Homeಮುಖಪುಟ'ಜಮ್ಮು-ಕಾಶ್ಮೀರ 'ರಾಜ್ಯತ್ವ' ಮರುಸ್ಥಾಪನೆಗೆ ಒತ್ತಡ ಹೇರುತ್ತೇನೆ..'; ಪೂಂಚ್‌ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಘೋಷಣೆ

‘ಜಮ್ಮು-ಕಾಶ್ಮೀರ ‘ರಾಜ್ಯತ್ವ’ ಮರುಸ್ಥಾಪನೆಗೆ ಒತ್ತಡ ಹೇರುತ್ತೇನೆ..’; ಪೂಂಚ್‌ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಘೋಷಣೆ

- Advertisement -
- Advertisement -

‘ವಿಧಾನಸಭೆ ಚುನಾವಣೆ ಮುಗಿದ ಬಳಿಕ ಜಮ್ಮು ಮತ್ತು ಕಾಶ್ಮೀರದ ‘ರಾಜ್ಯ ಸ್ಥಾನಮಾನ’ವನ್ನು ಮರುಸ್ಥಾಪಿಸಲು ವಿಫಲವಾದರೆ, ಕಾಂಗ್ರೆಸ್ ಕೇಂದ್ರದ ಮೇಲೆ ಒತ್ತಡ ಹೇರಲಿದೆ’ ಎಂದು ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

“ದೇಶದ ಇತಿಹಾಸದಲ್ಲಿ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ್ದು ಇದೇ ಮೊದಲು. ನಿಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಕಸಿದುಕೊಳ್ಳಲಾಗಿದೆ. ರಾಜ್ಯತ್ವವನ್ನು ಮರುಸ್ಥಾಪಿಸುವ ಬೇಡಿಕೆಗೆ ನಾವು ಆದ್ಯತೆ ನೀಡಿದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ಪೂಂಚ್ ಜಿಲ್ಲೆಯ ಸುರನ್‌ಕೋಟೆ ಪ್ರದೇಶದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಚುನಾವಣೆಯ ನಂತರ ರಾಜ್ಯವನ್ನು ಪುನಃಸ್ಥಾಪಿಸಲು ಅವರು ವಿಫಲವಾದರೆ, ನಿಮ್ಮ ರಾಜ್ಯತ್ವವನ್ನು ಮರುಸ್ಥಾಪಿಸುವಂತೆ ನಾವು ಅವರ ಮೇಲೆ ಒತ್ತಡ ಹೇರುತ್ತೇವೆ. ಜಮ್ಮು ಮತ್ತು ಕಾಶ್ಮೀರವನ್ನು ದೆಹಲಿ ಆಳುತ್ತಿದೆ, ಸ್ಥಳೀಯರಲ್ಲದವರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ” ಎಂದು ಅವರು ಆರೋಪಿಸಿದರು.

ಧರ್ಮ, ಜಾತಿ, ಪಂಥ ಮತ್ತು ಪ್ರದೇಶದ ಹೆಸರಿನಲ್ಲಿ ಜನರನ್ನು ವಿಭಜಿಸಲು ಆರ್‌ಎಸ್‌ಎಸ್-ಬಿಜೆಪಿ ದ್ವೇಷವನ್ನು ಹರಡುತ್ತಿದೆ. ಅವರನ್ನು ಎದುರಿಸಲು ಕಾಂಗ್ರೆಸ್ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿಗಳನ್ನು ತೆರೆದಿದೆ ಎಂದು ಹೇಳಿದರು.

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಪ್ರಸ್ತುತ ಮೂರು ಹಂತದ ಚುನಾವಣೆ ನಡೆಯುತ್ತಿದೆ. ಬುಧವಾರ ಮತ್ತು ಅಕ್ಟೋಬರ್ 1 ರಂದು ಕ್ರಮವಾಗಿ ಎರಡನೇ ಮತ್ತು ಮೂರನೇ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ; ‘ನನ್ನ ಪರಿಸ್ಥಿತಿ ರಾಮನ ಅನುಪಸ್ಥಿತಿಯ ಭರತನಂತಿದೆ..’ ಎಂದ ದೆಹಲಿ ನೂತನ ಮುಖ್ಯಮಂತ್ರಿ ಅತಿಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...