Homeಕರ್ನಾಟಕರೈತರ ಜೊತೆ ಇಲ್ಲೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ: ನಟ ಪ್ರಕಾಶ್ ರಾಜ್

ರೈತರ ಜೊತೆ ಇಲ್ಲೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ: ನಟ ಪ್ರಕಾಶ್ ರಾಜ್

ರೈತರ ಭೂ ಸ್ವಾಧೀನ ವಿರೋಧಿಸಿ 'ದೇವನಹಳ್ಳಿ ಚಲೋ'

- Advertisement -
- Advertisement -

ನಾನು ರೈತರ ಜೊತೆ ಇಲ್ಲಿಯೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ. ಜಾಮೀನು ಕೂಡ ತೆಗೆದುಕೊಳ್ಳುವುದಿಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು.

ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿಯಲ್ಲಿ ನಡೆಯುತ್ತಿರುವ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ಮುಖ್ಯಮಂತ್ರಿ ಅವರೇ, ಸಚಿವ ಎಂ.ಬಿ ಪಾಟೀಲರೇ ನೀವು ಏನು ಮಾಡುತ್ತಿದ್ದೀರಿ? ರೈತರು ಭೂಮಿ ಬಿಟ್ಟು ಕೊಡುವುದಿಲ್ಲ ಎಂದರೆ ಅರ್ಥವಾಗುತ್ತಿಲ್ವಾ? ಒಬ್ಬ ಮನುಷ್ಯನಿಗೆ ಒಂದು ಒಂದೆರಡು ಬಾರಿ ಹೇಳಬಹುದು. ನಾವು ನಿಮ್ಮ ವಿರುದ್ಧ ಮೂರು ವರ್ಷಗಳಿಂದ ಬಾಯಿ ಬಡ್ಕೊಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹದಿಮೂರು ಹಳ್ಳಿಗಳ ಹೆಣ್ಣು ಮಕ್ಕಳು ಅವರ ಜಮೀನಿನ ಮಣ್ಣನ್ನು ತಂದು ಗಿಡಕ್ಕೆ ಹಾಕಿ, ನಾವು ಮಣ್ಣನ್ನು ಮಾರುವುದಿಲ್ಲ ಎಂದು ಹೇಳುತ್ತಿದ್ದಾರೆ. ನಿಮಗೆ ಧಿಕ್ಕಾರ ಕೂಗುವ ಸಮಯ ದೂರವಿಲ್ಲ. ರೈತರ ಬಾಯಿಯಿಂದ ಧಿಕ್ಕಾರ ಕೂಗಿಸಿಕೊಳ್ಳುವ ಪರಿಸ್ಥಿತಿ ನಿಮಗೆ ಬೇಕಾ? ನಿಮಗೆ ಮನಸಾಕ್ಷಿ ಇಲ್ವಾ? ಅಹಿಂದ, ಜನಪರ, ರೈತರಪರ ಅನ್ನುತ್ತೀರಿ. ವಿರೋಧ ಪಕ್ಷದ ನಾಯಕರಾಗಿದ್ದಾಗ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೀರಿ. ಮಾತು ಕೊಟ್ಟಿದ್ದೀರಿ ತಾನೇ? ಈಗ ಮಾತಿಗೆ ನಿಲ್ಲುತ್ತೀರಾ? ಮಾತು ತಪ್ಪುತ್ತೀರಾ? ಎಂದು ಪ್ರಶ್ನಿಸಿದರು.

ಎಂ.ಬಿ ಪಾಟೀಲರೇ ಏನಂತ ತುರ್ತು ಪರಿಸ್ಥಿತಿ ಇತ್ತು ನಿಮಗೆ. ಅಷ್ಟೊಂದು ತರಾತುರಿಯಲ್ಲಿ ಸುದ್ದಿಗೋಷ್ಠಿ ಏಕೆ ಕರೆದ್ರಿ? ಒಂದು ದಿನ ಕಾಯಲು ಆಗಲಿಲ್ವಾ? ಮುಖ್ಯಮಂತ್ರಿಗಳು ಏನಾದರು ಬದಲಾಗುತ್ತಿದ್ದರಾ? ಒಳಗಡೆ ಏನಾದರೂ ಮಸಲತ್ತು ನಡೆಯುತ್ತಿದಿಯಾ? ಎಂದು ಪ್ರಕಾಶ್ ರಾಜ್ ಕೇಳಿದರು.

