ಭಾರತದಲ್ಲಿ ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ತಮ್ಮ ಸಾಲದ ಬಾಕಿ ಹಣವನ್ನು ಶೇ 100 ರಷ್ಟು ಮರುಪಾವತಿಸುತ್ತೇನೆ ಹಾಗೂ ತನ್ನ ವಿರುದ್ದದ ಪ್ರಕರಣವನ್ನು ಕೈಬಿಡಿ ಎಂದು ಸರ್ಕಾರವನ್ನು ಕೋರಿದ್ದಾರೆ.
20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ನೀಡಿದ್ದಕ್ಕಾಗಿ ಭಾರತ ಸರ್ಕಾರವನ್ನು ಅಭಿನಂದಿಸುತ್ತಾ, ತಾನು ಬಾಕಿ ಹಣವನ್ನು ಮರುಪಾವತಿ ಮಾಡುತ್ತೇನೆಂದು ಪದೇ ಪದೇ ಹೇಳಿದರೂ ನನ್ನ ಮಾತನ್ನು ನಿರ್ಲಕ್ಷಿಸಲಾಗಿದೆ ಎಂದು ವಿಷಾದಿಸಿದ್ದಾರೆ.
“ಕೊರೊನಾ ಪರಿಹಾರ ಪ್ಯಾಕೇಜ್ಗಾಗಿ ಸರ್ಕಾರಕ್ಕೆ ಅಭಿನಂದನೆಗಳು. ಅವರು ಬಯಸಿದಷ್ಟು ಕರೆನ್ಸಿಯನ್ನು ಮುದ್ರಿಸಬಹುದು ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸಾಲಗಳ 100% ಮರುಪಾವತಿಯನ್ನು ನೀಡುವ ನನ್ನಂತಹ ಸಣ್ಣ ಕೊಡುಗೆದಾರರನ್ನು ನಿರಂತರವಾಗಿ ನಿರ್ಲಕ್ಷಿಸಬೇಕೇ?” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.
Congratulations to the Government for a Covid 19 relief package. They can print as much currency as they want BUT should a small contributor like me who offers 100% payback of State owned Bank loans be constantly ignored ? Please take my money unconditionally and close.
— Vijay Mallya (@TheVijayMallya) May 14, 2020
ಭಾರತದಲ್ಲಿ ಅಂದಾಜು 9,000 ಕೋಟಿ ರೂ.ಗಳ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ಅವರು, “ದಯವಿಟ್ಟು ನನ್ನ ಹಣವನ್ನು ಬೇಷರತ್ತಾಗಿ ತೆಗೆದುಕೊಂಡು, ಪ್ರಕರಣವನ್ನು ಕೈಬಿಡಿ” ಎಂದು ಹೇಳಿದ್ದಾರೆ.
ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಒಳಗಾಗಿ ಭಾರತದಿಂದ ಲಂಡನ್ಗೆ ಪಲಾಯನ ಮಾಡಿದ ತಲೆ ಮರೆಸಿಕೊಂಡಿರುವ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. ಆದರೆ ವಿಜಯ ಮಲ್ಯ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಲಂಡನ್ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಓದಿ: ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ
ವಿಡಿಯೋ ನೋಡಿ: ಪಂಜಾಬ್ನಿಂದ ಝಾನ್ಸಿವರೆಗೂ ಕಾಲ್ನಡಿಗೆ ಹೊರಟ ಅಮ್ಮನ ಸೂಟ್ ಕೇಸ್ ಮೇಲೆ ನಿದ್ರಿಸುತ್ತಿರುವ ಮಗು