Homeಮುಖಪುಟಕಾಂಗ್ರೆಸ್‌ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತೆ: ಎಂಟಿಬಿ ನಾಗರಾಜ್ ಬೇಸರ

ಕಾಂಗ್ರೆಸ್‌ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತೆ: ಎಂಟಿಬಿ ನಾಗರಾಜ್ ಬೇಸರ

ನನ್ನ ಸೋಲಿಗೆ ಮಾಜಿ ಸಚಿವ ಡಾ. ಕೆ ಸುಧಾಕರ್‌ ನೇರ ಕಾರಣ. ಆತನೂ ಸೋತ, ನಮ್ಮನ್ನೂ ಸೋಲಿಸಿದ ಎಂದು ಕಿಡಿ ಕಾರಿದ್ದಾರೆ.

- Advertisement -
- Advertisement -

ಕಾಂಗ್ರೆಸ್‌ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತಿದ್ದೇನೆ ಎಂದು ಬಿಜೆಪಿಯ ಮಾಜಿ ಸಚಿವ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸೋತ ಬಿಜೆಪಿ ಅಭ್ಯರ್ಥಿಗಳ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, “ನನ್ನ ಸೋಲಿಗೆ ತಮ್ಮದೇ ಪಕ್ಷದ ಮಾಜಿ ಸಚಿವ ಡಾ. ಕೆ ಸುಧಾಕರ್‌ ನೇರ ಕಾರಣ. ಡಾ. ಕೆ ಸುಧಾಕರ್​ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ಉಸ್ತುವಾರಿ ಸ್ಥಾನವನ್ನು ಅವರು​ ಸಮರ್ಥವಾಗಿ ನಿಭಾಯಿಸಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ” ಎಂದು ಹತಾಶೆ ವ್ಯಕ್ತಪಡಿಸಿದರು.

ನನ್ನ ಹಾಗೂ ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಡಾ. ಕೆ ಸುಧಾಕರ್ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಸುಧಾಕರ್​ನಿಂದಾಗಿಯೇ ನಾನು ಸೋತಿದ್ದು” ಎಂದು ಅವರು ದೂರಿದ್ದಾರೆ.

ಕಾಂಗ್ರೆಸ್​ನಲ್ಲಿ ಇದ್ದಾಗ ಮೂರು ಬಾರಿ ಗೆದ್ದಿದ್ದೆ. ಆದರೆ, ಬಿಜೆಪಿಗೆ ಬಂದು ಎರಡು ಬಾರಿ ಸೋತಿದ್ದೇನೆ. ಬಿ.ಎಸ್ ಯಡಿಯೂರಪ್ಪ ಅವರ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ ಎರಡು ಬಾರಿ ಸ್ಪರ್ಧಿಸಿ ಎರಡು ಬಾರಿಯೂ ಸೋತಿದ್ದೇನೆ ಎಂದು ಅವರು ಹೇಳಿದರು.

ನಾನು ಹಣ, ಅಧಿಕಾರದ ಆಸೆಗಾಗಿ ಬಿಜೆಪಿಗೆ ಬಂದವನಲ್ಲ. ಆದರೆ ನಮ್ಮ ಪಕ್ಷ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಸರಿಯಾಗಿ ಕೌಂಟರ್​ ಅಟ್ಯಾಕ್ ಮಾಡಲಿಲ್ಲ. ಬದಲಾಗಿ ನಾವು ಕೇವಲ ಸಿದ್ದರಾಮಯ್ಯಗೆ ಮಾತ್ರ ಬೈಯುತ್ತಾ ಕುಳಿತೆವು. ಅದೇ ರೀತಿ ಚುನಾವಣೆಯ ವೇಳೆ ನಮ್ಮ ಸರ್ಕಾರ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು, ಅದೇ ಸಂದರ್ಭಕ್ಕೆ ಕಾಂಗ್ರೆಸ್​ನ 10 ಕೆಜಿ ಅಕ್ಕಿ ಗ್ಯಾರಂಟಿಯೂ ನಮ್ಮ ಸೋಲಿಗೆ ಕಾರಣವಾಯ್ತು ಎಂದು ಆತ್ಮಾವಲೋಕನ ಮಾಡಿಕೊಂಡಿದ್ದಾರೆ.

ಎಂಟಿಬಿ ನಾಗರಾಜ್‌ರವರು 2004ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆದರೆ 2008ರಲ್ಲಿ ಸೋಲು ಅನಭವಿಸಿದ್ದರು. ತದನಂತರ 2013 ಮತ್ತು 2018ರಲ್ಲಿ ಸತತ ಗೆಲುವು ದಾಖಲಿಸಿದ್ದರು. ಆದರೆ 2019ರಲ್ಲಿ ಮಂತ್ರಿಯಾಗಿದ್ದರೂ ಸಹ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಯ ಆಪರೇಷನ್ ಕಮಲದ ಬಲೆಗೆ ಬಿದ್ದರು. ತದನಂತರ ನಡೆದ ಉಪಚುನಾವಣೆಯಲ್ಲಿ ಮತ್ತು ಇತ್ತೀಚಿಗಿನ ವಿಧಾನಸಭಾ ಚುನಾವಣೆಯಲ್ಲಿ ಶರತ್ ಬಚ್ಚೇಗೌಡರ ಎದುರು ಸೋಲು ಕಂಡಿದ್ದಾರೆ.

ಮಾಜಿ ಸಚಿವ ವಿ ಸೋಮಣ್ಣ ಕೂಡ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ. “ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ, ಆದರೆ..: ವಿ.ಸೋಮಣ್ಣ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...