Homeಕರ್ನಾಟಕಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಆರ್‌ಎಸ್‌ಎಸ್‌ನವರು ಹೇಗೆ ಲೂಟಿ ಮಾಡಿದ್ದಾರೆ ಎಂದು ಮುಂದಿನ 15-20 ದಿನಗಳಲ್ಲಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಭಾನುವಾರ (ನವೆಂಬರ್ 16) ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಣ ಆರ್‌ಎಸ್‌ಎಸ್‌ಗೆ ಹೋಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡ್ತೀನಿ. ಎಷ್ಟು ಲೂಟಿ ಮಾಡಿದ್ದಾರೆನ್ನುವುದು ಗೊತ್ತಾಗುತ್ತದೆ. ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ ಎಂದು ಕಿಡಿಕಾರಿದ್ದಾರೆ.

ಚಿತ್ತಾಪುರದಲ್ಲಿ ಆರ್​​ಎಸ್ಎಸ್ ಪಥಸಂಚಲನ ಆಯ್ತೆಂದು ಮುಗಿದಿಲ್ಲ. ಚಿತ್ತಾಪುರದಲ್ಲಿ ಆರ್​ಎಸ್ಎಸ್ ಪಥಸಂಚಲನ ಮೂಲಕ ಶುರುವಾಗಿದೆ. ಆರ್​ಎಸ್ಎಸ್ ಕಥೆ ಇನ್ನೂ ಬಹಳ ಇದೆ ಮುಂದೆ ಹೇಳುತ್ತೇನೆ. ಚಿತ್ತಾಪುರಕ್ಕೆ 3 ಲಕ್ಷ ಜನ ಬರ್ತಾರೆ ಅಂದ್ರು, ಬಂದ್ರಾ? ಆರ್.ಅಶೋಕ್, ವಿಜಯೇಂದ್ರ ಚಿತ್ತಾಪುರಕ್ಕೆ ಬರ್ತೀವಿ ಅಂದ್ರು, ಬಂದ್ರಾ? ಎಂದು ಪ್ರಶ್ನಿಸಿದ್ದಾರೆ.

ದೇವಾಲಯಗಳ ಹುಂಡಿ ಹಣವನ್ನು ಸರ್ಕಾರ ಲೆಕ್ಕ ಹಾಕುತ್ತದೆ, ಅಂಥದ್ದರಲ್ಲಿ ಆರ್​ಎಸ್ಎಸ್ ಹಣದ ಲೆಕ್ಕ ಕೇಳಬಾರದಾ? ಇವರು ಹೇಗೆ ಆದಾಯ ತೆರಿಗೆ ವಂಚಿಸುತ್ತಿದ್ದಾರೆಂದು ದಾಖಲೆ ಸಮೇತ ಬಹಿರಂಗಪಡಿಸುವೆ. ಇವರಿಗೆ ಯಾರೆಲ್ಲ ದೇಣಿಗೆ ಕೊಡುತ್ತಾರೆ, ಲೆಕ್ಕ ಹೇಗೆ ಕೊಡ್ತಾರೆ? ಆರ್​ಎಸ್ಎಸ್ ದೇಣಿಗೆ ಸಂಗ್ರಹದ ಬಗ್ಗೆ ಹೊರಗಡೆ ಬರಲಿದೆ ಎಂದು ಹೇಳಿದ್ದಾರೆ.

ಮೋಹನ್ ಭಾಗವತ್ ಅವರೇ ಖುದ್ದಾಗಿ ನಮ್ಮದು ನೋಂದಣಿಯಾಗದ ಸಂಘಟನೆ ಎಂದು ಹೇಳಿದ್ದಾರೆ. ನಮ್ಮದು ವ್ಯಕ್ತಿಗಳ ಗುಂಪು, ನಾವು ನೋಂದಣಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಬಹಳ ಹಳೆಯ ಸಂಸ್ಥೆ ಬೆಂಗಳೂರು ಕ್ಲಬ್ ಕೂಡ ವ್ಯಕ್ತಿಗಳ ಗುಂಪು, ಅದರೂ ಅವರು ನೋಂದಣಿ ಮಾಡಿಕೊಂಡಿದ್ದಾರೆ. ಹೀಗಿರುವಾ ಅವರು (ಆರ್‌ಎಸ್‌ಎಸ್‌ನವರು) ಹೇಳುವುದು ಸಂವಿಧಾನನ ಅಥವಾ ಸಂವಿಧಾನದಲ್ಲಿ ಇರುವುದು ಸಂವಿಧಾನನ? ಪ್ರಶ್ನಿಸಿದ್ದಾರೆ.

ಚಿತ್ತಾಪುರ RSS ಪಥಸಂಚಲನ ನಾವು ತೀರ್ಮಾನಿಸಿದಂತೆ ನಡೆದಿದೆ. ಅನುಮತಿ ಕೊಟ್ಟಿದ್ದು, ಎಷ್ಟು ಜನ, ಯಾರ‍್ಯಾರು ಇರಬೇಕು, ಯಾವ ರಸ್ತೆಯಲ್ಲಿ ಮೆರವಣಿಗೆ ಸಾಗಬೇಕು ಎಂದು ಹೇಳಿದ್ದು ನಾವು (ಸರ್ಕಾರ)
ನಾವು ಮಾಡಬೇಡಿ ಎಂದು ಹೇಳಿರಲಿಲ್ಲ, ಅನುಮತಿ ಪಡೆದು ಮಾಡಿ ಎಂದಿದ್ದೆವು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆರ್‌ಎಸ್‌ಎಸ್ ಎನ್ನುವ ಛಾಯಾ ಪ್ರಭುತ್ವದ (ಶ್ಯಾಡೋ ಸರ್ಕಾರ) ಆರಂಭದ ದಿನಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...