ಮನುಷ್ಯರಿಗೆ ಬೆಲೆ ಕೊಡಿ. ಭೂಮಿ ಬೆಲೆ ಹೆಚ್ಚಾದರೆ ನಿಮ್ಮ ಬೊಕ್ಕಸ ತುಂಬುತ್ತದೆ, ಸಮಾಜ ಬೆಳೆಯುವುದಿಲ್ಲ. ಈ ಹೋರಾಟ ನಿಲ್ಲುವುದಿಲ್ಲ. ಇದು ಅಂತಃಕರಣದ ಹೋರಾಟ. ಹಾಗಾಗಿ, ನೀವು ಬುದ್ದಿವಂತರ ತರ ಉತ್ತರ ಕೊಡಬೇಡಿ. ನಾವು ನಿಮಗೆ ಪ್ರಶ್ನೆಯೇ ಕೇಳುತ್ತಿಲ್ಲ. ನಮ್ಮ ನೋವನ್ನು ಹೇಳುತ್ತಿದ್ದೇವೆ. ನಮ್ಮನ್ನು ಬದುಕಲು ಬಿಡಿ ಎಂದರು.

ನಾವು ಮಣ್ಣನ್ನು ಮಾರುವುದಿಲ್ಲ. ಏನು ಮಾಡುತ್ತೀರಾ ಮಾಡಿ. ಕಾರ್ಖಾನೆ ಎಷ್ಟು ಜನರ ಬದುಕನ್ನು ಕಿತ್ತುಕೊಳ್ಳುತ್ತದೆ ಎನ್ನುವುದು ನಿಮಗೆ ಗೊತ್ತಿಲ್ಲವೇ? 6ಸಾವಿರ ಎಕರೆ ಭೂ ಸೆಟಲ್‌ಮೆಂಟ್‌ ಮಾಡಿದಿರಿ. ರೈತರು ಈಗ ಬೀದಿಗೆ ಬಂದಿದಾರೆ. ಕಾರ್ಖಾನೆಗಳನ್ನು ಮಾಡಿ ನಮ್ಮ ರೈತರನ್ನು ಏನು ಮಾಡುತ್ತೀರಾ? ಅವರನ್ನು ಕಾರ್ಖಾನೆಯ ಸೆಕ್ಯೂರಿಟಿ ಗಾರ್ಡ್‌ಗಳಾಗಿ ಮಾಡುತ್ತೀರಾ? ನಿಮಗೆ ಮರ್ಯಾದೆ ಇದೆಯಾ? ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರೇ ಇನ್ನೊಂದು ಹೋರಾಟ ಆಗುವುದು, ನಿಮ್ಮನ್ನು ಇಳಿಸುವುದಕ್ಕೆ ಕಾರಣ ಆಗುವುದು ಬೇಡ. ಮನಸಾಕ್ಷಿಯಿಂದ ಜನರ ನೋವನ್ನು ಅರ್ಥ ಮಾಡಿಕೊಳ್ಳಿ. ರೈತರನ್ನು ಅರ್ಥ ಮಾಡಿಕೊಳ್ಳಿ. ನಾವು ಭೂಮಿ ಮಾರುವುದಿಲ್ಲ ಎಂದರೆ ಮಾರುವುದಿಲ್ಲ. ನಮ್ಮನ್ನು ಬದುಕಲು ಬಿಡಿ ಎಂದು ಮನವಿ ಮಾಡಿದರು.

LIVE UPDATES ‘ದೇವನಹಳ್ಳಿ ಚಲೋ’ | ಸರಿಯಾಗಿ ಕೇಳಿಸಿಕೊಳ್ಳಿ, ನೀವು ಹತ್ತಲ್ಲ ನೂರು ಕೋಟಿ ರೂಪಾಯಿಗಳು ಕೊಟ್ಟರೂ ನಾವು ಒಂದು ಇಂಚು ಭೂಮಿ ಕೊಡಲ್ಲ: ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...