Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ

ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ

’ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿಲ್ಲ. ನನ್ನೊಳಗೆ ಈ ಭಯವಿದೆ’

- Advertisement -
- Advertisement -

“ತೀರ್ಪಿನ ಬಗ್ಗೆ ಯೋಚಿಸದೆ ನಾನು, ನನ್ನ ಘನತೆಗಾಗಿ ಗಟ್ಟಿಯಾದ ಹೋರಾಟವನ್ನು ಮುಂದುವರೆಸುತ್ತೇನೆ” ಎಂದು ಐದು ವರ್ಷಗಳ ಹಿಂದಿನ ಕಹಿ ಘಟನೆ ಬಗ್ಗೆ ಸುದೀರ್ಘ ಮೌನ ಮುರಿದಿದ್ದಾರೆ ಬಹುಭಾಷಾ ನಟಿ ಭಾವನಾ ಮೇನನ್‌.

ಖಾಸಗಿ ಯೂಟ್ಯೂಬ್ ಚಾನೆಲ್‌ಗೆ ‘ದಿ ಮೋಜೋ ಸ್ಟೋರಿ’ ಯ ಕಾರ್ಯಕ್ರಮವಾದ ‘ದಿ ಗ್ಲೋಬಲ್ ಟೌನ್ ಹಾಲ್’ ನಲ್ಲಿ ನೇರ ಸಂದರ್ಶನ ನೀಡುವಾಗ, 2017ರ ಲೈಂಗಿಕ ದೌರ್ಜನ್ಯ ಪ್ರಕರಣದ ನಂತರ ತಾವು ಅನುಭವಿಸಿದ ಹಿಂಸೆ, ಅವಮಾನ, ಆಘಾತ, ಮಾನಸಿಕ ಕಿರುಕುಳಗಳ ಬಗ್ಗೆ 35 ವರ್ಷದ ನಟಿ ಭಾವನಾ ಮುಕ್ತವಾಗಿ ಮಾತನಾಡಿದ್ದಾರೆ.

ತಾನು ತನ್ನ ಘನತೆಯನ್ನು ಮರಳಿ ಪಡೆಯಲು ಬಯಸುತ್ತೇನೆ ಎಂದು ಹೇಳಿರುವ ಅವರು, ತನ್ನ ಪತಿ, ಕುಟುಂಬ ಸದಸ್ಯರು ಮತ್ತು ಸ್ನೇಹಿತರು, ತನಗಾಗಿ ಪ್ರತಿಭಟನೆಗಳನ್ನು ಮಾಡಿದ ಸಾರ್ವಜನಿಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.  ತನ್ನ ಸಂಪೂರ್ಣ ಇಚ್ಛಾಶಕ್ತಿಯೇ ತನ್ನನ್ನು ಮುಂದುವರಿಸಿಕೊಂಡು ಹೋಗುತ್ತಿದೆ ಎಂದಿದ್ದಾರೆ.

ಈ ಘಟನೆಯಿಂದಾಗಿ “ನನ್ನ ಘನತೆಯನ್ನು ಒಂದು ಮಿಲಿಯನ್ ತುಂಡುಗಳಾಗಿ ಮಾಡಲಾಗಿದೆ. ಕೆಲವೊಮ್ಮೆ ತಾನು ಅನುಭವಿಸಿದ್ದೆಲ್ಲ ದುಃಸ್ವಪ್ನ ಎಂದು ಭಾವಿಸಿದ ದಿನಗಳೂ ಇದ್ದವು. ಆದರೆ ಅದು ಹಾಗಲ್ಲ ಅದೆಲ್ಲವೂ ನಿಜ” ಎಂದಿದ್ದಾರೆ.

ಇದನ್ನೂ ಓದಿ: ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಿರೂಪಕಿ ಬರ್ಖಾ ದತ್ ಜೊತೆಗೆ ಮಾತನಾಡಿರುವ ನಟಿ, “ನಾನು ಇನ್ನೂ ಹೆದರುತ್ತಿದ್ದೇನೆ, ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿಲ್ಲ. ನನ್ನೊಳಗೆ ಈ ಭಯವಿದೆ. ಕೆಲವೊಮ್ಮೆ ನಾನು ನಿಜವಾಗಿಯೂ ದುಃಖಿತಳಾಗಿದ್ದೇನೆ, ಕೋಪಗೊಂಡಿದ್ದೇನೆ. ನನ್ನ ಸುತ್ತಲೂ ಬೆಂಬಲ ನೀಡುವವರು ಇದ್ದರೂ ಕೂಡ ನಾನು ಒಂಟಿತನವನ್ನು ಅನುಭವಿಸಿದೆ. ನಾನು 2020 ರಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ 15 ದಿನಗಳವರೆಗೆ ನ್ಯಾಯಾಲಯದಲ್ಲಿದ್ದೆ. ನ್ಯಾಯಾಲಯದಲ್ಲಿ ಸಮಯ ಕಳೆಯುವ ಪ್ರತಿ ಸೆಕೆಂಡಿಗೆ ನಾನು ನಿರಪರಾಧಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದೆ. ಏಳು ಮಂದಿ ವಕೀಲರು ನನ್ನನ್ನು ಪ್ರಶ್ನಿಸಲು ಪ್ರಯತ್ನಿಸುತ್ತಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಆ ಘಟನೆಯನ್ನು ನೆನಪಿಸುತ್ತಿದ್ದರು. ಆಗ ನಾನು ಏಕಾಂಗಿಯಾಗಿದ್ದೇನೆ ಎಂದು ನನಗೆ ಅನಿಸಿತ್ತು” ಎಂದು ನಟಿ ಭಾವನಾ ಭಾವುಕರಾಗಿದ್ದಾರೆ.

