HomeUncategorized'ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ': ರಾಹುಲ್ ಗಾಂಧಿ

‘ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ’: ರಾಹುಲ್ ಗಾಂಧಿ

- Advertisement -
- Advertisement -

ದೆಹಲಿ: ಚುನಾವಣಾ ಅಕ್ರಮಗಳನ್ನು ಬಹಿರಂಗಪಡಿಸುವ ಪ್ರಕ್ರಿಯೆಯನ್ನು ಮುಂದುವರಿಸುವುದಾಗಿ ಮತ್ತು ನರೇಂದ್ರ ಮೋದಿ “ಚುನಾವ್ ಚೋರಿ” (ಚುನಾವಣಾ ಕಳ್ಳತನ) ಮೂಲಕ ಹೇಗೆ ಪ್ರಧಾನಿಯಾದರು ಎಂಬುದನ್ನು ದೇಶದ ಯುವಜನರಿಗೆ ತೋರಿಸುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮಲ್ಲಿ ಸಾಕಷ್ಟು ಸಾಕ್ಷಿಗಳಿವೆ, ನಾವು ಈ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ. ನರೇಂದ್ರ ಮೋದಿ ‘ಚುನಾವಣೆ ಕಳ್ಳತನ’ ಮೂಲಕ ಪ್ರಧಾನಿಯಾದರು ಮತ್ತು ಬಿಜೆಪಿ ‘ಚುನಾವಣೆ ಕಳ್ಳತನದಲ್ಲಿ ತೊಡಗಿದೆ ಎಂದು ನಾವು ಭಾರತದ ಜನರಲ್ ಝಡ್ ಮತ್ತು ಯುವಕರಿಗೆ ಸ್ಪಷ್ಟವಾಗಿ ತೋರಿಸುತ್ತೇವೆ” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. 

‘ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ನಡೆಸಿರುವ ಚುನಾವಣಾ ದುಷ್ಕೃತ್ಯಗಳನ್ನ ಸಮರ್ಥಿಸುತ್ತಿದೆ, ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ’. ‘ಹೈಡ್ರೋಜನ್ ಬಾಂಬ್’ ಬಗ್ಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬುಧವಾರ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯನ್ನೇ “ಕದ್ದಿದ್ದಾರೆ” ಎಂದು ಆರೋಪಿಸಿದ್ದರು. ಮತದಾರರ ಪಟ್ಟಿಯ ಡೇಟಾವನ್ನು ಉಲ್ಲೇಖಿಸಿ, 25 ಲಕ್ಷ ನಮೂದುಗಳು ನಕಲಿ ಮತ್ತು ಚುನಾವಣಾ ಆಯೋಗವು ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದ್ದರು.

ಗುರುವಾರ, ರಾಹುಲ್ “ಮತ ಚೋರಿಯ” ಪುರಾವೆಗಳನ್ನು ಬಲಪಡಿಸುವ ವರದಿಗಳು ಬಿಹಾರದಿಂದ ಬಂದಿವೆ ಎಂದು ಹೇಳಿಕೊಂಡರು. ಈ “ಪ್ರಜಾಪ್ರಭುತ್ವದ ಕೊಲೆ”ಯಲ್ಲಿ ಪ್ರಮುಖ ಅಪರಾಧಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರು, ಅವರು “ಸಂವಿಧಾನದ ವಿರುದ್ಧ ಅತಿದೊಡ್ಡ ದ್ರೋಹ” ಮಾಡುತ್ತಿದ್ದಾರೆ ಎಂದು ರಾಹುಲ್ ಗಂಭೀರ ಆರೋಪ ಮಾಡಿದ್ದಾರೆ. 

ಶುಕ್ರವಾರ ಬಿಹಾರದ ಬಂಕಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿರುವ ರಾಹುಲ್ ಗಾಂಧಿ ವರದಿಗಾರರ ಪ್ರಶ್ನೆಗೆ ಉತ್ತರಿಸಿ, “ಹರಿಯಾಣ ಚುನಾವಣೆಗಳು ಚುನಾವಣೆಗಳೇ ಅಲ್ಲ ಎಂದು ನಾನು ಹೇಳುತ್ತಿದ್ದೇನೆ. ಅಲ್ಲಿ ‘ಸಗಟು ಕಳ್ಳತನ’ ನಡೆಯಿತು. ನಾನು ಮಾಡಿದ ಆರೋಪಗಳಿಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ – ನಕಲಿ ಮತ, ನಕಲಿ ಛಾಯಾಚಿತ್ರ. ಬಿಜೆಪಿ ಇದನ್ನು ಸಮರ್ಥಿಸಿಕೊಳ್ಳುತ್ತಿದೆ ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ” ಎಂದು ಹೇಳಿದರು.

ಮಾಧ್ಯಮಗಳು ನಾನು ಪ್ರಸ್ತುತ ಪಡಿಸಿದ ಉದಾಹರಣೆಗಳನ್ನು ಎತ್ತಿಕೊಳ್ಳುತ್ತಿವೆ ಎಂದು ಅವರು ಹೇಳಿದರು, ಉದಾಹರಣೆಗೆ ಮತದಾರರ ಪಟ್ಟಿಯಲ್ಲಿ ಬ್ರೆಜಿಲ್ ಮಹಿಳೆಯ ಫೋಟೋವನ್ನು ಹಲವು ಬಾರಿ ಬಳಸಲಾಗಿದೆ. ಆದರೆ, “ಬ್ರೆಜಿಲ್ ಪ್ರಜೆಯ ಫೋಟೋದಲ್ಲಿ ಮತದಾನವನ್ನು ಹೇಗೆ ಮಾಡಲಾಯಿತು?” ಎಂದು ಅವರು ತಿಳಿದುಕೊಳ್ಳಲು ಪ್ರಯತ್ನಿಸಿದರು.  “ವಾಸ್ತವವೆಂದರೆ ನರೇಂದ್ರ ಮೋದಿ ಜಿ, ಅಮಿತ್ ಶಾ ಜಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ. ಸಂವಿಧಾನವು ‘ಒಬ್ಬ ವ್ಯಕ್ತಿ, ಒಂದು ಮತ’ ಎಂದು ಹೇಳುತ್ತದೆ. ಹರಿಯಾಣವು ಅಲ್ಲಿ ‘ಒಬ್ಬ ವ್ಯಕ್ತಿ, ಒಂದು ಮತ’ ಇರಲಿಲ್ಲ ಎಂದು ತೋರಿಸುತ್ತದೆ. ಅದು ‘ಒಬ್ಬ ವ್ಯಕ್ತಿ, ಬಹು ಮತಗಳು’… ಅವರು ಬಿಹಾರದಲ್ಲೂ ಅದನ್ನೇ ಮಾಡಲಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಇದು ಸಂಭವಿಸಿದೆ…,” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...