಧಿಯನ್ನು ಅಧ್ಯಕ್ಷ ಸ್ಥಾನದಲ್ಲಿರಿಸುವ ಸಮ್ಮೇಳನದಲ್ಲಿ ಆಹ್ವಾನಿತ ಕವಿಯಾಗಿರುವ ನಾನು ಖಂಡಿತವಾಗಿಯು ಕವಿತೆ ಓದಲಾರೆ, ಭಾಗವಹಿಸಿಲಾರೆ. ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕದ ಹಾಗೆಯೇ ಇದೆ. ಅಷ್ಟಕ್ಕೂ ಷರೀಫನನ್ನು ಹೊರಗಿಟ್ಟಿದ್ದನ್ನೆ ಗುರು ಗೋವಿಂದ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮುಸ್ಲಿಂ ಲೇಖಕರನ್ನು ಹೊರಗಿಟ್ಟ ಕಸಾಪ: ಪ್ರತಿರೋಧವಾಗಿ ಜ.8ರಂದು ಜನಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...