Homeಮುಖಪುಟ14 ಗಂಟೆ ಕೆಲಸ ನಿರ್ವಹಿಸುತ್ತಿದ್ದೆ: ಪುನರುಚ್ಚರಿಸಿದ ನಾರಾಯಣ ಮೂರ್ತಿ

14 ಗಂಟೆ ಕೆಲಸ ನಿರ್ವಹಿಸುತ್ತಿದ್ದೆ: ಪುನರುಚ್ಚರಿಸಿದ ನಾರಾಯಣ ಮೂರ್ತಿ

- Advertisement -
- Advertisement -

ವಾರದಲ್ಲಿ 5 ದಿನಗಳ ಕೆಲಸ ಕುರಿತು ಇನ್ಫೊಸಿಸ್‌ ನ ಸಹ ಸ್ಥಾಪಕ ನಾರಾಯಣ ಮೂರ್ತಿ ತಮ್ಮ ನಿರಾಶೆಯನ್ನು ಮತ್ತೊಮ್ಮೆ ಪುರುಚ್ಚರಿಸಿದ್ದಾರೆ.

ಸಿಎನ್‌ಬಿಸಿ ಗ್ಲೋಬಲ್‌ ಲೀಡರ್‌ಶಿಪ್‌ ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಅವರು, ಈ ರೀತಿಯ ಪರಿಕಲ್ಪನೆಯಲ್ಲಿ ನನಗೆ ನಂಬಿಕೆಯಿಲ್ಲ. ನನಗೆ ನಿರಾಶೆಯಾಗಿದೆ. ಈ ಅಭಿಪ್ರಾಯಕ್ಕೆ ದೃಢವಾಗಿ ನಿಲ್ಲುತ್ತೇನೆ ಮತ್ತು ಇದನ್ನು ಗಂಭೀರವಾಗಿ ತಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇಂತಹ ಕೆಲಸದ ಪರಿಕಲ್ಪನೆಯ ಕುರಿತು ಚಿಂತಿಸುವ ಬದಲು ಭಾರತದಂತಹ ಬಡ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಸವಾಲುಗಳು ಸಾಕಷ್ಟಿದ್ದು, ಇವುಗಳ ಮೇಲೆ ಬೆಳಕು ಚೆಲ್ಲಬೇಕಿದೆ. ಭಾರತದ ಪ್ರಧಾನಿ ವಾರವೊಂದಕ್ಕೆ 100 ಗಂಟೆ ಕೆಲಸ ನಿರ್ವಹಿಸುತ್ತಾರೆ. ನಮ್ಮ ಕೆಲಸ ನಮ್ಮ ಸುತ್ತಮುತ್ತ ನಡೆಯುತ್ತಿರುವ
ಇಂತಹ ವಿಷಯಗಳಿಗೆ ಪ್ರಶಂಸೆ ಪ್ರದರ್ಶಿಸುವುದೊಂದೆ ಏಕೈಕ ದಾರಿಯಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಕಠಿಣ ಶ್ರಮ ಪಡಬೇಕಿದೆ. ಇದನ್ನು ಹೊರತುಪಡಿಸಿ ಪರ್ಯಾಯವಾಗಿ ಬೇರೊಂದು ಮಾರ್ಗವಿಲ್ಲ. ನೀವು ಜೀವನದಲ್ಲಿ ಗೆಲ್ಲಬೇಕಾದರೆ ತುಂಬಾ ಶ್ರಮಹಾಕಬೇಕಿದೆ. ನಾನು ನನ್ನ ಜೀವನದಲ್ಲಿ ಕಠಿಣ ಶ್ರಮಪಟ್ಟದ್ದಕ್ಕಾಗಿ ನನಗೆ ಹೆಮ್ಮೆಯಿದೆ. ನನ್ನ ಈ ಅಭಿಪ್ರಾಯವನ್ನು ನಾನೆಂದೂ ಬದಲಾಯಿಸಲು ಸಾಧ್ಯವಿಲ್ಲ. ಕ್ಷಮಿಸಿ. ಈ ನನ್ನ ಅನಿಸಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.

ಭಾರತದ ಅಭಿವೃದ್ಧಿಯ ಮಂತ್ರವು ಯಾವುದೇ ಸಡಿಲತೆಗಿಂತ ತ್ಯಾಗ, ಪರಿಶ್ರಮ ಮತ್ತು ದೀರ್ಘಾವಧಿಯ
ಕೆಲಸ ನಿರ್ವಹಿಸುವುದರಲ್ಲಿದೆ. ನಮ್ಮ ದೇಶವು ಜಾಗತೀಕ ಸ್ಪರ್ಧೆಯೊಂದಿಗೆ ಸಂಘರ್ಷವನ್ನು ನಡೆಸಬೇಕಾಗಿದೆ. ನಾನು ನನ್ನ ವೃತ್ತಿಯ ಆರಂಭದ ಗಳಿಗೆಯಲ್ಲಿ ದಿನವೊಂದಕ್ಕೆ 14 ಗಂಟೆಗಳ ಕೆಲಸ ನಿರ್ವಹಿಸುತ್ತಿದ್ದೆ. ಹಾಗೆಯೇ ವಾರದಲ್ಲಿ ಆರೂವರೆ ದಿನಗಳನ್ನು ಅರ್ಪಿಸಿಕೊಂಡಿದ್ದೆ. ನನ್ನ ವೃತ್ತಿಪರ ಬೆಳವಣಿಗೆಯಲ್ಲಿ ಈ ಬದ್ದತೆಯನ್ನು ತಗೆದುಕೊಂಡಿದ್ದಕ್ಕಾಗಿ ಹೆಮ್ಮೆಪಡುತ್ತೇನೆ. ಪ್ರತಿ ದಿನವು ನನ್ನ ಕಚೇರಿಗೆ ಬೆಳಗ್ಗೆ 6:30ಕ್ಕೆ ಆಗಮಿಸಿ, ರಾತ್ರಿ 8:30ಕ್ಕೆ
ನಿರ್ಗಮಿಸುತ್ತಿದ್ದೆ ಎಂದು ತಮ್ಮ ಈ ಹಿಂದಿನ ಕೆಲಸದ ದಿನಚರಿಯನ್ನು ನಾರಾಯಣ ಮೂರ್ತಿಯವರು ಮೆಲುಕು ಹಾಕಿದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...