Homeಮುಖಪುಟ14 ಗಂಟೆ ಕೆಲಸ ನಿರ್ವಹಿಸುತ್ತಿದ್ದೆ: ಪುನರುಚ್ಚರಿಸಿದ ನಾರಾಯಣ ಮೂರ್ತಿ

14 ಗಂಟೆ ಕೆಲಸ ನಿರ್ವಹಿಸುತ್ತಿದ್ದೆ: ಪುನರುಚ್ಚರಿಸಿದ ನಾರಾಯಣ ಮೂರ್ತಿ

- Advertisement -
- Advertisement -

ವಾರದಲ್ಲಿ 5 ದಿನಗಳ ಕೆಲಸ ಕುರಿತು ಇನ್ಫೊಸಿಸ್‌ ನ ಸಹ ಸ್ಥಾಪಕ ನಾರಾಯಣ ಮೂರ್ತಿ ತಮ್ಮ ನಿರಾಶೆಯನ್ನು ಮತ್ತೊಮ್ಮೆ ಪುರುಚ್ಚರಿಸಿದ್ದಾರೆ.

ಸಿಎನ್‌ಬಿಸಿ ಗ್ಲೋಬಲ್‌ ಲೀಡರ್‌ಶಿಪ್‌ ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಅವರು, ಈ ರೀತಿಯ ಪರಿಕಲ್ಪನೆಯಲ್ಲಿ ನನಗೆ ನಂಬಿಕೆಯಿಲ್ಲ. ನನಗೆ ನಿರಾಶೆಯಾಗಿದೆ. ಈ ಅಭಿಪ್ರಾಯಕ್ಕೆ ದೃಢವಾಗಿ ನಿಲ್ಲುತ್ತೇನೆ ಮತ್ತು ಇದನ್ನು ಗಂಭೀರವಾಗಿ ತಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇಂತಹ ಕೆಲಸದ ಪರಿಕಲ್ಪನೆಯ ಕುರಿತು ಚಿಂತಿಸುವ ಬದಲು ಭಾರತದಂತಹ ಬಡ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಸವಾಲುಗಳು ಸಾಕಷ್ಟಿದ್ದು, ಇವುಗಳ ಮೇಲೆ ಬೆಳಕು ಚೆಲ್ಲಬೇಕಿದೆ. ಭಾರತದ ಪ್ರಧಾನಿ ವಾರವೊಂದಕ್ಕೆ 100 ಗಂಟೆ ಕೆಲಸ ನಿರ್ವಹಿಸುತ್ತಾರೆ. ನಮ್ಮ ಕೆಲಸ ನಮ್ಮ ಸುತ್ತಮುತ್ತ ನಡೆಯುತ್ತಿರುವ
ಇಂತಹ ವಿಷಯಗಳಿಗೆ ಪ್ರಶಂಸೆ ಪ್ರದರ್ಶಿಸುವುದೊಂದೆ ಏಕೈಕ ದಾರಿಯಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಕಠಿಣ ಶ್ರಮ ಪಡಬೇಕಿದೆ. ಇದನ್ನು ಹೊರತುಪಡಿಸಿ ಪರ್ಯಾಯವಾಗಿ ಬೇರೊಂದು ಮಾರ್ಗವಿಲ್ಲ. ನೀವು ಜೀವನದಲ್ಲಿ ಗೆಲ್ಲಬೇಕಾದರೆ ತುಂಬಾ ಶ್ರಮಹಾಕಬೇಕಿದೆ. ನಾನು ನನ್ನ ಜೀವನದಲ್ಲಿ ಕಠಿಣ ಶ್ರಮಪಟ್ಟದ್ದಕ್ಕಾಗಿ ನನಗೆ ಹೆಮ್ಮೆಯಿದೆ. ನನ್ನ ಈ ಅಭಿಪ್ರಾಯವನ್ನು ನಾನೆಂದೂ ಬದಲಾಯಿಸಲು ಸಾಧ್ಯವಿಲ್ಲ. ಕ್ಷಮಿಸಿ. ಈ ನನ್ನ ಅನಿಸಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.

ಭಾರತದ ಅಭಿವೃದ್ಧಿಯ ಮಂತ್ರವು ಯಾವುದೇ ಸಡಿಲತೆಗಿಂತ ತ್ಯಾಗ, ಪರಿಶ್ರಮ ಮತ್ತು ದೀರ್ಘಾವಧಿಯ
ಕೆಲಸ ನಿರ್ವಹಿಸುವುದರಲ್ಲಿದೆ. ನಮ್ಮ ದೇಶವು ಜಾಗತೀಕ ಸ್ಪರ್ಧೆಯೊಂದಿಗೆ ಸಂಘರ್ಷವನ್ನು ನಡೆಸಬೇಕಾಗಿದೆ. ನಾನು ನನ್ನ ವೃತ್ತಿಯ ಆರಂಭದ ಗಳಿಗೆಯಲ್ಲಿ ದಿನವೊಂದಕ್ಕೆ 14 ಗಂಟೆಗಳ ಕೆಲಸ ನಿರ್ವಹಿಸುತ್ತಿದ್ದೆ. ಹಾಗೆಯೇ ವಾರದಲ್ಲಿ ಆರೂವರೆ ದಿನಗಳನ್ನು ಅರ್ಪಿಸಿಕೊಂಡಿದ್ದೆ. ನನ್ನ ವೃತ್ತಿಪರ ಬೆಳವಣಿಗೆಯಲ್ಲಿ ಈ ಬದ್ದತೆಯನ್ನು ತಗೆದುಕೊಂಡಿದ್ದಕ್ಕಾಗಿ ಹೆಮ್ಮೆಪಡುತ್ತೇನೆ. ಪ್ರತಿ ದಿನವು ನನ್ನ ಕಚೇರಿಗೆ ಬೆಳಗ್ಗೆ 6:30ಕ್ಕೆ ಆಗಮಿಸಿ, ರಾತ್ರಿ 8:30ಕ್ಕೆ
ನಿರ್ಗಮಿಸುತ್ತಿದ್ದೆ ಎಂದು ತಮ್ಮ ಈ ಹಿಂದಿನ ಕೆಲಸದ ದಿನಚರಿಯನ್ನು ನಾರಾಯಣ ಮೂರ್ತಿಯವರು ಮೆಲುಕು ಹಾಕಿದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...