HomeUncategorized'ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ': ರಾಹುಲ್ ಗಾಂಧಿ

‘ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ’: ರಾಹುಲ್ ಗಾಂಧಿ

- Advertisement -
- Advertisement -

ದೆಹಲಿ: ಚುನಾವಣಾ ಅಕ್ರಮಗಳನ್ನು ಬಹಿರಂಗಪಡಿಸುವ ಪ್ರಕ್ರಿಯೆಯನ್ನು ಮುಂದುವರಿಸುವುದಾಗಿ ಮತ್ತು ನರೇಂದ್ರ ಮೋದಿ “ಚುನಾವ್ ಚೋರಿ” (ಚುನಾವಣಾ ಕಳ್ಳತನ) ಮೂಲಕ ಹೇಗೆ ಪ್ರಧಾನಿಯಾದರು ಎಂಬುದನ್ನು ದೇಶದ ಯುವಜನರಿಗೆ ತೋರಿಸುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮಲ್ಲಿ ಸಾಕಷ್ಟು ಸಾಕ್ಷಿಗಳಿವೆ, ನಾವು ಈ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ. ನರೇಂದ್ರ ಮೋದಿ ‘ಚುನಾವಣೆ ಕಳ್ಳತನ’ ಮೂಲಕ ಪ್ರಧಾನಿಯಾದರು ಮತ್ತು ಬಿಜೆಪಿ ‘ಚುನಾವಣೆ ಕಳ್ಳತನದಲ್ಲಿ ತೊಡಗಿದೆ ಎಂದು ನಾವು ಭಾರತದ ಜನರಲ್ ಝಡ್ ಮತ್ತು ಯುವಕರಿಗೆ ಸ್ಪಷ್ಟವಾಗಿ ತೋರಿಸುತ್ತೇವೆ” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. 

‘ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ನಡೆಸಿರುವ ಚುನಾವಣಾ ದುಷ್ಕೃತ್ಯಗಳನ್ನ ಸಮರ್ಥಿಸುತ್ತಿದೆ, ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ’. ‘ಹೈಡ್ರೋಜನ್ ಬಾಂಬ್’ ಬಗ್ಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬುಧವಾರ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯನ್ನೇ “ಕದ್ದಿದ್ದಾರೆ” ಎಂದು ಆರೋಪಿಸಿದ್ದರು. ಮತದಾರರ ಪಟ್ಟಿಯ ಡೇಟಾವನ್ನು ಉಲ್ಲೇಖಿಸಿ, 25 ಲಕ್ಷ ನಮೂದುಗಳು ನಕಲಿ ಮತ್ತು ಚುನಾವಣಾ ಆಯೋಗವು ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದ್ದರು.

ಗುರುವಾರ, ರಾಹುಲ್ “ಮತ ಚೋರಿಯ” ಪುರಾವೆಗಳನ್ನು ಬಲಪಡಿಸುವ ವರದಿಗಳು ಬಿಹಾರದಿಂದ ಬಂದಿವೆ ಎಂದು ಹೇಳಿಕೊಂಡರು. ಈ “ಪ್ರಜಾಪ್ರಭುತ್ವದ ಕೊಲೆ”ಯಲ್ಲಿ ಪ್ರಮುಖ ಅಪರಾಧಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರು, ಅವರು “ಸಂವಿಧಾನದ ವಿರುದ್ಧ ಅತಿದೊಡ್ಡ ದ್ರೋಹ” ಮಾಡುತ್ತಿದ್ದಾರೆ ಎಂದು ರಾಹುಲ್ ಗಂಭೀರ ಆರೋಪ ಮಾಡಿದ್ದಾರೆ. 

ಶುಕ್ರವಾರ ಬಿಹಾರದ ಬಂಕಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿರುವ ರಾಹುಲ್ ಗಾಂಧಿ ವರದಿಗಾರರ ಪ್ರಶ್ನೆಗೆ ಉತ್ತರಿಸಿ, “ಹರಿಯಾಣ ಚುನಾವಣೆಗಳು ಚುನಾವಣೆಗಳೇ ಅಲ್ಲ ಎಂದು ನಾನು ಹೇಳುತ್ತಿದ್ದೇನೆ. ಅಲ್ಲಿ ‘ಸಗಟು ಕಳ್ಳತನ’ ನಡೆಯಿತು. ನಾನು ಮಾಡಿದ ಆರೋಪಗಳಿಗೆ ಚುನಾವಣಾ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ – ನಕಲಿ ಮತ, ನಕಲಿ ಛಾಯಾಚಿತ್ರ. ಬಿಜೆಪಿ ಇದನ್ನು ಸಮರ್ಥಿಸಿಕೊಳ್ಳುತ್ತಿದೆ ಆದರೆ ನಾನು ಹೇಳಿದ್ದನ್ನು ನಿರಾಕರಿಸುತ್ತಿಲ್ಲ” ಎಂದು ಹೇಳಿದರು.

ಮಾಧ್ಯಮಗಳು ನಾನು ಪ್ರಸ್ತುತ ಪಡಿಸಿದ ಉದಾಹರಣೆಗಳನ್ನು ಎತ್ತಿಕೊಳ್ಳುತ್ತಿವೆ ಎಂದು ಅವರು ಹೇಳಿದರು, ಉದಾಹರಣೆಗೆ ಮತದಾರರ ಪಟ್ಟಿಯಲ್ಲಿ ಬ್ರೆಜಿಲ್ ಮಹಿಳೆಯ ಫೋಟೋವನ್ನು ಹಲವು ಬಾರಿ ಬಳಸಲಾಗಿದೆ. ಆದರೆ, “ಬ್ರೆಜಿಲ್ ಪ್ರಜೆಯ ಫೋಟೋದಲ್ಲಿ ಮತದಾನವನ್ನು ಹೇಗೆ ಮಾಡಲಾಯಿತು?” ಎಂದು ಅವರು ತಿಳಿದುಕೊಳ್ಳಲು ಪ್ರಯತ್ನಿಸಿದರು.  “ವಾಸ್ತವವೆಂದರೆ ನರೇಂದ್ರ ಮೋದಿ ಜಿ, ಅಮಿತ್ ಶಾ ಜಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ. ಸಂವಿಧಾನವು ‘ಒಬ್ಬ ವ್ಯಕ್ತಿ, ಒಂದು ಮತ’ ಎಂದು ಹೇಳುತ್ತದೆ. ಹರಿಯಾಣವು ಅಲ್ಲಿ ‘ಒಬ್ಬ ವ್ಯಕ್ತಿ, ಒಂದು ಮತ’ ಇರಲಿಲ್ಲ ಎಂದು ತೋರಿಸುತ್ತದೆ. ಅದು ‘ಒಬ್ಬ ವ್ಯಕ್ತಿ, ಬಹು ಮತಗಳು’… ಅವರು ಬಿಹಾರದಲ್ಲೂ ಅದನ್ನೇ ಮಾಡಲಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಇದು ಸಂಭವಿಸಿದೆ…,” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...