HomeUncategorized'ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ': ರಾಹುಲ್ ಗಾಂಧಿ

‘ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ’: ರಾಹುಲ್ ಗಾಂಧಿ

- Advertisement -
- Advertisement -

ದೆಹಲಿ: ಚುನಾವಣಾ ಅಕ್ರಮಗಳನ್ನು ಬಹಿರಂಗಪಡಿಸುವ ಪ್ರಕ್ರಿಯೆಯನ್ನು ಮುಂದುವರಿಸುವುದಾಗಿ ಮತ್ತು ನರೇಂದ್ರ ಮೋದಿ “ಚುನಾವ್ ಚೋರಿ” (ಚುನಾವಣಾ ಕಳ್ಳತನ) ಮೂಲಕ ಹೇಗೆ ಪ್ರಧಾನಿಯಾದರು ಎಂಬುದನ್ನು ದೇಶದ ಯುವಜನರಿಗೆ ತೋರಿಸುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮಲ್ಲಿ ಸಾಕಷ್ಟು ಸಾಕ್ಷಿಗಳಿವೆ, ನಾವು ಈ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ. ನರೇಂದ್ರ ಮೋದಿ ‘ಚುನಾವಣೆ ಕಳ್ಳತನ’ ಮೂಲಕ ಪ್ರಧಾನಿಯಾದರು ಮತ್ತು ಬಿಜೆಪಿ ‘ಚುನಾವಣೆ ಕಳ್ಳತನದಲ್ಲಿ ತೊಡಗಿದೆ ಎಂದು ನಾವು ಭಾರತದ ಜನರಲ್ ಝಡ್ ಮತ್ತು ಯುವಕರಿಗೆ ಸ್ಪಷ್ಟವಾಗಿ ತೋರಿಸುತ್ತೇವೆ” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. 

‘ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ನಡೆಸಿರುವ ಚುನಾವಣಾ ದುಷ್ಕೃತ್ಯಗಳನ್ನ ಸಮರ್ಥಿಸುತ್ತಿದೆ, ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ’. ‘ಹೈಡ್ರೋಜನ್ ಬಾಂಬ್’ ಬಗ್ಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬುಧವಾರ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯನ್ನೇ “ಕದ್ದಿದ್ದಾರೆ” ಎಂದು ಆರೋಪಿಸಿದ್ದರು. ಮತದಾರರ ಪಟ್ಟಿಯ ಡೇಟಾವನ್ನು ಉಲ್ಲೇಖಿಸಿ, 25 ಲಕ್ಷ ನಮೂದುಗಳು ನಕಲಿ ಮತ್ತು ಚುನಾವಣಾ ಆಯೋಗವು ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದ್ದರು.

ಗುರುವಾರ, ರಾಹುಲ್ “ಮತ ಚೋರಿಯ” ಪುರಾವೆಗಳನ್ನು ಬಲಪಡಿಸುವ ವರದಿಗಳು ಬಿಹಾರದಿಂದ ಬಂದಿವೆ ಎಂದು ಹೇಳಿಕೊಂಡರು. ಈ “ಪ್ರಜಾಪ್ರಭುತ್ವದ ಕೊಲೆ”ಯಲ್ಲಿ ಪ್ರಮುಖ ಅಪರಾಧಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರು, ಅವರು “ಸಂವಿಧಾನದ ವಿರುದ್ಧ ಅತಿದೊಡ್ಡ ದ್ರೋಹ” ಮಾಡುತ್ತಿದ್ದಾರೆ ಎಂದು ರಾಹುಲ್ ಗಂಭೀರ ಆರೋಪ ಮಾಡಿದ್ದಾರೆ. 

ಶುಕ್ರವಾರ ಬಿಹಾರದ ಬಂಕಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿರುವ ರಾಹುಲ್ ಗಾಂಧಿ ವರದಿಗಾರರ ಪ್ರಶ್ನೆಗೆ ಉತ್ತರಿಸಿ, “ಹರಿಯಾಣ ಚುನಾವಣೆಗಳು ಚುನಾವಣೆಗಳೇ ಅಲ್ಲ ಎಂದು ನಾನು ಹೇಳುತ್ತಿದ್ದೇನೆ. ಅಲ್ಲಿ ‘ಸಗಟು ಕಳ್ಳತನ’ ನಡೆಯಿತು. ನಾನು ಮಾಡಿದ ಆರೋಪಗಳಿಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ – ನಕಲಿ ಮತ, ನಕಲಿ ಛಾಯಾಚಿತ್ರ. ಬಿಜೆಪಿ ಇದನ್ನು ಸಮರ್ಥಿಸಿಕೊಳ್ಳುತ್ತಿದೆ ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ” ಎಂದು ಹೇಳಿದರು.

ಮಾಧ್ಯಮಗಳು ನಾನು ಪ್ರಸ್ತುತ ಪಡಿಸಿದ ಉದಾಹರಣೆಗಳನ್ನು ಎತ್ತಿಕೊಳ್ಳುತ್ತಿವೆ ಎಂದು ಅವರು ಹೇಳಿದರು, ಉದಾಹರಣೆಗೆ ಮತದಾರರ ಪಟ್ಟಿಯಲ್ಲಿ ಬ್ರೆಜಿಲ್ ಮಹಿಳೆಯ ಫೋಟೋವನ್ನು ಹಲವು ಬಾರಿ ಬಳಸಲಾಗಿದೆ. ಆದರೆ, “ಬ್ರೆಜಿಲ್ ಪ್ರಜೆಯ ಫೋಟೋದಲ್ಲಿ ಮತದಾನವನ್ನು ಹೇಗೆ ಮಾಡಲಾಯಿತು?” ಎಂದು ಅವರು ತಿಳಿದುಕೊಳ್ಳಲು ಪ್ರಯತ್ನಿಸಿದರು.  “ವಾಸ್ತವವೆಂದರೆ ನರೇಂದ್ರ ಮೋದಿ ಜಿ, ಅಮಿತ್ ಶಾ ಜಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ. ಸಂವಿಧಾನವು ‘ಒಬ್ಬ ವ್ಯಕ್ತಿ, ಒಂದು ಮತ’ ಎಂದು ಹೇಳುತ್ತದೆ. ಹರಿಯಾಣವು ಅಲ್ಲಿ ‘ಒಬ್ಬ ವ್ಯಕ್ತಿ, ಒಂದು ಮತ’ ಇರಲಿಲ್ಲ ಎಂದು ತೋರಿಸುತ್ತದೆ. ಅದು ‘ಒಬ್ಬ ವ್ಯಕ್ತಿ, ಬಹು ಮತಗಳು’… ಅವರು ಬಿಹಾರದಲ್ಲೂ ಅದನ್ನೇ ಮಾಡಲಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಇದು ಸಂಭವಿಸಿದೆ…,” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...