Homeಮುಖಪುಟ14 ಗಂಟೆ ಕೆಲಸ ನಿರ್ವಹಿಸುತ್ತಿದ್ದೆ: ಪುನರುಚ್ಚರಿಸಿದ ನಾರಾಯಣ ಮೂರ್ತಿ

14 ಗಂಟೆ ಕೆಲಸ ನಿರ್ವಹಿಸುತ್ತಿದ್ದೆ: ಪುನರುಚ್ಚರಿಸಿದ ನಾರಾಯಣ ಮೂರ್ತಿ

- Advertisement -
- Advertisement -

ವಾರದಲ್ಲಿ 5 ದಿನಗಳ ಕೆಲಸ ಕುರಿತು ಇನ್ಫೊಸಿಸ್‌ ನ ಸಹ ಸ್ಥಾಪಕ ನಾರಾಯಣ ಮೂರ್ತಿ ತಮ್ಮ ನಿರಾಶೆಯನ್ನು ಮತ್ತೊಮ್ಮೆ ಪುರುಚ್ಚರಿಸಿದ್ದಾರೆ.

ಸಿಎನ್‌ಬಿಸಿ ಗ್ಲೋಬಲ್‌ ಲೀಡರ್‌ಶಿಪ್‌ ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಅವರು, ಈ ರೀತಿಯ ಪರಿಕಲ್ಪನೆಯಲ್ಲಿ ನನಗೆ ನಂಬಿಕೆಯಿಲ್ಲ. ನನಗೆ ನಿರಾಶೆಯಾಗಿದೆ. ಈ ಅಭಿಪ್ರಾಯಕ್ಕೆ ದೃಢವಾಗಿ ನಿಲ್ಲುತ್ತೇನೆ ಮತ್ತು ಇದನ್ನು ಗಂಭೀರವಾಗಿ ತಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇಂತಹ ಕೆಲಸದ ಪರಿಕಲ್ಪನೆಯ ಕುರಿತು ಚಿಂತಿಸುವ ಬದಲು ಭಾರತದಂತಹ ಬಡ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಸವಾಲುಗಳು ಸಾಕಷ್ಟಿದ್ದು, ಇವುಗಳ ಮೇಲೆ ಬೆಳಕು ಚೆಲ್ಲಬೇಕಿದೆ. ಭಾರತದ ಪ್ರಧಾನಿ ವಾರವೊಂದಕ್ಕೆ 100 ಗಂಟೆ ಕೆಲಸ ನಿರ್ವಹಿಸುತ್ತಾರೆ. ನಮ್ಮ ಕೆಲಸ ನಮ್ಮ ಸುತ್ತಮುತ್ತ ನಡೆಯುತ್ತಿರುವ
ಇಂತಹ ವಿಷಯಗಳಿಗೆ ಪ್ರಶಂಸೆ ಪ್ರದರ್ಶಿಸುವುದೊಂದೆ ಏಕೈಕ ದಾರಿಯಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಕಠಿಣ ಶ್ರಮ ಪಡಬೇಕಿದೆ. ಇದನ್ನು ಹೊರತುಪಡಿಸಿ ಪರ್ಯಾಯವಾಗಿ ಬೇರೊಂದು ಮಾರ್ಗವಿಲ್ಲ. ನೀವು ಜೀವನದಲ್ಲಿ ಗೆಲ್ಲಬೇಕಾದರೆ ತುಂಬಾ ಶ್ರಮಹಾಕಬೇಕಿದೆ. ನಾನು ನನ್ನ ಜೀವನದಲ್ಲಿ ಕಠಿಣ ಶ್ರಮಪಟ್ಟದ್ದಕ್ಕಾಗಿ ನನಗೆ ಹೆಮ್ಮೆಯಿದೆ. ನನ್ನ ಈ ಅಭಿಪ್ರಾಯವನ್ನು ನಾನೆಂದೂ ಬದಲಾಯಿಸಲು ಸಾಧ್ಯವಿಲ್ಲ. ಕ್ಷಮಿಸಿ. ಈ ನನ್ನ ಅನಿಸಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.

ಭಾರತದ ಅಭಿವೃದ್ಧಿಯ ಮಂತ್ರವು ಯಾವುದೇ ಸಡಿಲತೆಗಿಂತ ತ್ಯಾಗ, ಪರಿಶ್ರಮ ಮತ್ತು ದೀರ್ಘಾವಧಿಯ
ಕೆಲಸ ನಿರ್ವಹಿಸುವುದರಲ್ಲಿದೆ. ನಮ್ಮ ದೇಶವು ಜಾಗತೀಕ ಸ್ಪರ್ಧೆಯೊಂದಿಗೆ ಸಂಘರ್ಷವನ್ನು ನಡೆಸಬೇಕಾಗಿದೆ. ನಾನು ನನ್ನ ವೃತ್ತಿಯ ಆರಂಭದ ಗಳಿಗೆಯಲ್ಲಿ ದಿನವೊಂದಕ್ಕೆ 14 ಗಂಟೆಗಳ ಕೆಲಸ ನಿರ್ವಹಿಸುತ್ತಿದ್ದೆ. ಹಾಗೆಯೇ ವಾರದಲ್ಲಿ ಆರೂವರೆ ದಿನಗಳನ್ನು ಅರ್ಪಿಸಿಕೊಂಡಿದ್ದೆ. ನನ್ನ ವೃತ್ತಿಪರ ಬೆಳವಣಿಗೆಯಲ್ಲಿ ಈ ಬದ್ದತೆಯನ್ನು ತಗೆದುಕೊಂಡಿದ್ದಕ್ಕಾಗಿ ಹೆಮ್ಮೆಪಡುತ್ತೇನೆ. ಪ್ರತಿ ದಿನವು ನನ್ನ ಕಚೇರಿಗೆ ಬೆಳಗ್ಗೆ 6:30ಕ್ಕೆ ಆಗಮಿಸಿ, ರಾತ್ರಿ 8:30ಕ್ಕೆ
ನಿರ್ಗಮಿಸುತ್ತಿದ್ದೆ ಎಂದು ತಮ್ಮ ಈ ಹಿಂದಿನ ಕೆಲಸದ ದಿನಚರಿಯನ್ನು ನಾರಾಯಣ ಮೂರ್ತಿಯವರು ಮೆಲುಕು ಹಾಕಿದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...