Homeಕರ್ನಾಟಕಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಆರ್‌ಎಸ್‌ಎಸ್‌ನವರು ಹೇಗೆ ಲೂಟಿ ಮಾಡಿದ್ದಾರೆ ಎಂದು ಮುಂದಿನ 15-20 ದಿನಗಳಲ್ಲಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಭಾನುವಾರ (ನವೆಂಬರ್ 16) ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಣ ಆರ್‌ಎಸ್‌ಎಸ್‌ಗೆ ಹೋಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡ್ತೀನಿ. ಎಷ್ಟು ಲೂಟಿ ಮಾಡಿದ್ದಾರೆನ್ನುವುದು ಗೊತ್ತಾಗುತ್ತದೆ. ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ ಎಂದು ಕಿಡಿಕಾರಿದ್ದಾರೆ.

ಚಿತ್ತಾಪುರದಲ್ಲಿ ಆರ್​​ಎಸ್ಎಸ್ ಪಥಸಂಚಲನ ಆಯ್ತೆಂದು ಮುಗಿದಿಲ್ಲ. ಚಿತ್ತಾಪುರದಲ್ಲಿ ಆರ್​ಎಸ್ಎಸ್ ಪಥಸಂಚಲನ ಮೂಲಕ ಶುರುವಾಗಿದೆ. ಆರ್​ಎಸ್ಎಸ್ ಕಥೆ ಇನ್ನೂ ಬಹಳ ಇದೆ ಮುಂದೆ ಹೇಳುತ್ತೇನೆ. ಚಿತ್ತಾಪುರಕ್ಕೆ 3 ಲಕ್ಷ ಜನ ಬರ್ತಾರೆ ಅಂದ್ರು, ಬಂದ್ರಾ? ಆರ್.ಅಶೋಕ್, ವಿಜಯೇಂದ್ರ ಚಿತ್ತಾಪುರಕ್ಕೆ ಬರ್ತೀವಿ ಅಂದ್ರು, ಬಂದ್ರಾ? ಎಂದು ಪ್ರಶ್ನಿಸಿದ್ದಾರೆ.

ದೇವಾಲಯಗಳ ಹುಂಡಿ ಹಣವನ್ನು ಸರ್ಕಾರ ಲೆಕ್ಕ ಹಾಕುತ್ತದೆ, ಅಂಥದ್ದರಲ್ಲಿ ಆರ್​ಎಸ್ಎಸ್ ಹಣದ ಲೆಕ್ಕ ಕೇಳಬಾರದಾ? ಇವರು ಹೇಗೆ ಆದಾಯ ತೆರಿಗೆ ವಂಚಿಸುತ್ತಿದ್ದಾರೆಂದು ದಾಖಲೆ ಸಮೇತ ಬಹಿರಂಗಪಡಿಸುವೆ. ಇವರಿಗೆ ಯಾರೆಲ್ಲ ದೇಣಿಗೆ ಕೊಡುತ್ತಾರೆ, ಲೆಕ್ಕ ಹೇಗೆ ಕೊಡ್ತಾರೆ? ಆರ್​ಎಸ್ಎಸ್ ದೇಣಿಗೆ ಸಂಗ್ರಹದ ಬಗ್ಗೆ ಹೊರಗಡೆ ಬರಲಿದೆ ಎಂದು ಹೇಳಿದ್ದಾರೆ.

ಮೋಹನ್ ಭಾಗವತ್ ಅವರೇ ಖುದ್ದಾಗಿ ನಮ್ಮದು ನೋಂದಣಿಯಾಗದ ಸಂಘಟನೆ ಎಂದು ಹೇಳಿದ್ದಾರೆ. ನಮ್ಮದು ವ್ಯಕ್ತಿಗಳ ಗುಂಪು, ನಾವು ನೋಂದಣಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಬಹಳ ಹಳೆಯ ಸಂಸ್ಥೆ ಬೆಂಗಳೂರು ಕ್ಲಬ್ ಕೂಡ ವ್ಯಕ್ತಿಗಳ ಗುಂಪು, ಅದರೂ ಅವರು ನೋಂದಣಿ ಮಾಡಿಕೊಂಡಿದ್ದಾರೆ. ಹೀಗಿರುವಾ ಅವರು (ಆರ್‌ಎಸ್‌ಎಸ್‌ನವರು) ಹೇಳುವುದು ಸಂವಿಧಾನನ ಅಥವಾ ಸಂವಿಧಾನದಲ್ಲಿ ಇರುವುದು ಸಂವಿಧಾನನ? ಪ್ರಶ್ನಿಸಿದ್ದಾರೆ.

ಚಿತ್ತಾಪುರ RSS ಪಥಸಂಚಲನ ನಾವು ತೀರ್ಮಾನಿಸಿದಂತೆ ನಡೆದಿದೆ. ಅನುಮತಿ ಕೊಟ್ಟಿದ್ದು, ಎಷ್ಟು ಜನ, ಯಾರ‍್ಯಾರು ಇರಬೇಕು, ಯಾವ ರಸ್ತೆಯಲ್ಲಿ ಮೆರವಣಿಗೆ ಸಾಗಬೇಕು ಎಂದು ಹೇಳಿದ್ದು ನಾವು (ಸರ್ಕಾರ)
ನಾವು ಮಾಡಬೇಡಿ ಎಂದು ಹೇಳಿರಲಿಲ್ಲ, ಅನುಮತಿ ಪಡೆದು ಮಾಡಿ ಎಂದಿದ್ದೆವು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆರ್‌ಎಸ್‌ಎಸ್ ಎನ್ನುವ ಛಾಯಾ ಪ್ರಭುತ್ವದ (ಶ್ಯಾಡೋ ಸರ್ಕಾರ) ಆರಂಭದ ದಿನಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....