ಆಘಾತಕಾರಿ ಘಟನೆಯ ನಂತರ ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮದಲ್ಲಿ ತನ್ನ ವಿರುದ್ಧ ತಮ್ಮ ಟೀಕೆಗಳನ್ನು ಹೊರಹಾಕಿದ್ದನ್ನು ಭಾವನಾ ನೆನಪಿಸಿಕೊಂಡಿದ್ದಾರೆ. ಮಲಯಾಳಂ ಚಲನಚಿತ್ರಗಳಲ್ಲಿ ಪ್ರಧಾನವಾಗಿ ನಟಿಸುತ್ತಿದ್ದ ತಾನು ಈ ಆಘಾತದಿಂದಾಗಿ ತನ್ನ ವೃತ್ತಿಜೀವನದಿಂದ ಸುದೀರ್ಘ ವಿರಾಮವನ್ನು ತೆಗೆದುಕೊಂಡಿದ್ದು, ಆಶಿಕ್ ಅಬು, ಪೃಥ್ವಿರಾಜ್, ಜಯಸೂರ್ಯ ಮತ್ತು ಶಾಜಿ ಕೈಲಾಸ್ ಅವರ ಹಲವು ಸಿನಿಮಾಗಳ ಆಫರ್‌ಗಳನ್ನು ನಿರಾಕರಿಸಿದ ನಿದರ್ಶನಗಳಿವೆ ಎಂದು ಹೇಳಿದ್ದಾರೆ.

“ಮಲಯಾಳಂ ಬಿಟ್ಟು ಈಗ ನಾನು ಬೇರೆ ಚಿತ್ರರಂಗದಲ್ಲಿ ಕೆಲಸ ಮಾಡಲು ಆರಂಭಿಸಿದ್ದೇನೆ. ಘಟನೆಯಿಂದಾಗಿ ನಾನು ಬೇರೆ ಯಾವುದಾದರೂ ದೇಶದಲ್ಲಿ ನೆಲೆಯೂರಲು ಮತ್ತು ಹೊಸದಾಗಿ ಪ್ರಾರಂಭಿಸಲು ಬಯಸಿದ ದಿನಗಳಿವೆ. ಆಘಾತಕಾರಿ ಘಟನೆಯಿಂದ ಹೊರಬಂದು ಮೊದಲು ಸಾಮಾನ್ಯ ಸ್ಥಿತಿಗೆ ಬರಬೇಕು. ನಾನು ಅಂತಹ ಸ್ಥಿತಿಯಿಂದ ಹೊರಗೆ ಬರಲು ಐದು ವರ್ಷ ಬೇಕಾಯಿತು. ಪ್ರಪಂಚದಾದ್ಯಂತ ಅದೇ ಹಂತದಲ್ಲಿ ಇತರ ಮಹಿಳೆಯರು ಇದ್ದಾರೆ. ಅವರ ಅವಸ್ಥೆಯ ಬಗ್ಗೆ ನನಗೆ ತುಂಬಾ ಬೇಸರವಾಗುತ್ತದೆ. ನಾನು ಅವರಿಗೆ ತಿಳಿಸಲು ಬಯಸುವುದೇನೆಂದರೆ ಫಲಿತಾಂಶ ಏನಾಗಬಹುದು ಎಂಬುದರ ಕುರಿತು ಚಿಂತಿಸದೆ ನಾನು ಗಟ್ಟಿಯಾಗಿ ಹೋರಾಡುತ್ತೇನೆ ”ಎಂದು ನಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಟಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದರು. ಮಲಯಾಳಂ, ಬಾಲಿವುಡ್ ಚಿತ್ರರಂಗದ ಹಲವು ತಾರೆಯರು ನಟಿಗೆ ಬೆಂಬಲ ಸೂಚಿಸಿದ್ದರು.

 ಘಟನೆಯ ಹಿನ್ನೆಲೆ:

ಫೆಬ್ರವರಿ 17, 2017 ರಂದು ತ್ರಿಶೂರ್‌ನಿಂದ ಚಲನಚಿತ್ರವೊಂದರ ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನಟಿ ಭಾವನಾ ಅವರನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪಹರಿಸಲಾಗಿತ್ತು. ಒಂದು ಗ್ಯಾಂಗ್ ಆಕೆಯನ್ನು ಬಲವಂತವಾಗಿ ಕಾರನ್ನು ಹತ್ತಿಸಿ ಎರಡು ಗಂಟೆಗಳ ಕಾಲ ವಾಹನದೊಳಗೆ ಕಿರುಕುಳ ನೀಡಿತ್ತು. ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಪ್ರಮುಖ ಆರೋಪಿ ಎಂದು ಆರೋಪಿಸಲಾಗಿತ್ತು. ನಟಿ ನೀಡಿದ್ದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...