Homeಮುಖಪುಟ"ನಾನೂ ಪದ್ಮಶ್ರೀ ಹಿಂದಿರುಗಿಸುತ್ತೇನೆ"...ಸಾಕ್ಷಿ ಮಲಿಕ್ ಬೆಂಬಲಿಸಿದ ಮತ್ತೊಬ್ಬ ಕುಸ್ತಿಪಟು

“ನಾನೂ ಪದ್ಮಶ್ರೀ ಹಿಂದಿರುಗಿಸುತ್ತೇನೆ”…ಸಾಕ್ಷಿ ಮಲಿಕ್ ಬೆಂಬಲಿಸಿದ ಮತ್ತೊಬ್ಬ ಕುಸ್ತಿಪಟು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶ್ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿರುವುದನ್ನು ವಿರೋಧಿಸಿ ಕುಸ್ತಿಗೆ ವಿದಾಯ ಹೇಳಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರಿಗೆ ಕುಸ್ತಿಪಟು ವೀರೇಂದ್ರ ಸಿಂಗ್ ಯಾದವ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಪದ್ಮಶ್ರೀ ಮರಳಿಸಿದ ಬೆನ್ನಲ್ಲೇ ವೀರೇಂದ್ರ ಸಿಂಗ್ ಕೂಡ “ನಾನು ಪದ್ಮಶ್ರೀ ವಾಪಸ್ ಕೊಡುತ್ತೇನೆ” ಎಂದಿದ್ದಾರೆ.

“ನಾನು ನನ್ನ ಸಹೋದರಿ, ದೇಶದ ಮಗಳಿಗಾಗಿ ಪದ್ಮಶ್ರೀ ಹಿಂದಿರುಗಿಸುತ್ತೇನೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ ನಿಮ್ಮ ಮಗಳು, ನನ್ನ ಸಹೋದರಿ ಸಾಕ್ಷಿ ಮಲಿಕ್ ಬಗ್ಗೆ ನನಗೆ ಹೆಮ್ಮಯಿದೆ. ನಾನು ದೇಶದ ಉನ್ನತ ಆಟಗಾರರನ್ನು ಕೂಡ ಈ ವಿಚಾರದಲ್ಲಿ ನಿಮ್ಮ ನಿರ್ಧಾರ ಕೋರುತ್ತೇನೆ” ಎಂದು ವೀರೇಂದ್ರ ಸಿಂಗ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ನೀರಜ್ ಚೋಪ್ರಾ ಅವರಿಗೆ ಪೋಸ್ಟ್‌ ಟ್ಯಾಗ್ ಮಾಡಿದ್ದಾರೆ.

ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ನಿನ್ನೆ(ಡಿ.22) ಸಂಜೆ ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು ತೆರಳಿದ್ದರು. ಇದನ್ನು ಪ್ರಧಾನಿ ಮೋದಿಯವರಿಗೆ ತಲುಪಿಸಿ ಎಂದಿದ್ದರು. ಬಳಿಕ ಪೊಲೀಸರು ಬಂದು ಪ್ರಶಸ್ತಿಯನ್ನು ತೆಗೆದುಕೊಂಡು ಹೋಗಿದ್ದಾರೆ.

“ಮಹಿಳಾ ಕುಸ್ತಿಪಟುಗಳಿಗೆ ಸರಿಯಾದ ಗೌರವ ಸಿಗದಿದ್ದಾಗ ನಾನು ಈ ಪ್ರಶಸ್ತಿ ಇಟ್ಟುಕೊಳ್ಳುವುದರಲ್ಲಿ ಅರ್ಥವಿಲ್ಲ. ನಾವು 40 ದಿನಗಳ ಕಾಲ ರಸ್ತೆಯಲ್ಲಿದ್ದೆವು. ಸರ್ಕಾರ ನಮಗೆ ನೀಡಿದ್ದ ಭರವಸೆಗಳು ಈಡೇರಿಲ್ಲ. ನಮ್ಮ ಹೋರಾಟವು ಸರ್ಕಾರದ ವಿರುದ್ಧವಲ್ಲ ಒಬ್ಬ ವ್ಯಕ್ತಿಯ ವಿರುದ್ದ. ನಾನು ನ್ಯಾಯಾಂಗವನ್ನು ನಂಬುತ್ತೇನೆ. ಆದರೆ, ಈಗ ಏನಾಗ್ತಿದೆ? ನನಗೆ ಈ ವ್ಯವಸ್ಥೆಯ ಮೇಲೆ ನಂಬಿಕೆಯಿಲ್ಲ” ಎಂದು ಪ್ರಶಸ್ತಿ ಹಿಂದಿರುಗಿಸಲು ಬಂದಿದ್ದ ವೇಳೆ ಬಜರಂಗ್ ಪೂನಿಯಾ ಬೇಸರದಿಂದ ಹೇಳಿದ್ದಾರೆ.

“ಹೆಣ್ಣುಮಕ್ಕಳ ಪೋಷಕರು ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ಮತ್ತೆ ನಾವು ಹೇಗೆ ನ್ಯಾಯ ಪಡೆಯುವುದು? ಪ್ರಧಾನಮಂತ್ರಿ, ಉಪ ರಾಷ್ಟ್ರಪತಿ ಮತ್ತು ರಾಷ್ಟ್ರಪತಿಗಳು ಎಲ್ಲರೂ ಈ ರೀತಿ ಯಾಕೆ ನಡೆಯುತ್ತಿದೆ ಎಂದು ಉತ್ತರಿಸಬೇಕು. ಇಂತಹ ಘಟನೆಗಳು ನಮ್ಮ ನ್ಯಾಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹಳಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕುತ್ತವೆ” ಎಂದು ಹೇಳಿದ್ದಾರೆ ವೀರೇಂದ್ರ ಸಿಂಗ್.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಡಿ.21ರಂದು ಆಯ್ಕೆಯಾಗಿದ್ದಾರೆ. ಈ ಬೆನ್ನಲ್ಲೇ ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ ಒಲಿಂಪಿಕ್ ಪದಕ ವಿಜೇತೆ ಹಾಗೂ ಕುಸ್ತಿಪಟು ಸಾಕ್ಷಿ ಮಲಿಕ್, ಪ್ರತ್ರಕರ್ತರ ಮುಂದೆಯೇ ತಮ್ಮ ಬೂಟು ಕಳಚಿಟ್ಟು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ ಅವರಿಗೆ ಬೆಂಬಲ ವ್ಯಕ್ತಪಡಿಸಿ ಬಜರಂಗ್ ಪೂನಿಯಾ ಪದ್ಮಶ್ರೀ ಹಿಂದಿರುಗಿಸಿದ್ದಾರೆ.

ಇದನ್ನೂ ಓದಿ : ‘ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…’; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...