Homeಕರ್ನಾಟಕಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಆರ್‌ಎಸ್‌ಎಸ್‌ನವರು ಹೇಗೆ ಲೂಟಿ ಮಾಡಿದ್ದಾರೆ ಎಂದು ಮುಂದಿನ 15-20 ದಿನಗಳಲ್ಲಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಭಾನುವಾರ (ನವೆಂಬರ್ 16) ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಣ ಆರ್‌ಎಸ್‌ಎಸ್‌ಗೆ ಹೋಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡ್ತೀನಿ. ಎಷ್ಟು ಲೂಟಿ ಮಾಡಿದ್ದಾರೆನ್ನುವುದು ಗೊತ್ತಾಗುತ್ತದೆ. ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ ಎಂದು ಕಿಡಿಕಾರಿದ್ದಾರೆ.

ಚಿತ್ತಾಪುರದಲ್ಲಿ ಆರ್​​ಎಸ್ಎಸ್ ಪಥಸಂಚಲನ ಆಯ್ತೆಂದು ಮುಗಿದಿಲ್ಲ. ಚಿತ್ತಾಪುರದಲ್ಲಿ ಆರ್​ಎಸ್ಎಸ್ ಪಥಸಂಚಲನ ಮೂಲಕ ಶುರುವಾಗಿದೆ. ಆರ್​ಎಸ್ಎಸ್ ಕಥೆ ಇನ್ನೂ ಬಹಳ ಇದೆ ಮುಂದೆ ಹೇಳುತ್ತೇನೆ. ಚಿತ್ತಾಪುರಕ್ಕೆ 3 ಲಕ್ಷ ಜನ ಬರ್ತಾರೆ ಅಂದ್ರು, ಬಂದ್ರಾ? ಆರ್.ಅಶೋಕ್, ವಿಜಯೇಂದ್ರ ಚಿತ್ತಾಪುರಕ್ಕೆ ಬರ್ತೀವಿ ಅಂದ್ರು, ಬಂದ್ರಾ? ಎಂದು ಪ್ರಶ್ನಿಸಿದ್ದಾರೆ.

ದೇವಾಲಯಗಳ ಹುಂಡಿ ಹಣವನ್ನು ಸರ್ಕಾರ ಲೆಕ್ಕ ಹಾಕುತ್ತದೆ, ಅಂಥದ್ದರಲ್ಲಿ ಆರ್​ಎಸ್ಎಸ್ ಹಣದ ಲೆಕ್ಕ ಕೇಳಬಾರದಾ? ಇವರು ಹೇಗೆ ಆದಾಯ ತೆರಿಗೆ ವಂಚಿಸುತ್ತಿದ್ದಾರೆಂದು ದಾಖಲೆ ಸಮೇತ ಬಹಿರಂಗಪಡಿಸುವೆ. ಇವರಿಗೆ ಯಾರೆಲ್ಲ ದೇಣಿಗೆ ಕೊಡುತ್ತಾರೆ, ಲೆಕ್ಕ ಹೇಗೆ ಕೊಡ್ತಾರೆ? ಆರ್​ಎಸ್ಎಸ್ ದೇಣಿಗೆ ಸಂಗ್ರಹದ ಬಗ್ಗೆ ಹೊರಗಡೆ ಬರಲಿದೆ ಎಂದು ಹೇಳಿದ್ದಾರೆ.

ಮೋಹನ್ ಭಾಗವತ್ ಅವರೇ ಖುದ್ದಾಗಿ ನಮ್ಮದು ನೋಂದಣಿಯಾಗದ ಸಂಘಟನೆ ಎಂದು ಹೇಳಿದ್ದಾರೆ. ನಮ್ಮದು ವ್ಯಕ್ತಿಗಳ ಗುಂಪು, ನಾವು ನೋಂದಣಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಬಹಳ ಹಳೆಯ ಸಂಸ್ಥೆ ಬೆಂಗಳೂರು ಕ್ಲಬ್ ಕೂಡ ವ್ಯಕ್ತಿಗಳ ಗುಂಪು, ಅದರೂ ಅವರು ನೋಂದಣಿ ಮಾಡಿಕೊಂಡಿದ್ದಾರೆ. ಹೀಗಿರುವಾ ಅವರು (ಆರ್‌ಎಸ್‌ಎಸ್‌ನವರು) ಹೇಳುವುದು ಸಂವಿಧಾನನ ಅಥವಾ ಸಂವಿಧಾನದಲ್ಲಿ ಇರುವುದು ಸಂವಿಧಾನನ? ಪ್ರಶ್ನಿಸಿದ್ದಾರೆ.

ಚಿತ್ತಾಪುರ RSS ಪಥಸಂಚಲನ ನಾವು ತೀರ್ಮಾನಿಸಿದಂತೆ ನಡೆದಿದೆ. ಅನುಮತಿ ಕೊಟ್ಟಿದ್ದು, ಎಷ್ಟು ಜನ, ಯಾರ‍್ಯಾರು ಇರಬೇಕು, ಯಾವ ರಸ್ತೆಯಲ್ಲಿ ಮೆರವಣಿಗೆ ಸಾಗಬೇಕು ಎಂದು ಹೇಳಿದ್ದು ನಾವು (ಸರ್ಕಾರ)
ನಾವು ಮಾಡಬೇಡಿ ಎಂದು ಹೇಳಿರಲಿಲ್ಲ, ಅನುಮತಿ ಪಡೆದು ಮಾಡಿ ಎಂದಿದ್ದೆವು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆರ್‌ಎಸ್‌ಎಸ್ ಎನ್ನುವ ಛಾಯಾ ಪ್ರಭುತ್ವದ (ಶ್ಯಾಡೋ ಸರ್ಕಾರ) ಆರಂಭದ ದಿನಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...