Homeಮುಖಪುಟಕಾಂಗ್ರೆಸ್‌ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತೆ: ಎಂಟಿಬಿ ನಾಗರಾಜ್ ಬೇಸರ

ಕಾಂಗ್ರೆಸ್‌ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತೆ: ಎಂಟಿಬಿ ನಾಗರಾಜ್ ಬೇಸರ

ನನ್ನ ಸೋಲಿಗೆ ಮಾಜಿ ಸಚಿವ ಡಾ. ಕೆ ಸುಧಾಕರ್‌ ನೇರ ಕಾರಣ. ಆತನೂ ಸೋತ, ನಮ್ಮನ್ನೂ ಸೋಲಿಸಿದ ಎಂದು ಕಿಡಿ ಕಾರಿದ್ದಾರೆ.

- Advertisement -
- Advertisement -

ಕಾಂಗ್ರೆಸ್‌ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿ ಸೇರಿ 2 ಬಾರಿಯೂ ಸೋತಿದ್ದೇನೆ ಎಂದು ಬಿಜೆಪಿಯ ಮಾಜಿ ಸಚಿವ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸೋತ ಬಿಜೆಪಿ ಅಭ್ಯರ್ಥಿಗಳ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, “ನನ್ನ ಸೋಲಿಗೆ ತಮ್ಮದೇ ಪಕ್ಷದ ಮಾಜಿ ಸಚಿವ ಡಾ. ಕೆ ಸುಧಾಕರ್‌ ನೇರ ಕಾರಣ. ಡಾ. ಕೆ ಸುಧಾಕರ್​ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ಉಸ್ತುವಾರಿ ಸ್ಥಾನವನ್ನು ಅವರು​ ಸಮರ್ಥವಾಗಿ ನಿಭಾಯಿಸಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ” ಎಂದು ಹತಾಶೆ ವ್ಯಕ್ತಪಡಿಸಿದರು.

ನನ್ನ ಹಾಗೂ ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಡಾ. ಕೆ ಸುಧಾಕರ್ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಸುಧಾಕರ್​ನಿಂದಾಗಿಯೇ ನಾನು ಸೋತಿದ್ದು” ಎಂದು ಅವರು ದೂರಿದ್ದಾರೆ.

ಕಾಂಗ್ರೆಸ್​ನಲ್ಲಿ ಇದ್ದಾಗ ಮೂರು ಬಾರಿ ಗೆದ್ದಿದ್ದೆ. ಆದರೆ, ಬಿಜೆಪಿಗೆ ಬಂದು ಎರಡು ಬಾರಿ ಸೋತಿದ್ದೇನೆ. ಬಿ.ಎಸ್ ಯಡಿಯೂರಪ್ಪ ಅವರ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ ಎರಡು ಬಾರಿ ಸ್ಪರ್ಧಿಸಿ ಎರಡು ಬಾರಿಯೂ ಸೋತಿದ್ದೇನೆ ಎಂದು ಅವರು ಹೇಳಿದರು.

ನಾನು ಹಣ, ಅಧಿಕಾರದ ಆಸೆಗಾಗಿ ಬಿಜೆಪಿಗೆ ಬಂದವನಲ್ಲ. ಆದರೆ ನಮ್ಮ ಪಕ್ಷ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಸರಿಯಾಗಿ ಕೌಂಟರ್​ ಅಟ್ಯಾಕ್ ಮಾಡಲಿಲ್ಲ. ಬದಲಾಗಿ ನಾವು ಕೇವಲ ಸಿದ್ದರಾಮಯ್ಯಗೆ ಮಾತ್ರ ಬೈಯುತ್ತಾ ಕುಳಿತೆವು. ಅದೇ ರೀತಿ ಚುನಾವಣೆಯ ವೇಳೆ ನಮ್ಮ ಸರ್ಕಾರ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು, ಅದೇ ಸಂದರ್ಭಕ್ಕೆ ಕಾಂಗ್ರೆಸ್​ನ 10 ಕೆಜಿ ಅಕ್ಕಿ ಗ್ಯಾರಂಟಿಯೂ ನಮ್ಮ ಸೋಲಿಗೆ ಕಾರಣವಾಯ್ತು ಎಂದು ಆತ್ಮಾವಲೋಕನ ಮಾಡಿಕೊಂಡಿದ್ದಾರೆ.

ಎಂಟಿಬಿ ನಾಗರಾಜ್‌ರವರು 2004ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆದರೆ 2008ರಲ್ಲಿ ಸೋಲು ಅನಭವಿಸಿದ್ದರು. ತದನಂತರ 2013 ಮತ್ತು 2018ರಲ್ಲಿ ಸತತ ಗೆಲುವು ದಾಖಲಿಸಿದ್ದರು. ಆದರೆ 2019ರಲ್ಲಿ ಮಂತ್ರಿಯಾಗಿದ್ದರೂ ಸಹ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಯ ಆಪರೇಷನ್ ಕಮಲದ ಬಲೆಗೆ ಬಿದ್ದರು. ತದನಂತರ ನಡೆದ ಉಪಚುನಾವಣೆಯಲ್ಲಿ ಮತ್ತು ಇತ್ತೀಚಿಗಿನ ವಿಧಾನಸಭಾ ಚುನಾವಣೆಯಲ್ಲಿ ಶರತ್ ಬಚ್ಚೇಗೌಡರ ಎದುರು ಸೋಲು ಕಂಡಿದ್ದಾರೆ.

ಮಾಜಿ ಸಚಿವ ವಿ ಸೋಮಣ್ಣ ಕೂಡ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ. “ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ, ಆದರೆ..: ವಿ.ಸೋಮಣ್ಣ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...