HomeUncategorized'ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ': ರಾಹುಲ್ ಗಾಂಧಿ

‘ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ’: ರಾಹುಲ್ ಗಾಂಧಿ

- Advertisement -
- Advertisement -

ದೆಹಲಿ: ಚುನಾವಣಾ ಅಕ್ರಮಗಳನ್ನು ಬಹಿರಂಗಪಡಿಸುವ ಪ್ರಕ್ರಿಯೆಯನ್ನು ಮುಂದುವರಿಸುವುದಾಗಿ ಮತ್ತು ನರೇಂದ್ರ ಮೋದಿ “ಚುನಾವ್ ಚೋರಿ” (ಚುನಾವಣಾ ಕಳ್ಳತನ) ಮೂಲಕ ಹೇಗೆ ಪ್ರಧಾನಿಯಾದರು ಎಂಬುದನ್ನು ದೇಶದ ಯುವಜನರಿಗೆ ತೋರಿಸುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮಲ್ಲಿ ಸಾಕಷ್ಟು ಸಾಕ್ಷಿಗಳಿವೆ, ನಾವು ಈ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ. ನರೇಂದ್ರ ಮೋದಿ ‘ಚುನಾವಣೆ ಕಳ್ಳತನ’ ಮೂಲಕ ಪ್ರಧಾನಿಯಾದರು ಮತ್ತು ಬಿಜೆಪಿ ‘ಚುನಾವಣೆ ಕಳ್ಳತನದಲ್ಲಿ ತೊಡಗಿದೆ ಎಂದು ನಾವು ಭಾರತದ ಜನರಲ್ ಝಡ್ ಮತ್ತು ಯುವಕರಿಗೆ ಸ್ಪಷ್ಟವಾಗಿ ತೋರಿಸುತ್ತೇವೆ” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. 

‘ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ನಡೆಸಿರುವ ಚುನಾವಣಾ ದುಷ್ಕೃತ್ಯಗಳನ್ನ ಸಮರ್ಥಿಸುತ್ತಿದೆ, ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ’. ‘ಹೈಡ್ರೋಜನ್ ಬಾಂಬ್’ ಬಗ್ಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬುಧವಾರ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯನ್ನೇ “ಕದ್ದಿದ್ದಾರೆ” ಎಂದು ಆರೋಪಿಸಿದ್ದರು. ಮತದಾರರ ಪಟ್ಟಿಯ ಡೇಟಾವನ್ನು ಉಲ್ಲೇಖಿಸಿ, 25 ಲಕ್ಷ ನಮೂದುಗಳು ನಕಲಿ ಮತ್ತು ಚುನಾವಣಾ ಆಯೋಗವು ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದ್ದರು.

ಗುರುವಾರ, ರಾಹುಲ್ “ಮತ ಚೋರಿಯ” ಪುರಾವೆಗಳನ್ನು ಬಲಪಡಿಸುವ ವರದಿಗಳು ಬಿಹಾರದಿಂದ ಬಂದಿವೆ ಎಂದು ಹೇಳಿಕೊಂಡರು. ಈ “ಪ್ರಜಾಪ್ರಭುತ್ವದ ಕೊಲೆ”ಯಲ್ಲಿ ಪ್ರಮುಖ ಅಪರಾಧಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರು, ಅವರು “ಸಂವಿಧಾನದ ವಿರುದ್ಧ ಅತಿದೊಡ್ಡ ದ್ರೋಹ” ಮಾಡುತ್ತಿದ್ದಾರೆ ಎಂದು ರಾಹುಲ್ ಗಂಭೀರ ಆರೋಪ ಮಾಡಿದ್ದಾರೆ. 

ಶುಕ್ರವಾರ ಬಿಹಾರದ ಬಂಕಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿರುವ ರಾಹುಲ್ ಗಾಂಧಿ ವರದಿಗಾರರ ಪ್ರಶ್ನೆಗೆ ಉತ್ತರಿಸಿ, “ಹರಿಯಾಣ ಚುನಾವಣೆಗಳು ಚುನಾವಣೆಗಳೇ ಅಲ್ಲ ಎಂದು ನಾನು ಹೇಳುತ್ತಿದ್ದೇನೆ. ಅಲ್ಲಿ ‘ಸಗಟು ಕಳ್ಳತನ’ ನಡೆಯಿತು. ನಾನು ಮಾಡಿದ ಆರೋಪಗಳಿಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ – ನಕಲಿ ಮತ, ನಕಲಿ ಛಾಯಾಚಿತ್ರ. ಬಿಜೆಪಿ ಇದನ್ನು ಸಮರ್ಥಿಸಿಕೊಳ್ಳುತ್ತಿದೆ ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ” ಎಂದು ಹೇಳಿದರು.

ಮಾಧ್ಯಮಗಳು ನಾನು ಪ್ರಸ್ತುತ ಪಡಿಸಿದ ಉದಾಹರಣೆಗಳನ್ನು ಎತ್ತಿಕೊಳ್ಳುತ್ತಿವೆ ಎಂದು ಅವರು ಹೇಳಿದರು, ಉದಾಹರಣೆಗೆ ಮತದಾರರ ಪಟ್ಟಿಯಲ್ಲಿ ಬ್ರೆಜಿಲ್ ಮಹಿಳೆಯ ಫೋಟೋವನ್ನು ಹಲವು ಬಾರಿ ಬಳಸಲಾಗಿದೆ. ಆದರೆ, “ಬ್ರೆಜಿಲ್ ಪ್ರಜೆಯ ಫೋಟೋದಲ್ಲಿ ಮತದಾನವನ್ನು ಹೇಗೆ ಮಾಡಲಾಯಿತು?” ಎಂದು ಅವರು ತಿಳಿದುಕೊಳ್ಳಲು ಪ್ರಯತ್ನಿಸಿದರು.  “ವಾಸ್ತವವೆಂದರೆ ನರೇಂದ್ರ ಮೋದಿ ಜಿ, ಅಮಿತ್ ಶಾ ಜಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ. ಸಂವಿಧಾನವು ‘ಒಬ್ಬ ವ್ಯಕ್ತಿ, ಒಂದು ಮತ’ ಎಂದು ಹೇಳುತ್ತದೆ. ಹರಿಯಾಣವು ಅಲ್ಲಿ ‘ಒಬ್ಬ ವ್ಯಕ್ತಿ, ಒಂದು ಮತ’ ಇರಲಿಲ್ಲ ಎಂದು ತೋರಿಸುತ್ತದೆ. ಅದು ‘ಒಬ್ಬ ವ್ಯಕ್ತಿ, ಬಹು ಮತಗಳು’… ಅವರು ಬಿಹಾರದಲ್ಲೂ ಅದನ್ನೇ ಮಾಡಲಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಇದು ಸಂಭವಿಸಿದೆ…,” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...