Homeಮುಖಪುಟಕಾಂಗ್ರೆಸ್‌ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತೆ: ಎಂಟಿಬಿ ನಾಗರಾಜ್ ಬೇಸರ

ಕಾಂಗ್ರೆಸ್‌ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತೆ: ಎಂಟಿಬಿ ನಾಗರಾಜ್ ಬೇಸರ

ನನ್ನ ಸೋಲಿಗೆ ಮಾಜಿ ಸಚಿವ ಡಾ. ಕೆ ಸುಧಾಕರ್‌ ನೇರ ಕಾರಣ. ಆತನೂ ಸೋತ, ನಮ್ಮನ್ನೂ ಸೋಲಿಸಿದ ಎಂದು ಕಿಡಿ ಕಾರಿದ್ದಾರೆ.

- Advertisement -
- Advertisement -

ಕಾಂಗ್ರೆಸ್‌ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತಿದ್ದೇನೆ ಎಂದು ಬಿಜೆಪಿಯ ಮಾಜಿ ಸಚಿವ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸೋತ ಬಿಜೆಪಿ ಅಭ್ಯರ್ಥಿಗಳ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, “ನನ್ನ ಸೋಲಿಗೆ ತಮ್ಮದೇ ಪಕ್ಷದ ಮಾಜಿ ಸಚಿವ ಡಾ. ಕೆ ಸುಧಾಕರ್‌ ನೇರ ಕಾರಣ. ಡಾ. ಕೆ ಸುಧಾಕರ್​ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ಉಸ್ತುವಾರಿ ಸ್ಥಾನವನ್ನು ಅವರು​ ಸಮರ್ಥವಾಗಿ ನಿಭಾಯಿಸಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ” ಎಂದು ಹತಾಶೆ ವ್ಯಕ್ತಪಡಿಸಿದರು.

ನನ್ನ ಹಾಗೂ ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಡಾ. ಕೆ ಸುಧಾಕರ್ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಸುಧಾಕರ್​ನಿಂದಾಗಿಯೇ ನಾನು ಸೋತಿದ್ದು” ಎಂದು ಅವರು ದೂರಿದ್ದಾರೆ.

ಕಾಂಗ್ರೆಸ್​ನಲ್ಲಿ ಇದ್ದಾಗ ಮೂರು ಬಾರಿ ಗೆದ್ದಿದ್ದೆ. ಆದರೆ, ಬಿಜೆಪಿಗೆ ಬಂದು ಎರಡು ಬಾರಿ ಸೋತಿದ್ದೇನೆ. ಬಿ.ಎಸ್ ಯಡಿಯೂರಪ್ಪ ಅವರ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ ಎರಡು ಬಾರಿ ಸ್ಪರ್ಧಿಸಿ ಎರಡು ಬಾರಿಯೂ ಸೋತಿದ್ದೇನೆ ಎಂದು ಅವರು ಹೇಳಿದರು.

ನಾನು ಹಣ, ಅಧಿಕಾರದ ಆಸೆಗಾಗಿ ಬಿಜೆಪಿಗೆ ಬಂದವನಲ್ಲ. ಆದರೆ ನಮ್ಮ ಪಕ್ಷ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಸರಿಯಾಗಿ ಕೌಂಟರ್​ ಅಟ್ಯಾಕ್ ಮಾಡಲಿಲ್ಲ. ಬದಲಾಗಿ ನಾವು ಕೇವಲ ಸಿದ್ದರಾಮಯ್ಯಗೆ ಮಾತ್ರ ಬೈಯುತ್ತಾ ಕುಳಿತೆವು. ಅದೇ ರೀತಿ ಚುನಾವಣೆಯ ವೇಳೆ ನಮ್ಮ ಸರ್ಕಾರ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು, ಅದೇ ಸಂದರ್ಭಕ್ಕೆ ಕಾಂಗ್ರೆಸ್​ನ 10 ಕೆಜಿ ಅಕ್ಕಿ ಗ್ಯಾರಂಟಿಯೂ ನಮ್ಮ ಸೋಲಿಗೆ ಕಾರಣವಾಯ್ತು ಎಂದು ಆತ್ಮಾವಲೋಕನ ಮಾಡಿಕೊಂಡಿದ್ದಾರೆ.

ಎಂಟಿಬಿ ನಾಗರಾಜ್‌ರವರು 2004ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆದರೆ 2008ರಲ್ಲಿ ಸೋಲು ಅನಭವಿಸಿದ್ದರು. ತದನಂತರ 2013 ಮತ್ತು 2018ರಲ್ಲಿ ಸತತ ಗೆಲುವು ದಾಖಲಿಸಿದ್ದರು. ಆದರೆ 2019ರಲ್ಲಿ ಮಂತ್ರಿಯಾಗಿದ್ದರೂ ಸಹ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಯ ಆಪರೇಷನ್ ಕಮಲದ ಬಲೆಗೆ ಬಿದ್ದರು. ತದನಂತರ ನಡೆದ ಉಪಚುನಾವಣೆಯಲ್ಲಿ ಮತ್ತು ಇತ್ತೀಚಿಗಿನ ವಿಧಾನಸಭಾ ಚುನಾವಣೆಯಲ್ಲಿ ಶರತ್ ಬಚ್ಚೇಗೌಡರ ಎದುರು ಸೋಲು ಕಂಡಿದ್ದಾರೆ.

ಮಾಜಿ ಸಚಿವ ವಿ ಸೋಮಣ್ಣ ಕೂಡ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ. “ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ, ಆದರೆ..: ವಿ.ಸೋಮಣ್ಣ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...