Homeಅಂತರಾಷ್ಟ್ರೀಯಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ

ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ

ವಿಜಯ್ ಮಲ್ಯ ಭಾರತದಲ್ಲಿ ಅಂದಾಜು 9,000 ಕೋಟಿ ರೂ.ಗಳ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತದಲ್ಲಿ ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ತಮ್ಮ ಸಾಲದ ಬಾಕಿ ಹಣವನ್ನು ಶೇ 100 ರಷ್ಟು ಮರುಪಾವತಿಸುತ್ತೇನೆ ಹಾಗೂ ತನ್ನ ವಿರುದ್ದದ ಪ್ರಕರಣವನ್ನು ಕೈಬಿಡಿ ಎಂದು ಸರ್ಕಾರವನ್ನು ಕೋರಿದ್ದಾರೆ.

20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ನೀಡಿದ್ದಕ್ಕಾಗಿ ಭಾರತ ಸರ್ಕಾರವನ್ನು ಅಭಿನಂದಿಸುತ್ತಾ, ತಾನು ಬಾಕಿ ಹಣವನ್ನು ಮರುಪಾವತಿ ಮಾಡುತ್ತೇನೆಂದು ಪದೇ ಪದೇ ಹೇಳಿದರೂ ನನ್ನ ಮಾತನ್ನು ನಿರ್ಲಕ್ಷಿಸಲಾಗಿದೆ ಎಂದು ವಿಷಾದಿಸಿದ್ದಾರೆ.

“ಕೊರೊನಾ ಪರಿಹಾರ ಪ್ಯಾಕೇಜ್‌ಗಾಗಿ ಸರ್ಕಾರಕ್ಕೆ ಅಭಿನಂದನೆಗಳು. ಅವರು ಬಯಸಿದಷ್ಟು ಕರೆನ್ಸಿಯನ್ನು ಮುದ್ರಿಸಬಹುದು ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸಾಲಗಳ 100% ಮರುಪಾವತಿಯನ್ನು ನೀಡುವ ನನ್ನಂತಹ ಸಣ್ಣ ಕೊಡುಗೆದಾರರನ್ನು ನಿರಂತರವಾಗಿ ನಿರ್ಲಕ್ಷಿಸಬೇಕೇ?” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

ಭಾರತದಲ್ಲಿ ಅಂದಾಜು 9,000 ಕೋಟಿ ರೂ.ಗಳ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ಅವರು, “ದಯವಿಟ್ಟು ನನ್ನ ಹಣವನ್ನು ಬೇಷರತ್ತಾಗಿ ತೆಗೆದುಕೊಂಡು, ಪ್ರಕರಣವನ್ನು ಕೈಬಿಡಿ” ಎಂದು ಹೇಳಿದ್ದಾರೆ.

ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಒಳಗಾಗಿ ಭಾರತದಿಂದ ಲಂಡನ್‌ಗೆ ಪಲಾಯನ ಮಾಡಿದ ತಲೆ ಮರೆಸಿಕೊಂಡಿರುವ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. ಆದರೆ ವಿಜಯ ಮಲ್ಯ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಲಂಡನ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.


ಓದಿ: ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ


ವಿಡಿಯೋ ನೋಡಿ: ಪಂಜಾಬ್‌ನಿಂದ ಝಾನ್ಸಿವರೆಗೂ ಕಾಲ್ನಡಿಗೆ ಹೊರಟ ಅಮ್ಮನ ಸೂಟ್‌ ಕೇಸ್‌ ಮೇಲೆ ನಿದ್ರಿಸುತ್ತಿರುವ ಮಗು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...